Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ...

ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ ಸಚಿವ ಕೆ.ಎನ್.ರಾಜಣ್ಣ ತಲೆದಂಡ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ11 Aug 2025 8:38 PM IST
share
ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ ಸಚಿವ ಕೆ.ಎನ್.ರಾಜಣ್ಣ ತಲೆದಂಡ : ವಿಜಯೇಂದ್ರ

ಬೆಂಗಳೂರು, ಆ. 11: ‘ಚುನಾವಣಾ ಆಯೋಗದ ವಿರುದ್ಧ ಬಾಲಿಶತನದ ಆರೋಪ ಮಾಡುವ ಮೂಲಕ ನಗೆ ಪಾಟಲಿಗೀಡಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದ್ಯ ಹತಾಶ ಮನಸ್ಥಿತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ‘ಇದ್ದಿದ್ದು ಇದ್ದಂಗೆ ಹೇಳಿ' ಕಾಂಗ್ರೆಸ್ ದೋಷಗಳಿಗೆ ಕನ್ನಡಿ ಹಿಡಿದ ಹಿರಿಯ ಸಚಿವ ಕೆ.ಎನ್.ರಾಜಣ್ಣ ತಲೆದಂಡವಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಸೋಮವಾರ ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಸಿಎಂ ಸಿದ್ದರಾಮಯ್ಯರ ಬಲಗೈ ಭಂಟರಾಗಿ ಕಾಂಗ್ರೆಸ್ ವೈಫಲ್ಯಗಳು ಹಾಗೂ ಆಂತರಿಕ ದಬ್ಬಾಳಿಕೆಗಳನ್ನು ನಿಷ್ಟೂರವಾಗಿ ಬಿಚ್ಚಿಡುತ್ತಿದ್ದ ರಾಜಣ್ಣ ಹೈಕಮಾಂಡ್ ಪಾಲಿಗೆ ಬಿಸಿ ತುಪ್ಪವಾಗಿದ್ದರು. ‘ಕೈ' ವರಿಷ್ಠ ನೇತಾರ ರಾಹುಲ್ ಗಾಂಧಿಯವರ ಎಡಬಿಡಂಗಿ ನಡೆಯನ್ನು ಎತ್ತಿ ತೋರಿಸಿದ ಶೋಷಿತ ಸಮುದಾಯಗಳ ಪರವಾಗಿ ದನಿಯಾಗಿದ್ದ ಕೆ.ಎನ್.ರಾಜಣ್ಣ ಸಚಿವ ಪದವಿಯಿಂದ ಉಚ್ಚಾಟಿತಗೊಂಡಿರುವುದು ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸಂಸ್ಕೃತಿ ಇನ್ನೂ ತೊಲಗಿಲ್ಲ ಎನ್ನುವುದನ್ನು ಸಾಕ್ಷೀಕರಿಸಿದೆ ಎಂದು ಟೀಕಿಸಿದ್ದಾರೆ.

‘ಮತಗಳ್ಳತನದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅಪ್ರಬುದ್ಧ ನಡೆಯನ್ನು ವಿಶ್ಲೇಷಿಸಿ ಕಾಂಗ್ರೆಸ್ ಪಕ್ಷದ್ದೇ ತಪ್ಪು, ‘2024ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿತ್ತು, ಲೋಕಸಭಾ ಚುನಾವಣೆಗೂ ಮುಂಚೆಯೇ ಮತದಾರರ ಪಟ್ಟಿಯನ್ನು ಪರಿಶೀಲಿಸುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿಯಾಗಿತ್ತು, ವೇಳೆ ಬೂತ್ ಕಾರ್ಯಕರ್ತರು ಇದನ್ನು ಗಮನಿಸುವಂತೆ ನೋಡಿಕೊಳ್ಳಬೇಕಿತ್ತು.

ಮತದಾನದಂದು ಕಾಂಗ್ರೆಸ್ ಪಕ್ಷದ ಏಜೆಂಟರುಗಳು ಲೋಪಗಳಿದ್ದರೆ ಗಮನಿಸುವಂತೆ ತರಬೇತಿ ನೀಡಬೇಕಾಗಿತ್ತು, ಚುನಾವಣೆಯ ನಂತರವೂ ದೂರು ಸಲ್ಲಿಸಬೇಕಾಗಿತ್ತು, ಇದ್ಯಾವುದನ್ನೂ ಮಾಡದೆ ಏಕಾಏಕಿ ಈಗ ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸಲು ಹೊರಟಿರುವ ಕ್ರಮ ಸರಿಯಲ್ಲ’ ಎಂದು ರಾಜಣ್ಣ ಹೇಳಿದ್ದರು. ಇದನ್ನೇ ನಾಡಿನ ಪ್ರಮುಖ ಪತ್ರಿಕೆಗಳು ತಮ್ಮ ಸಂಪಾದಕೀಯದಲ್ಲೂ ಉಲ್ಲೇಖಿಸಿವೆ ಎಂದು ಹೇಳಿದ್ದಾರೆ.

‘ಈ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಕೇವಲ ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಆಗಿ ಕೆಲಸ ಮಾಡುತ್ತಿದ್ದಾರೆ, ಎನ್ನುವುದು ಇತ್ತೀಚಿನ ಕರ್ನಾಟಕ ಸರಕಾರದ ನಿರ್ಧಾರಗಳನ್ನು ದಿಲ್ಲಿಯ ಹೈಕಮಾಂಡ್ ಅಂಗಳದಲ್ಲಿ ಪ್ರಕಟಿಸುತ್ತಿರುವುದು ಸ್ಪಷ್ಟವಾಗಿದೆ. ರಾಜಣ್ಣನವರು ಈ ಹಿಂದೆ ಹೇಳಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಸೆಪ್ಟಂಬರ್ ಕ್ರಾಂತಿ ಮುಂಚಿತವಾಗಿಯೇ ಆರಂಭವಾಗಿದೆ, ಕ್ರಾಂತಿಯ ಕಿಡಿ ಯಾರನ್ನಾದರೂ ಬಲಿತೆಗೆದು ಕೊಳ್ಳಲಿ, ಆದರೆ ಸದ್ಯ ಈಗಾಗಲೇ ಸೊರಗಿರುವ ಕರ್ನಾಟಕವನ್ನು ಸುಡದಿರಲಿ ಎಂದು ಅವರು ತಿಳಿಸಿದ್ದಾರೆ.

‘ಸ್ವಾರ್ಥದ ಅಟ್ಟಹಾಸ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಸರಣಿ ಹಗರಣಗಳನ್ನು ಕತ್ತಿಗೆ ಸುತ್ತಿಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಜನರ ಹಿತವನ್ನು ಮರೆತು ಪಕ್ಷ ಹಾಗೂ ಅಧಿಕಾರದ ಸುತ್ತ ಗಮನವನ್ನು ಕೇಂದ್ರೀಕರಿಸಿ ರಾಜ್ಯ ಹಾಗೂ ರಾಜ್ಯದ ಜನರ ಹಿತಾಸಕ್ತಿಯನ್ನು ಸಂಪೂರ್ಣ ಮರೆತಿದೆ. ಕಾಂಗ್ರೆಸ್ ಅಧಿಕಾರಕ್ಕೆ ತಂದ ಕಾರಣಕ್ಕಾಗಿ ಜನ ಶಪಿಸುತ್ತಿದ್ದಾರೆ ಇದರ ನಡುವೆ ದಮನಿತ ಸಮುದಾಯದ ನಾಯಕರನ್ನೂ ರಾಜಕೀಯವಾಗಿ ಮುಗಿಸುವ ಷಡ್ಯಂತ್ರದಿಂದ ಕಾಂಗ್ರೆಸ್ ಪಕ್ಷದ ಅಸಲಿ ಮುಖವಾಡವನ್ನು ಜನ ಮತ್ತೊಮ್ಮೆ ತಿಳಿಯುವಂತಾಗಿದೆ ಎಂದು ಅವರು ಟೀಕಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X