Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು...

ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು ಪ್ರವಾಸೋದ್ಯಮಕ್ಕೆ ಬಳಕೆ : ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ18 Aug 2026 3:28 PM IST
share
ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು ಪ್ರವಾಸೋದ್ಯಮಕ್ಕೆ ಬಳಕೆ : ಸಿಎಂ ಡಿ.ಕೆ.ಶಿವಕುಮಾರ್
► "ಇದಕ್ಕಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುತ್ತಿದ್ದೇವೆ" ► "ಬಿಡದಿ ಟೌನ್‌ಶಿಪ್ ಯೋಜನೆ ಬಗ್ಗೆ ಚರ್ಚೆ ಮಾಡೋಣ"

ಬೆಂಗಳೂರು: "ಪ್ರಧಾನಿಗಳು ದೇಶವನ್ನು ಆರ್ಥಿಕ ಶಕ್ತಿಯನ್ನಾಗಿಸಬೇಕು ಅಂದರೆ, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಒಗ್ಗಟ್ಟಾಗಿದ್ದರೆ ಮಾತ್ರ ಸಾಧ್ಯ. ನಮ್ಮಲ್ಲಿರುವ ಪ್ರತಿಭಾ ಸಾಮರ್ಥ್ಯ ಅಸಮಾನ್ಯ" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಉಪಸಭಾಧ್ಯಕ್ಷರ ಆಯ್ಕೆಯ ನಂತರ ವಿಧಾನಸಭೆಯಲ್ಲಿ ಸಿಎಂ ಮಂಗಳವಾರ ಮಾತನಾಡಿದರು.

"ಪ್ರಧಾನಿಗಳು ಮೈಸೂರಿಗೆ ಬಂದಿದ್ದಾಗ. ಅವರ ಬಳಿ, ರಾಜ್ಯದ ಹಿತಕ್ಕಾಗಿ ಏನೇನು ಕೆಲಸ ಆಗಬೇಕು ಎನ್ನುವುದನ್ನ ಹೇಳಿದ್ದೇನೆ. ಇತಿಹಾಸದಲ್ಲಿ ಏನೇನೆಲ್ಲಾ ಆಗಿದೆ ಎನ್ನುವುದನ್ನು ಅವರ ಗಮನಕ್ಕೆ ತಂದಿದ್ದೇನೆ. ನಮ್ಮಲ್ಲಿರುವ ಟ್ಯಾಟೆಂಲ್ ಪೂಲ್ ಬಗ್ಗೆ, ಅದರ ಶಕ್ತಿಯ ಬಗ್ಗೆ ಅವರ ಗಮನ ಸೆಳೆದಿದ್ದೇನೆ" ಎಂದರು.

"ಅಧಿಕಾರ ಯಾವತ್ತಿಗೂ ಶಾಶ್ವತ ಅಲ್ಲ ಅನ್ನೋ ಸತ್ಯ ನನಗೆ ತಿಳಿದಿದೆ. ನನ್ನ ಪಾಲಿಗೆ ದೊರೆತ ಸ್ಥಾನಕ್ಕೆ ಗೌರವ ಸಲ್ಲಿಸುತ್ತಾ ಬಂದಿದ್ದರಿಂದ ಇವತ್ತು ಈ ಸ್ಥಾನದಲ್ಲಿ ಕುಳಿತಿದ್ದೇನೆ. ನನ್ನ ಹೃದಯ ನಿಷ್ಕಲ್ಮಶವಾಗಿದೆ. ಮನಸ್ಸಿನಲ್ಲಿ ಯಾವುದೇ ದ್ವೇಷಾಸೂಯೆಗಳು ಇಲ್ಲದೆ ಈ ನಾಡಿನ ಜನರ ಸೇವೆ ಮಾಡಬೇಕು ಅಂತ ಸಂಕಲ್ಪ ಮಾಡಿದ್ದೇನೆ" ಎಂದರು.

"ರಾಜಕೀಯದಲ್ಲಿ ಅಧಿಕಾರ ದುರಪಯೋಗ ಆಗಬಾರದು. ರಾಜ್ಯದ ಹಿತಾಸಕ್ತಿಗೆ ಎಲ್ಲರೂ ಬಹಳ ಮುಖ್ಯ. ವಿರೋಧ ಪಕ್ಷಗಳ ಟೀಕೆ, ಟಿಪ್ಪಣಿಗಳು, ನಮ್ಮವರ ಸಲಹೆಗಳು ಎಲ್ಲವೂ ಬೇಕು. ನಾವೆಲ್ಲ ಸೇರಿ ಈ ರಾಜ್ಯದ ಹಿತಾಸಕ್ತಿಯಾಗಿ ಕೆಲಸ ಮಾಡೋಣ. ಇಬ್ಬರ ಉದ್ದೇಶ ಒಂದೇ. ಜನಸೇವೆ" ಎಂದರು.

ಬಿಡದಿ ಟೌನ್ ಶಿಪ್ ಚರ್ಚೆ ಮಾಡೋಣ :

"ಬಿಡದಿ ವಿಚಾರದಲ್ಲಿ ಚರ್ಚೆ ಮಾಡೋಣ ಅಂತ ಹೇಳಿದ್ದೀರಿ. ಸಂತೋಷ. ತೊಂದರೆ ಕೊಡುವ ಜಾಯಮಾನ ನನ್ನದಲ್ಲ. ಕುಮಾರಸ್ವಾಮಿ ಅವರ ಆವತ್ತಿನ ಬಿಡದಿ ಟೌನ್ ಶಿಪ್ ನಿರ್ಧಾರನ್ನು ನಾನು ಒಪ್ಪಿದ್ದೆ. 2028ಕ್ಕೆ ಜನ ಏನು ತೀರ್ಮಾನ ಮಾಡುತ್ತಾರೋ ಅದನ್ನು ನೀವು, ನಾವು ಇಬ್ಬರೂ ಒಪ್ಪಿಕೊಳ್ಳಬೇಕು. ಇಡೀ ದೇಶದಲ್ಲಿ ಸಮಸ್ಯೆಗಳು ಬೇಕಾದಷ್ಟು ಇವೆ. ನಾವು ಟೀಮ್ ಕರ್ನಾಟಕವಾಗಿ ಅದರ ಪರಿಹಾರಕ್ಕಾಗಿ ಒಟ್ಟಾಗಿ ಹೋರಾಟ ಮಾಡೋಣ" ಎಂದರು.

ಕುಮಾರಸ್ವಾಮಿ ಬಿಡದಿ ಸೇರಿದಂತೆ ಐದು ಟೌನ್ ಶಿಪ್ ಮಾಡಲು ಮುಂದಾದರು. ಅವರ ಆಲೋಚನೆ ತಪ್ಪಲ್ಲ. ಆದರೆ ಅದನ್ನು ಮಾಡಲು ಯಾಕೆ ಸಾಧ್ಯವಾಗಲಿಲ್ಲ. ಮಹಾರಾಷ್ಟ್ರ ಸಿಎಂ 80 ಸಾವಿರ ಎಕರೆ ಭೂಸ್ವಾಧೀನ ಮಾಡಿದ್ದಾರೆ. ಮೋದಿ ಅವರು ಗಿಫ್ಟ್ ಸಿಟಿ ಮಾಡುತ್ತಿದ್ದಾರೆ. ನಮಗೂ ನೀಡಿ ಎಂದು ಕೇಳಿದೆ, ಕೊಡಲಿಲ್ಲ. ಆಂಧ್ರ ಸಿಎಂ ಕೂಡ ಹೊಸ ನಗರ ನಿರ್ಮಿಸುತ್ತಿದ್ದಾರೆ. ನಮ್ಮಲ್ಲಿ ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ಕೂಡ ರೈತರ ಜಮೀನು. ಪೆರಿಫರಲ್ ರಿಂಗ್ ರಸ್ತೆ ಕೂಡ ರೈತರ ಜಮೀನು. ಈ ಯೋಜನೆಗಳು ದೂರದೃಷ್ಟಿ ಯೋಜನೆಗಳು. ನೈಸ್ ರಸ್ತೆ ಇಲ್ಲವಾಗಿದ್ದರೆ ಬೆಂಗಳೂರು ನಗರ ಸಂಚಾರ ಪರಿಸ್ಥಿತಿ ಏನಾಗುತ್ತಿತ್ತು ನೀವೇ ಹೇಳಿ. ಯೋಜನೆ ಲೋಪದೋಷ ವಿರುದ್ಧ ಕ್ರಮ ಕೈಗೊಳ್ಳೋಣ" ಎಂದರು.

"ಇಡೀ ದೇಶದಲ್ಲಿ ರಾಜಸ್ಥಾನ ಬಳಿಕ ಅತಿ ಹೆಚ್ಚು ಒಣ ಭೂಮಿ ಇರುವ ರಾಜ್ಯ ಕರ್ನಾಟಕ. ನಾವು ರೈತರ ಬಗ್ಗೆ ಆಲೋಚನೆ ಮಾಡಬೇಕು, ಅವರನ್ನು ಬದುಕಿಸಬೇಕು. ಹೀಗಾಗಿ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ರೈತರಿಗೆ ಮಾರ್ಗದರ್ಶನ ನೀಡಲು ಮುಂದಾಗಿದ್ದೇವೆ. ಬೆಂಗಳೂರಿನ ನಗರ ವಿದ್ಯಾರ್ಥಿಗಳಿಗೆ ಹಳ್ಳಿ, ರೈತನ ಬದುಕು ಪರಿಚಯಿಸಬೇಕು ಎಂದು ಕೃಷಿ ವಿವಿಗೆ ಹೇಳಿ 3 ದಿನ ಪ್ರವಾಸದ ಪಠ್ಯಕ್ರಮ ಕಾರ್ಯಕ್ರಮ ಏರ್ಪಡಿಸಲಾಗುವುದು" ಎಂದು ತಿಳಿಸಿದರು.

ಬೆಂಗಳೂರಿಗೆ ನೀರು ಬೇಕು :

"ಬೆಂಗಳೂರಿಗೆ ನೀರು ಒದಗಿಸುವುದು ಸವಾಲಿನ ಕೆಲಸ. ಅದನ್ನು ನಾವು ಮಾಡುತ್ತಿದ್ದೇವೆ. ಹಿಂದೆ ನಾನು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಹೆಬ್ಬಾಳದ ನಂತರದ ಪ್ರದೇಶಗಳಿಗೆ ಜಲಮಂಡಳಿಯಿಂದ ನೀರು ಒದಗಿಸುವುದು ಬೇಡ ಅಂತ ತೀರ್ಮಾನಿಸಿ, ನಾನೇ ಆದೇಶಕ್ಕೆ ಸಹಿ ಹಾಕಿದ್ದೆ. ಆದರೆ ಇಂದು ಬೆಂಗಳೂರು ಅಗಾಧವಾಗಿ ಬೆಳೆದಿದೆ. ಹೆಸರಘಟ್ಟ ಕೆರೆ, ಹೊಸಕೋಟೆ ಕೆರೆ, ತಿಪ್ಪಗೊಂಡನಹಳ್ಳಿಯಂಥ ಐದಾರು ಕೆರೆಗಳನ್ನು ಅಭಿವೃದ್ಧಿಗೊಳಿಸಿ, ಅಂತರ್ಜಲ ಹೆಚ್ಚಿಸಿ ಬೆಂಗಳೂರು ಜನರ ನೀರಿನ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಪ್ರಯತ್ನಕ್ಕೆ ನಮ್ಮ ಸರ್ಕಾರ ಕೈಹಾಕುತ್ತಿದೆ" ಎಂದರು.

"ಕಾವೇರಿ ವಿಚಾರದಲ್ಲಿ ಸಹಕಾರ ಕೊಟ್ಟ ನಿಮಗೆ ಧನ್ಯವಾದಗಳು. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಈ ಹಿಂದೆ ಹೇಳಿದ್ದೆ. ನಾವು ನೀವು ಎಲ್ಲರೂ ಸೇರಿ ಪ್ರಕೃತಿಗೆ ಪ್ರಾರ್ಥಿಸೋಣ" ಎಂದರು.

ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು ಪ್ರವಾಸೋದ್ಯಮಕ್ಕೆ ಬಳಕೆ :

"ನಮ್ಮಲ್ಲಿರುವ ಪ್ರತಿಭೆಗಳು ಪ್ರಪಂಚದಲ್ಲಿ ಇಲ್ಲ. ಕ್ಯಾಲಿಫೋರ್ನಿಯದಲ್ಲಿರುವ ಇಂಜಿನಿಯರ್ ಗಳ ಪೈಕಿ ಮೂವರಲ್ಲಿ ಇಬ್ಬರು ಭಾರತೀಯರು, ಅದರಲ್ಲೂ ಹೆಚ್ಚು ಕರ್ನಾಟಕದವರು. ಇದು ನಮ್ಮ ಶಕ್ತಿ, ಇದನ್ನು ಕಾಪಾಡಬೇಕು. ನಾವು ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು ಪ್ರವಾಸೋದ್ಯಮಕ್ಕೆ ಬಳಸಿಕೊಳ್ಳುತ್ತಿದ್ದೇವೆ. ಕೇರಳ, ಗೋವಾ ರಾಜ್ಯಗಳು ಕರಾವಳಿ ಭಾಗವನ್ನು ಹೇಗೆ ಬಳಸಿಕೊಂಡಿದ್ದಾರೆ. ಇದಕ್ಕಾಗಿ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುತ್ತಿದ್ದೇವೆ. ಹೀಗೆ ನಾವು ರೈತರು, ನೀರಾವರಿ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ" ಎಂದರು.

ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಅವರ ಆಲೋಚನೆ ಮುಂದುವರಿಸುತ್ತೇವೆ:

"ನಮ್ಮದು ಸಿದ್ದರಾಮಯ್ಯ ಅವರ ಸರ್ಕಾರದ ಮುಂದುವರಿದ ಭಾಗ. ಹೊಸ ಆಲೋಚನೆ ಹೊಂದಿದ್ದೇವೆ. ಈ ಹಿಂದೆ ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಅವರ ಆಲೋಚನೆಯನ್ನು ನಾವು ಬಿಡದೆ ಮುಂದುವರಿಸುತ್ತೇವೆ. ಕುಮಾರಸ್ವಾಮಿ ಅವರ ಬಿಡದಿ, ದೇವೇಗೌಡರ ನೈಸ್ ಯೋಜನೆಯನ್ನು ನಾವು ಮುಂದುವರಿಸುತ್ತೇವೆ. ಈ ಯೋಜನೆಗಳಲ್ಲಿ ತಪ್ಪಾಗಿದ್ದರೆ ಸರಿ ಮಾಡೋಣ" ಎಂದರು.

ಈ ಮಧ್ಯೆ ಬಿಜೆಪಿ ಶಾಸಕ ಸುನೀಲ್ ಕುಮಾರ್, ನಿಮ್ಮ ಈ ಯೋಜನೆ ಮಾಡಲು ನಿಮ್ಮ ಪಕ್ಷದವರೇ ಬಿಡಲ್ಲ ಎಂದಾಗ, "ನೋಡಿ ಸುನೀಲ್, ನನಗೆ ಇತಿಹಾಸ ಓದಕ್ಕೆ ಬರೆಯುವುದಕ್ಕೆ ಇಷ್ಟ ಇಲ್ಲ. ಇತಿಹಾಸ ಸೃಷ್ಟಿಸುವುದಕ್ಕೆ ಹೆಚ್ಚು ಆಸಕ್ತಿ ಇದೆ. ನಾನು ನನ್ನ ಕೈಲಾದ ಪ್ರಯತ್ನ ಮಾಡುವೆ. ಯಾವುದು ಸುಲಭವಲ್ಲ. ಅಧಿಕಾರಿಗಳು ಸುಲಭವಾಗಲು ಬಿಡಲ್ಲ, ಕೊರ್ಟ್ ಗಳಲ್ಲಿ ಒಂದಷ್ಟು ಪ್ರಕರಣ ಇವೆ" ಎಂದರು.

"ನೀವು ಏನು ಟೀಕೆ ಮಾಡುತ್ತೀರೋ ಮಾಡಿ. ಆದರೆ ಮುಂದಿನ 25 ವರ್ಷಗಳಿಗೆ ಅಗತ್ಯವಾದ ನೀಲನಕ್ಷೆ ರೂಪಿಸೋಣ. ನಾವು ಇಲ್ಲಿಗೆ ಬಂದಿರೋದು ಜನರ ಸೇವೆಗಾಗಿ. ಬಿಜೆಪಿ ಕಾಲದಲ್ಲಿ ಸಾಕಾಲ ಎಂದು ಮಾಡಿದ್ದಿರಿ. ನಾನು ಅದಕ್ಕೆ ಹೊಸ ರೂಪ ನೀಡಿ ಪ್ರಜಾಸೇವೆ ಇಲಾಖೆ ಆರಂಭಿಸುತ್ತಿದ್ದೇವೆ. ವಿಧಾನಸೌಧಕ್ಕೆ ಬರಲು ಆಗದ ಜನರ ಬಳಿಗೆ ಸರ್ಕಾರ ತೆಗೆದುಕೊಂಡು ಹೋಗುವ ಉದ್ದೇಶ ನಮ್ಮದು. ನಮ್ಮ ಬಳಿ ಜನರ ಸಮಸ್ಯೆಯೊಂದಿಗೆ ಬರುತ್ತಾರೆ. ಅವರಿಗೆ ಸಾಧ್ಯವಾದಷ್ಟು ಪರಿಹಾರ ನೀಡಲು ಪ್ರಯತ್ನಿಸುತ್ತೇವೆ" ಎಂದರು.

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ :

"ನನಗೆ ರಾಗ-ದ್ವೇಷಗಳು ಎಳ್ಳಷ್ಟೂ ಇಲ್ಲ. ಎಷ್ಟೋ ಜನರು ರಾಜಕೀಯ ಮಾಡುತ್ತಿದ್ದಾರೆ . ನಾನು ನನ್ನ ಜೀವನದಲ್ಲಿ ರಾಜಕೀಯ, ಕೋರ್ಟ್ ಪ್ರಕರಣಗಳು, ಟೀಕೆಗಳನ್ನು ಅನುಭವಿಸಿ ಮಾಗಿದ್ದೇನೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಅನ್ನೋದು ಕಟ್ಟ ಕಡೆಯ ಸತ್ಯ. ತಪ್ಪುದಾರಿಗೆ ಹೋದರೆ ಸರಿದಾರಿಗೆ ತರುವುದಕ್ಕೆ ಮಾಧ್ಯಮಗಳಿವೆ. ನಾವು, ನೀವು ತಪ್ಪು ಮಾಡಿದರೆ ಎದುರಿಗೆ ಹೈಕೋರ್ಟ್ ಇದೆ" ಎಂದರು.

"ನಾಡಿನ ಎಲ್ಲಾ ಜಲ್ವಂತ ಸಮಸ್ಯೆಗಳಿಗೂ ನೀವೆಲ್ಲ ಸೇರಿ ರಚನಾತ್ಮಕವಾದ ಪರಿಹಾರ ಕೊಡಿ. ಮೊದಲ ಸಲ ಶಾಸಕರಲ್ಲೂ ಹೊಸ ಚಿಂತನೆ ಇರಬಹುದು. ನಾನು 8ಸಲ, ಆರ್. ಅಶೋಕ್ 10 ಸಲ ಶಾಸಕರಾಗಿದ್ದಾರೆ. ನಾವೇ ಬುದ್ಧಿವಂತರು ಎನ್ನುವಂತಿಲ್ಲ. ಮಕ್ಕಳೇ ಟೀಚರ್ ಗೆ ಪಾಠ ಮಾಡುವ ಕಾಲದಲ್ಲಿ ನಾವಿದ್ದೇವೆ. ಜಗತ್ತು ಕರ್ನಾಟಕವನ್ನು, ಬೆಂಗಳೂರನ್ನು ನೋಡುತ್ತಿದೆ ಎನ್ನುವ ಅರಿವು ನಮಗಿರಲಿ" ಎಂದರು.

Tags

TourismCM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X