Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ...

ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ ಗ್ಯಾರಂಟಿ ಹೆಸರಲ್ಲಿ ಪ್ರಚಾರ ಮಾಡುತ್ತಿದ್ದಾರೆ: ಸಂಸದ ಡಿ.ಕೆ. ಸುರೇಶ್

ವಾರ್ತಾಭಾರತಿವಾರ್ತಾಭಾರತಿ11 Jan 2024 3:39 PM IST
share
ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ ಗ್ಯಾರಂಟಿ ಹೆಸರಲ್ಲಿ ಪ್ರಚಾರ ಮಾಡುತ್ತಿದ್ದಾರೆ: ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಜನರ ಸಮಸ್ಯೆಗಳಿಗೆ ಪರಿಹಾರ ಕೊಟ್ಟು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ ಇಂದು ಗ್ಯಾರಂಟಿ ಹೆಸರಲ್ಲಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜರಗನಹಳ್ಳಿ ಸರ್ಕಾರಿ ಶಾಲಾ ಮೈದಾನದಲ್ಲಿ ಗುರುವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಅರಿತು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಸರ್ಕಾರ ಬಂದ ನಂತರ ಕೊಟ್ಟ ಮಾತಿನಂತೆ ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ" ಎಂದರು.

ಈ ಯೋಜನೆಗಳು ಯಾವುದೇ ಜಾತಿ, ಧರ್ಮಕ್ಕೆ ಸೇರಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಾ ವರ್ಗದ ಜನರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ ಯೋಜನೆಗಳನ್ನು ಜಾರಿ ತರಲಾಗಿದೆ.

ಸರ್ಕಾರ ಈ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 58 ಸಾವಿರ ಕೋಟಿ ಅನುದಾನ ನೀಡುತ್ತಿದೆ. ಅಪಾರ್ಟ್‌ ಮೆಂಟ್ ನಿವಾಸಿಗಳು ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕಿಕೊಂಡಿದ್ದಾರೆ. ಅಂದರೆ ಅಪಾರ್ಟ್‌ ಮೆಂಟ್ ನಿವಾಸಿಗಳು ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ ಎಂಬುದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ಜನರ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ಬೆಂಗಳೂರಿಗೆ ಹೊಸ ಕಾಯಕಲ್ಪ ನೀಡಲು, ಸರ್ಕಾರ ಜನರ ಮನೆ ಬಾಗಿಲಿಗೆ ಬಂದು ಸ್ಥಳದಲ್ಲೇ ಜನರ ಸಮಸ್ಯೆಗೆ ಪರಿಹಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಬೆಂಗಳೂರು ಸಮಸ್ಯೆಗಳ ಸಾಗರವನ್ನು ಇಟ್ಟುಕೊಂಡಿದೆ. ಟ್ರಾಫಿಕ್, ರಸ್ತೆ ಗುಂಡಿ, 110 ಹಳ್ಳಿಗಳ ಮೂಲಸೌಕರ್ಯ, ಕೆರೆಗಳ ಪುನಶ್ಚೇತನ ಸೇರಿದಂತೆ ಅನೇಕ ಸಮಸ್ಯೆ ಇದೆ. ಈ ಅಹವಾಲು ಸ್ವೀಕಾರ ನಂತರ ಉಪಮುಖ್ಯಮಂತ್ರಿ ಗಳು ಸ್ಥಳಕ್ಕೆ ಭೇಟಿ ನೀಡಿ ಕಾನೂನಾತ್ಮಕ ಪರಿಹಾರ ನೀಡಬೇಕು. ಆಗ ಜನರ ಆಶೀರ್ವಾದದಿಂದ ಬಂದಿರುವ ಸರ್ಕಾರ ಯಶಸ್ಸು ಕಾಣಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X