Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುರಕ್ಷತಾ ಕ್ರಮಗಳ ಉಲ್ಲಂಘನೆ: ಭೈರತಿ...

ಸುರಕ್ಷತಾ ಕ್ರಮಗಳ ಉಲ್ಲಂಘನೆ: ಭೈರತಿ ಸುರೇಶ್ ವಿರುದ್ಧದ ಆರೋಪ ಪಟ್ಟಿಗೆ ಹೈಕೋರ್ಟ್ ತಡೆ

ವಾರ್ತಾಭಾರತಿವಾರ್ತಾಭಾರತಿ2 Dec 2023 8:52 PM IST
share
ಸುರಕ್ಷತಾ ಕ್ರಮಗಳ ಉಲ್ಲಂಘನೆ: ಭೈರತಿ ಸುರೇಶ್ ವಿರುದ್ಧದ ಆರೋಪ ಪಟ್ಟಿಗೆ ಹೈಕೋರ್ಟ್ ತಡೆ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಖರೀದಿ ಮಾಡಿದ್ದ ವಾಣಿಜ್ಯ ಕಟ್ಟಡದಲ್ಲಿ ಅಗ್ನಿಶಾಮಕ ದಳ ಕಾಯಿದೆ ಅಡಿ ಬರುವ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಿಸಲಾಗಿರುವ ಆರೋಪ ಪಟ್ಟಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ತಮ್ಮ ವಿರುದ್ಧದ ಆರೋಪ ಪಟ್ಟಿ ಹಾಗೂ ಆ ಸಂಬಂಧ ಬೆಂಗಳೂರಿನ 10ನೇ ಹೆಚ್ಚುವರಿ ಎಸಿಎಂಎಂ ಕೋರ್ಟ್‍ನಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಸಚಿವ ಭೈರತಿ ಸುರೇಶ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಆರೋಪ ಪಟ್ಟಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು.

ಇಂದಿರಾನಗರ ಎಚ್‍ಎಎಲ್ 2ನೇ ಹಂತದಲ್ಲಿ ಸರ್ವೇ ನಂಬರ್ 765ರಲ್ಲಿ 2005-06ರಲ್ಲಿ ನಕ್ಷೆ ಮಂಜೂರಾತಿ ಹೊಂದಿದ್ದ ವಾಣಿಜ್ಯ ಕಟ್ಟಡವನ್ನು ಭೈರತಿ ಸುರೇಶ್ 2014ರಲ್ಲಿ ಖರೀದಿಸಿದ್ದರು. 2015ರ ಪರಿಷ್ಕೃತ ಮಾಸ್ಟರ್ ಪ್ಲಾನ್ ಪ್ರಕಾರ 24 ಮೀಟರ್ ಎತ್ತರದ ಕಟ್ಟಡಗಳು ಅಗ್ನಿಶಾಮಕ ಇಲಾಖೆಯಿಂದ ಎನ್‍ಓಸಿ ಪಡೆದುಕೊಳ್ಳಬೇಕು ಎಂದಿದೆ.

ಆದರೆ, ಈ ಕಟ್ಟಡವು 24 ಮೀಟರ್ ಒಳಗೆ ಇದೆ. ಆದಾಗ್ಯೂ ಅತೀ ಎತ್ತರದ ಕಟ್ಟಡಗಳಿಗೆ ಅಳವಡಿಸಬೇಕಾದ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿಲ್ಲ ಎಂದು ಅಗ್ನಿಶಾಮಕ ಅಧಿಕಾರಿಗಳು ನೀಡಿದ ದೂರು ಆಧರಿಸಿ, ಇಂದಿರಾನಗರ ಪೊಲೀಸರು ಭೈರತಿ ಸುರೇಶ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದರು. ಇದಕ್ಕೆ 2019ರ ಸೆ.9ಕ್ಕೆ ನ್ಯಾಯಾಲಯ ತಡೆ ನೀಡಿತ್ತು. ಆದರೆ, ಪೊಲೀಸರು 2019ರ ಅ.11ರಂದು 10ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ನಕ್ಷೆ ಮಂಜೂರಾತಿ ಹಾಗೂ ಇತರ ಪರವಾನಿಗೆ ಹೊಂದಿದ್ದ ಕಟ್ಟಡವನ್ನು ಅರ್ಜಿದಾರರು ಖರೀದಿಸಿದ್ದಾರೆ. ಪರಿಷ್ಕೃತ ಮಾಸ್ಟರ್ ಪ್ಲ್ಯಾನ್ ಜಾರಿಗೆ ಬರುವ ಮೊದಲೇ ಈ ಕಟ್ಟಡ ಖರೀದಿಸಲಾಗಿತ್ತು. 2011ರಲ್ಲಿ ಅಗ್ನಿ ಶಾಮಕ ದಳ ಹೊರಡಿಸಿದ ಅಧಿಸೂಚನೆಯ 3 ವರ್ಷದ ಬಳಿಕ ಹಾಗೂ ಕಟ್ಟಡ ನಿರ್ಮಾಣ ಮಾಡಿದ 8 ವರ್ಷಗಳ ನಂತರ ಅರ್ಜಿದಾರರು ಕಟ್ಟಡವನ್ನು ಖರೀದಿಸಿದ್ದಾರೆ.

ಹೀಗಾಗಿ, ಮೂಲ ಮಾಲಕರು ಅಳವಡಿಸಿದ ಸುರಕ್ಷತಾ ಕ್ರಮಗಳಿಗೆ ಅರ್ಜಿದಾರರು ಹೊಣೆಗಾರರಲ್ಲ. ಹಿಂದೆ ನ್ಯಾಯಾಲಯದ ತಡೆ ಇದ್ದರೂ, ವಿಚಾರಣಾಧೀನ ನ್ಯಾಯಾಲಯ ಡಿ.9ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದೆ. ಅದರ ಬಳಿಕವಷ್ಟೇ ವಿಚಾರ ಅರ್ಜಿದಾರರ ಗಮನಕ್ಕೆ ಬಂದಿದೆ. ಅರ್ಜಿದಾರರು ಶಾಸಕ ಮತ್ತು ಸಚಿವ ಆಗಿದ್ದರಿಂದ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕಾಗಿದೆ. ಹೀಗಾಗಿ, ವಿಚಾರಣೆಗೆ ಹಾಜರಾಗಲು ಆಗುವುದಿಲ್ಲ ಅರ್ಜಿದಾರರ ಪರ ವಕೀಲರು ಪೀಠಕ್ಕೆ ವಿವರಿಸಿದರು.

ಆದ್ದರಿಂದ, ಅರ್ಜಿದಾರರ ವಿರುದ್ಧ ಇಂದಿರಾನಗರ ಪೊಲೀಸರು ದಾಖಲಿಸಿರುವ ಆರೋಪ ಪಟ್ಟಿ ಹಾಗೂ ಅದರ ಸಂಬಂಧ 10ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X