ಕಾಲ್ತುಳಿತ ದುರಂತ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಮೂರು ಪಂದ್ಯ ಸ್ಥಳಾಂತರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರಂತದ ಪರಿಣಾಮ ನವೆಂಬರ್ 13ರಿಂದ 19ರವರೆಗೆ ಇಲ್ಲಿ ನಡೆಯಬೇಕಿದ್ದ ಕ್ರಿಕೆಟ್ ಪಂದ್ಯಗಳನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬೇರೆಡೆ ಸ್ಥಳಾಂತರ ಮಾಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನವೆಂಬರ್ 13ರಿಂದ 19ರ ವರೆಗೆ ಭಾರತ-ಎ ಮತ್ತು ದಕ್ಷಿಣ ಆಫ್ರಿಕಾ-ಎ ನಡುವಣ ಮೂರು ಏಕದಿನ ಪಂದ್ಯಗಳ ಆಯೋಜನೆ ಮಾಡಲಾಗಿತ್ತು. ಇದೀಗ ಈ ಪಂದ್ಯಗಳನ್ನು ಬೆಂಗಳೂರಿನಿಂದ ರಾಜ್ಕೋಟ್ಗೆ ಸ್ಥಳಾಂತರಿಸಿ ಬಿಸಿಸಿಐ ಪ್ರಕಟನೆ ನೀಡಿದೆ.
Next Story