Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಹಾರ ಸುರಕ್ಷತೆ ತಪಾಸಣೆಗೆ ಎರಡು ದಿನಗಳ...

ಆಹಾರ ಸುರಕ್ಷತೆ ತಪಾಸಣೆಗೆ ಎರಡು ದಿನಗಳ ಆಂದೋಲನ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ28 Aug 2024 9:27 PM IST
share
ಆಹಾರ ಸುರಕ್ಷತೆ ತಪಾಸಣೆಗೆ ಎರಡು ದಿನಗಳ ಆಂದೋಲನ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆಹಾರ ಸುರಕ್ಷತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಅಸುರಕ್ಷಿತ ಆಹಾರವನ್ನು ತಡೆಗಟ್ಟಲು ಆಹಾರ ಸುರಕ್ಷತಾ ಇಲಾಖೆಯ ವತಿಯಿಂದ ಎರಡು ದಿನಗಳ ತಪಾಸಣೆ ಆಂದೋಲನ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸತತವಾಗಿ ಆಹಾರ ಗುಣಮಟ್ಟ ಪರೀಕ್ಷಿಸುವ ಕಾರ್ಯವನ್ನು ಆಹಾರ ಸುರಕ್ಷತಾ ಇಲಾಖೆ ಕಳೆದ ಒಂದು ವರ್ಷದಿಂದ ನಡೆಸಿಕೊಂಡು ಬರುತ್ತಿದೆ. ಉತ್ತಮ ಗುಣಮಟ್ಟದ ಆಹಾರ ಸೇವೆನೆ ಉತ್ತಮ ಆರೋಗ್ಯಕ್ಕೆ ನಾಂದಿ. ಹೀಗಾಗಿ ಆಹಾರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಇದೇ ತಿಂಗಳ 30 ಮತ್ತು 31 ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿರುವ ಹೊಟೆಲ್ ರೆಸ್ಟೋರೆಂಟ್‍ಗಳಲ್ಲಿ ಆಹಾರ ಸುರಕ್ಷತೆ ಬಗ್ಗೆ ವಿಶೇಷ ತಪಾಸಣೆ ನಡೆಸಲಾಗುವುದು. ಅಲ್ಲದೇ ಮಾಂಸ, ಮೀನು, ಮೊಟ್ಟೆ ಆಹಾರ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆ ನಡೆಸಲಾಗುವುದು ಎಂದು ತಿಳಿಸಿದರು.

ಈ ರೀತಿಯ ತಪಾಸಣೆಗಳಿಂದ ಸಾರ್ವಜನಿಕರಲ್ಲಿ ಆಹಾರ ಸುರಕ್ಷತೆ ಬಗ್ಗೆ ಹೆಚ್ಚು ಜಾಗೃತಿ ಮೂಡಲಿದೆ. ಜನರನ್ನ ಎಚ್ಚರಿಸುವುದು ನಮ್ಮ ಮುಖ್ಯ ಉದ್ದೇಶ. ಜೊತೆಗೆ ಅಸುರಕ್ಷಿತ ಆಹಾರವನ್ನ ತಯಾರಿಸುತ್ತಿರುವ ಉದ್ದಿಮೆದಾರರ ಮೇಲೂ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು.

ಅಲ್ಲದೇ ಸಾರ್ವಜನಿಕರು ತಾವು ಸೇವಿಸುವ ಆಹಾರದ ಗುಣಮಟ್ಟವನ್ನ ತಾವೇ ಪರಿಕ್ಷಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಹೊಟೆಲ್ ರೆಸ್ಟೊರೆಂಟ್, ಫುಡ್ ಪಾರ್ಕ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 3400 ಟೆಸ್ಟಿಂಗ್ ಕಿಟ್ ಗಳನ್ನ ಅಳವಡಿಸಲು ನಿರ್ಧರಿಸಲಾಗಿದೆ. ಈಗಾಗಲೇ ಒಂದು ಸಾವಿರ ಕಿಟ್ ಗಳು ಬಂದಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿವೆ ಎಂದು ಅವರು ಹೇಳಿದರು.

ಹಣ್ಣು ಮತ್ತು ತರಕಾರಿಗಳ 385 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು, ವಿಶ್ಲೇಷಿಸಲಾದ 266 ಮಾದರಿಗಳಲ್ಲಿ 239 ಮಾದರಿಗಳು ಸುರಕ್ಷಿತ ಎಂದು ಮತ್ತು 27 ಮಾದರಿಗಳು ಕ್ರಿಮಿನಾಶಕಗಳ ಶೇಷಾಂಶಗಳು ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಮತ್ತು Fungus growth ಕಂಡುಬಂದಿರುವುದರಿಂದ ಅಸುರಕ್ಷಿತ ಎಂದು ವರದಿಯಾಗಿರುತ್ತವೆ ಎಂದು ಅವರು ಹೇಳಿದರು.

211 ಪನ್ನೀರ್, 246 ಕೇಕ್, 67 ಕೋವಾದ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿದ್ದು, ವಿಶ್ಲೇಷಣಾ ವರದಿಗಳು ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಇಲಾಖೆಯಿಂದ ಎಪ್ರಿಲ್-2024 ರಿಂದ ಇದುವರೆಗೆ 8418 ಸರ್ವೆ ಆಹಾರ ಮಾದರಿಗಳನ್ನು ಮತ್ತು 2593 ಕಾನೂನಾತ್ಮಕ ಆಹಾರ ಮಾದರಿಗಳನ್ನು ಜುಲೈ-24 ಒಳಗೊಂಡಂತೆ) ಹಾಗೂ ಜುಲೈ-2024ರ ಮಾಹೆಯಲ್ಲಿಯೇ 2753 ಸರ್ವೆ ಆಹಾರ ಮಾದರಿಗಳನ್ನು ಮತ್ತು 711 ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದು ಹೇಳಿದರು.

ಇದುವರೆಗೆ ರಾಜ್ಯಾದ್ಯಂತ 106 ಪ್ರಕರಣಗಳು ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದ್ದು, 34 ಪ್ರಕರಣಗಳಲ್ಲಿ 1 ದಿನದ ಜೈಲು ಶಿಕ್ಷೆಯನ್ನು 5 ಪ್ರಕರಣಗಳಲ್ಲಿ 5, 10, 30, 45 ಮತ್ತು 60 ದಿನಗಳ ಜೈಲು ಶಿಕ್ಷೆಯನ್ನು (ತಲಾ 1 ಪ್ರಕರಣ), 4 ಪ್ರಕರಣಗಳಲ್ಲಿ 90 ದಿನದ ಜೈಲು ಶಿಕ್ಷೆಯನ್ನು ಮತ್ತು 2 ಪ್ರಕಣಗಳಲ್ಲಿ 6 ತಿಂಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ವಿಧಿಸಲಾಗಿರುತ್ತದೆ. ಇದಲ್ಲದೆ 18 ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡವನ್ನು ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಇಲಾಖೆಯ ಎಲ್ಲ ಆಹಾರ ಸುರಕ್ಷತಾಧಿಕಾರಿಗಳಿಗೆ ಆನ್‍ಲೈನ್ ಮೂಲಕ ಸಲ್ಲಿಕೆಯಾಗುವ ಪರವಾನಿಗೆ/ನೊಂದಣಿ ಅರ್ಜಿಗಳನ್ನು ಶೀಘ್ರಗತಿಯಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗುವಂತೆ ಮತ್ತು ತಪಾಸಣೆಯ ವಿವರಗಳನ್ನು ಆನ್‍ಲೈನ್ ಪೋರ್ಟಲ್‍ನಲ್ಲಿ ದಾಖಲಿಸಲು ಟ್ಯಾಬ್‍ಗಳನ್ನು ವಿತರಿಸಲಾಯಿತು.

ಆಹಾರ ಉದ್ದಿಮೆದಾರರಿಗೆ ಪರವಾನಿಗೆ ನೀಡಲು ರಾಜ್ಯಕ್ಕೆ 10,68,95 ಗುರಿ ನೀಡಲಾಗಿದ್ದು, ಶೇ.68 ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದ ಆಹಾರ ಉದ್ದಿಮೆದಾರರು ನೊಂದಾಯಿಸಿಕೊಂಡು ಪರವಾನಿಗೆ ಪಡೆಯಬೇಕು. ಪರವಾನಿಗೆ ಪಡೆಯದೇ ಇದ್ದರೆ ಕಾನೂನು ಕ್ರಮವಹಿಸಲಾಗುವುದು.

- ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X