Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿದ್ದಗಂಗಾ ಮಠಾಧೀಶರಿಂದ ʼನನ್ನ ಅರಿವಿನ...

ಸಿದ್ದಗಂಗಾ ಮಠಾಧೀಶರಿಂದ ʼನನ್ನ ಅರಿವಿನ ಪ್ರವಾದಿʼ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 Sept 2023 7:14 PM IST
share
ಸಿದ್ದಗಂಗಾ ಮಠಾಧೀಶರಿಂದ ʼನನ್ನ ಅರಿವಿನ ಪ್ರವಾದಿʼ ಪುಸ್ತಕ ಬಿಡುಗಡೆ

ತುಮಕೂರು.ಸೆ.28: ʼʼಭಾರತ ಸಾಧು ಸಂತರ ನಾಡು ,ದೇಶಕ್ಕೆ ಮಾರ್ಗದರ್ಶನ ನೀಡಿದ ಮಹನೀಯರಲ್ಲಿ ಕೊನೆಯ ಪ್ರವಾದಿ ಮುಹಮ್ಮದ್ ಪೈಗಂಬರರು ಒಬ್ಬರು, ʼನನ್ನ ಅರಿವಿನ ಪ್ರವಾದಿʼ ಎಂಬ ಪುಸ್ತಕದ ಮೂಲಕ ಅವರನ್ನು ಜನರಿಗೆ ಪರಿಚಯಿಸುವ ಕೆಲಸವನ್ನು ಯೋಗೀಶ್ ಮಾಸ್ಟರ್ ಮಾಡಿರುವುದು ಸಂತೋಷ ಪಡುವಂತಹ ವಿಚಾರʼʼ ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀಶ್ರೀ ಸಿದ್ದಲಿಂಗಸ್ವಾಮೀಜಿ ತಿಳಿಸಿದ್ದಾರೆ.

ಬುಧವಾರ ಶ್ರೀಸಿದ್ದಗಂಗಾ ಮಠದಲ್ಲಿ ಜಮಾ -ಅತೆ ಇಸ್ಲಾಮಿ ಹಿಂದ್ ವತಿಯಿಂದ ಮಂಗಳೂರಿನ ಶಾಂತಿ ಪ್ರಕಾಶನ ಹೊರತಂದಿರುವ ನನ್ನ ಅರಿವಿನ ಪ್ರವಾದಿ ಎಂಬ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಇಡೀ ಪ್ರಪಂಚದಲ್ಲಿಯೇ ಎಲ್ಲಾ ಧರ್ಮಗಳ ಜನರು ಇರುವ ಏಕೈಕ ರಾಷ್ಟ್ರವೆಂದರೆ ಅದು ಭಾರತ ಮಾತ್ರ. ಇಲ್ಲಿ ಹಿಂದು,ಮುಸ್ಲಿಂ, ಕ್ರಿಶ್ಚಿಯನ್,ಬೌದ್ದ, ಜೈನ, ಪಾರ್ಸಿ ಹೀಗೆ ಎಲ್ಲ ಧರ್ಮದ ಜನರು ಸಾವಿರಾರು ವರ್ಷಗಳ ಕಾಲದಿಂದಲೂ ಅಣ್ಣ ತಮ್ಮಂದಿರಂತೆ ಬದುಕುತಿದ್ದಾರೆ ಎಂದರು.

ನನ್ನ ಅರಿವಿನ ಪ್ರವಾದಿ ಪುಸ್ತಕದ ಮೂಲಕ ಸಾಹಿತಿ, ಅಂಕಣಕಾರ, ರಂಗಭೂಮಿಯಲ್ಲಿಯೂ ತೊಡಗಿಸಿಕೊಂಡಿರುವ ಯೋಗೀಶ್ ಮಾಸ್ಟರ್,ಬಸವಣ್ಣ ವಚನ,ಜೈನ ಉಕ್ತಿಗಳನ್ನು ಉಲ್ಲೇಖಸಿ, ಮುಹಮ್ಮದ್ ಪೈಗಂಬರ ಭೋಧನೆಗಳನ್ನು ಪರಿಚಯಿಸಿ ದ್ದಾರೆ.ಯಾವ ಧರ್ಮವೂ ಜಗತ್ತಿಗೆ ಹಿಂಸೆಯನ್ನು ಬೋಧಿಸಿಲ್ಲ ಮತ್ತು ಪ್ರೋತ್ಸಾಹಿಸುವುದು ಇಲ್ಲ ಎಂಬುದನ್ನು ಈ ಪುಸ್ತಕದ ಮೂಲಕ ಅರಿಯಬಹುದಾಗಿದೆ ಎಂದು ಶ್ರೀಸಿದ್ದಲಿಂಗಸ್ವಾಮೀಜಿ ಬಣ್ಣಿಸಿದರು.

ಶಾಂತಿ ಪ್ರಕಾಶನ ಕನ್ನಡದಲ್ಲಿ ಮುಹಮ್ಮದ್ ಪೈಗಂಬರರ ಪ್ರವಚನಗಳನ್ನು ಹೊರ ತರುವ ಮೂಲಕ ಸಮಾಜದಲ್ಲಿ ಸೌಹಾರ್ದ ಮೂಡಿಸಲು ಹೊರಟಿದೆ. ಅಕ್ಬರ್ ಆಲಿ ಉಡುಪಿ ರವರು ಕನ್ನಡದಲ್ಲಿಯೇ ಪ್ರವಚನ ನೀಡಿ, ಧರ್ಮ,ಧರ್ಮಗಳ ನಡುವಿನ ದ್ವೇಷ ಭಾವನೆಯನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ. ಶಾಂತಿ ಪ್ರಕಾಶನದ 270ನೇ ಪುಷ್ಪಗ್ರಂಥ ಇದಾಗಿದೆ. ಇದು ಹೆಚ್ಚು ಜನರನ್ನು ತಲುಪಿ,ಜನರಲ್ಲಿ ದ್ವೇಷ, ಅಸೂಯೆಗಳು ಅಳಿಸಿ, ವಿಶ್ವಶಾಂತಿ ನೆಲೆಸಲು ಸಹಕಾರವಾಗಲಿ ಎಂದು ಶುಭ ಹಾರೈಸಿದರು.

ಶಾಂತಿ ಪ್ರಕಾಶನದ ಪರವಾಗಿ ಮಾತನಾಡಿದ ಅಕ್ಬರ ಆಲಿ ಉಡುಪಿ, ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಮಹಮದ್ ಪೈಗಂಬರ್‍ರ ಭೋಧನೆಗಳನ್ನು ಜೈನ, ಬೌಧ್ಧ,ಲಿಂಗಾಯಿತ ಧರ್ಮದ ಉಕ್ತಿಗಳ ಜೊತೆಗೆ ತುಲನೆ ಮಾಡಿ ವಾಸ್ತವವನ್ನು ಜನತೆಗೆ ತಿಳಿಸುವ ಕೆಲಸವನ್ನು ಶಾಂತಿ ಪ್ರಕಾಶನ ಮಾಡುತ್ತಿದೆ.ಕನ್ನಡ ಸಾಹಿತ್ಯಕ್ಕೆ ಆ ಮೂಲಕ ಒಳ್ಳೆಯ ಕೊಡುಗೆಯನ್ನು ನೀಡುತ್ತಿದೆ.ನನ್ನ ಅರಿವಿನ ಪ್ರವಾದಿ ಜನರ ನಡುವಿನ ಗೋಡೆಯನ್ನು ಕೆಡವಿ ಸೌಹಾರ್ಧ ಸೇತುವೆಯನ್ನು ನಿರ್ಮಿಸುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ಜಮಾ -ಅತೆ ಇಸ್ಲಾಮಿ ಹಿಂದ್‍ನ ತುಮಕೂರು ಜಿಲ್ಲಾಧ್ಯಕ್ಷ ಅಬ್ದುಲ್ ಜಬ್ಬಾರ್, ಸ್ಥಾನಿಕ ಅಧ್ಯಕ್ಷ ಅಸಾದುಲ್ಲಾ ಖಾನ್,ಮುಖಂಡರಾದ ನೌಶಾದ್ ಅನ್ಸರ್ ಪಾಷಾ, ಅನ್ಸಾರ್ ಅಹ್ಮದ್, ತಮೀಜುದ್ದೀನ್,ತಾಜುದ್ದೀನ್ ಷರೀಫ್, ಹನೀಫ್‍ವುಲ್ಲಾ,ಮೌಲಾನ ಖಾಲಿದ್ ನದ್ವಿ, ಇಮಾಮ್ ಬೇಗ್, ಬಾಬು ಅಹಮದ್ ಖಾನ್ ಮತಿತ್ತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X