Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಸೂರಿನಲ್ಲಿ ಟಿಪ್ಪು ಸುಲ್ತಾನ್‍ರ...

ಮೈಸೂರಿನಲ್ಲಿ ಟಿಪ್ಪು ಸುಲ್ತಾನ್‍ರ ಅಪರೂಪದ ಖಡ್ಗ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ11 March 2025 10:32 PM IST
share
ಮೈಸೂರಿನಲ್ಲಿ ಟಿಪ್ಪು ಸುಲ್ತಾನ್‍ರ ಅಪರೂಪದ ಖಡ್ಗ ಪತ್ತೆ!

ಬೆಂಗಳೂರು: ಮೈಸೂರು ಹುಲಿ ಟಿಪ್ಪು ಸುಲ್ತಾನ್ ತನ್ನ ಆತ್ಮರಕ್ಷಣೆಗಾಗಿ ಬಳಸುತ್ತಿದ್ದ ಅತಿ ಅಪರೂಪದ ಖಡ್ಗ ಮೈಸೂರಿನಲ್ಲಿ ಪತ್ತೆಯಾಗಿದ್ದು, ಟಿಪ್ಪು ಸುಲ್ತಾನ್ ಅವರ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿದ್ದ ಕೆಲ ಖಡ್ಗಗಳ ಪೈಕಿ ಈ ಖಡ್ಗ ಬಹಳ ವಿಶೇಷತೆ ಹೊಂದಿದೆ.

ಖಡ್ಗದ ಮೇಲೆ ಪಾರ್ಸಿ ಭಾಷೆಯಲ್ಲಿ ಚಿನ್ನದ ಬಣ್ಣ ಇರುವ ಟಿಪ್ಪು ಸುಲ್ತಾನ್ ಹೆಸರು ಇದೆ. ಚಂದ್ರದ ಚಿಹ್ನೆಗಳಿವೆ. ತಾಮ್ರದ ಹಿಡಿಯ ಮೇಲೆ ಚಿನ್ನದ ಲೇಪನ ಇದೆ. ಖಡ್ಗವು 10.16*91.44 ಸೆ.ಮೀ. ಎತ್ತರ ಮತ್ತು ಅಗಲ ಇದೆ. ಹಿಂದಿನ ಕಾಲದಲ್ಲಿ ಸ್ಥಳಿಯ ತಂತ್ರಜ್ಞಾನದೊಂದಿಗೆ ವಿಶೇಷ ಸ್ಟೀಲ್‍ನಿಂದ ತಯಾರಿಸಲಾಗಿದೆ. ತನ್ನ ಆತ್ಮರಕ್ಷಣೆಗಾಗಿ ಮಾತ್ರ ಈ ಖಡ್ಗವನ್ನು ಟಿಪ್ಪು ಸುಲ್ತಾನ್ ಬಳಸುತ್ತಿದ್ದರು. ಇದು ಚಾರಿತ್ರಿಕ ಹಿನ್ನೆಲೆ ಹೊಂದಿದೆ.

ಪುರತತ್ವಶಾಸ್ತ್ರದ ಇಲಾಖೆಯಿಂದ ಪುರಾತನ ವಸ್ತುಗಳನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಪರವಾನಗಿ ಹೊಂದಿರುವ ಖಾಸಗಿ ಸಂಸ್ಥೆಯೊಂದು, ರಾಜವಂಶಸ್ಥರಿಂದ ಖಡ್ಗವನ್ನು ಖರೀದಿಸಿ ಸಂರಕ್ಷಿಸಿ ಇಟ್ಟುಕೊಂಡಿದೆ. ರಾಜ್ಯ ಪುರಾತತ್ವ ಮತ್ತು ವಸ್ತು ಸಂಗ್ರಹಾಲಯ ಇಲಾಖೆ, ಇದನ್ನು ಪರಿಶೀಲಿಸಿ ಅಪರೂಪವಾದ ಖಡ್ಗವೆಂದು ತಿಳಿಸಿ ನೋಂದಾಯಿಸಿ ಪ್ರಮಾಣ ಪತ್ರ ನೀಡಿದೆ.

ಬ್ರಿಟಿಷ್ ಸಂಗ್ರಹಾಲಯ ಸೇರಿ ಇತರೆ ಕಡೆ ದೊರೆತಿರುವ ಟಿಪ್ಪುವಿನ ಖಡ್ಗದ ಮೇಲೆ ಕು‌ರ್‌ ಆನ್ ವಾಕ್ಯಗಳು ಮಾತ್ರ ಇದೆ. ಆದರೆ, ಟಿಪ್ಪುವಿನ ಹೆಸರು ಇರುವುದಿಲ್ಲ. ಆದರೆ, ಈ ಖಡ್ಗದ ಮೇಲೆ ಟಿಪ್ಪು ಸುಲ್ತಾನ್ ಹೆಸರು ಇದೆ. ಕೆಲ ಸಂದರ್ಭಗಳಲ್ಲಿ ಆತ್ಮ ರಕ್ಷಣೆಗಾಗಿ ತನ್ನ ಜೊತೆಯಲ್ಲಿ ಟಿಪ್ಪು ಇಟ್ಟುಕೊಳ್ಳುತ್ತಿದ್ದರು. ಐತಿಹಾಸಿಕ ಖಡ್ಗವನ್ನು ರಾಜ್ಯ ಸರ್ಕಾರ ಖರೀದಿಸಿ ವಸ್ತು ಸಂಗ್ರಹಾಲಯದಲ್ಲಿ ಇಡಬೇಕು ಎಂಬುದು ಇತಿಹಾಸ ತಜ್ಞರ ಸಲಹೆಯಾಗಿದೆ.

1799ರಲ್ಲಿ 4ನೆ ಆಂಗ್ಲೋ-ಮೈಸೂರು ಯುದ್ಧದಲ್ಲಿ ಟಿಪ್ಪು ಸುಲ್ತಾನ್ ಮರಣ ಹೊಂದಿದಾಗ ಖಡ್ಗವು ದಿವಾನ್ ಪೂರ್ಣಯ್ಯ ಅವರಿಗೆ ಸಿಕ್ಕಿತ್ತು. ನಂತರ, ದಿವಾನ್ ಪೂರ್ಣಯ್ಯನಿಂದ ರಾಜವಂಶಸ್ಥರ ಬಳಿ ಬಂದಿರಬಹುದು ಎನ್ನಲಾಗಿದೆ.

ಈ ಕುರಿತು ಇತಿಹಾಸ ಸಂಶೋಧಕ ಡಾ.ಬಿ.ರಾಮಾಚಾರಿ ಪ್ರತಿಕ್ರಿಯಿಸಿ, ಪುರಾತನ ವಸ್ತುಗಳನ್ನು ಖರೀದಿಸುವ ಮತ್ತು ಮಾರಾಟದ ಪರವಾನಗಿ ಹೊಂದಿರುವ ಖಾಸಗಿ ಸಂಸ್ಥೆಯೊಂದು 12 ವರ್ಷದ ಹಿಂದೆ ರಾಜವಂಶ್ಥರೊಬ್ಬರಿಂದ ಕಾನೂನಾತ್ಮಕವಾಗಿ ಖಡ್ಗವನ್ನು ಖರೀದಿಸಿದೆ. ಇತಿಹಾಸ ತಜ್ಞರು, ಮುಸ್ಲಿಮ್ ಪಂಡಿತರು, ಪುರಾತತ್ವ ಇಲಾಖೆ ಅಧಿಕಾರಿಗಳು ಇದನ್ನು ಪರಿಶೀಲಿಸಿ ಅಪರೂಪದ ಖಡ್ಗವಾಗಿದ್ದು, ಸರಕಾರಕ್ಕೆ ನೀಡಬೇಕೆಂದು ಎನ್ನುತ್ತಿದ್ದಾರೆ. ಹಾಗಾಗಿ, ವಸ್ತು ಸಂಗ್ರಹಾಲಯದಲ್ಲಿ ಖಡ್ಗವನ್ನು ಇಡಬೇಕು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X