ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯ ಆಯುಕ್ತೆಯಾಗಿ ಹಾಗೂ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ(ಬಜೆಟ್ ಮತ್ತು ಸಂಪನ್ಮೂಳ) ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಆರ್ಥಿಕ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ-3 ಡಾ.ಗೋಪಾಲ್ ಕೃಷ್ಣ ಬಿ. ಅವರನ್ನು ಆರ್ಥಿಕ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ(ಬಜೆಟ್ ಮತ್ತು ಸಂಪನ್ಮೂಲ)ಯಾಗಿ ಹಾಗೂ ಹಾವೇರಿ ಜಿಲ್ಲಾ ಪಂಚಾಯತಿಯ ಸಿಇಒ ರುಚಿ ಬಂದಲ್ ಅವರನ್ನು ಆರ್ಥಿಕ ಇಲಾಖೆಯ ಸರಕಾರದ ಉಪ ಕಾರ್ಯದರ್ಶಿ-3 ಎಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story




