Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಸಿದ್ದರಾಮಯ್ಯರನ್ನು ಕಾರ್ಯಕ್ರಮಕ್ಕೆ...

ಸಿಎಂ ಸಿದ್ದರಾಮಯ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಕ್ಕೆ ಈ ಕಾರಣ ಕೊಟ್ಟ ವಿಶ್ವೇಶ್ವರ ಭಟ್

ವಾರ್ತಾಭಾರತಿವಾರ್ತಾಭಾರತಿ22 July 2023 6:37 PM IST
share
ಸಿಎಂ ಸಿದ್ದರಾಮಯ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಕ್ಕೆ ಈ ಕಾರಣ ಕೊಟ್ಟ ವಿಶ್ವೇಶ್ವರ ಭಟ್
ರಾಜ್ಯ ಸರಕಾರ ಜಾರಿ ಮಾಡುವ ಯೋಜನೆಗಳೆಲ್ಲವೂ 'ಬಾರ್ ಆ್ಯಂಡ್ ರೆಸ್ಟೋರೆಂಟ್' ಆದಾಯದ ಮೇಲೆ ನಿಂತಿದ್ದು, ಇದು ದುರಂತವೇ ಸರಿ ಎಂದು ಪತ್ರಕರ್ತ ವಿಶ್ವೇಶ್ವರ ಭಟ್ ಟೀಕಿಸಿದ್ದಾರೆ.

ಬೆಂಗಳೂರು: ರಾಜ್ಯ ಸರಕಾರ ಜಾರಿ ಮಾಡುವ ಯೋಜನೆಗಳೆಲ್ಲವೂ 'ಬಾರ್ ಆ್ಯಂಡ್ ರೆಸ್ಟೋರೆಂಟ್' ಆದಾಯದ ಮೇಲೆ ನಿಂತಿದ್ದು, ಇದು ದುರಂತವೇ ಸರಿ ಎಂದು ಪತ್ರಕರ್ತ ವಿಶ್ವೇಶ್ವರ ಭಟ್ ಟೀಕಿಸಿದ್ದಾರೆ.

ಶನಿವಾರ ನಗರದ ಪುರಭವನ ಸಭಾಂಗಣದಲ್ಲಿ ವಿಶ್ವವಾಣಿ ಪುಸ್ತಕ ವತಿಯಿಂದ ಹೊರತಂದಿದ್ದ `ಸಂಪಾದಕರ ಸದ್ಯಶೋಧನೆ-1', `ಸಂಪಾದಕರ ಸದ್ಯಶೋಧನೆ-2', `ಸಂಪಾದಕರ ಸದ್ಯಶೋಧನೆ-3' ಹಾಗೂ ಕಿರಣ್ ಉಪಾಧ್ಯಾಯ ಅವರ ‘ಹೊರದೇಶವಾಸಿ’, ರೂಪಾ ಗುರುರಾಜ್ ಅವರ ‘ಒಂದೊಳ್ಳೆ ಮಾತು-2’, ಶಿಶಿರ್ ಹೆಗಡೆ ಅವರ ‘ಶಿಶಿರ ಕಾಲ’ ಪುಸ್ತಕಗಳ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇವತ್ತು ಸರಕಾರಕ್ಕೆ ಪುಸ್ತಕದ ಅಂಗಡಿಗಳಿಂದ ಯಾವುದೇ ಆದಾಯವಿಲ್ಲ. ಆದರೆ, ಈ ಸರಕಾರದ ಯೋಜನೆಗಳು ನಿಂತುಕೊಂಡಿರುವುದೇ ಬಾರ್ ಅಂಡ್ ರೆಸ್ಟೋರೆಂಟ್ ಆದಾಯದ ಮೇಲೆಯೇ. ಇದು ಬಹಳ ದುರ್ದೈವ ಹಾಗೂ ತಲೆತಗ್ಗಿಸುವ ಸಂಗತಿಯಾಗಿದೆ ಎಂದರು.

ಈಡೀ ಕರ್ನಾಟಕದಲ್ಲಿ ನೋಡಿದರೆ ಕನ್ನಡ ಪುಸ್ತಕ ಮಳಿಗೆಗಳ ಸಂಖ್ಯೆ ಬರೀ 42ರಷ್ಟಿದೆ. ಅಷ್ಟೇ ಅಲ್ಲದೆ, ಕನ್ನಡ ಪುಸ್ತಕ ಮಳಿಗೆ ಇಲ್ಲದೆ ಇರುವ ಜಿಲ್ಲೆಗಳೂ ನಮ್ಮ ರಾಜ್ಯದಲ್ಲಿವೆ. ಬೆಂಗಳೂರಿನಿಂದ ಕೇವಲ 80 ಕಿಲೋ ಮೀಟರ್ ದೂರದಲ್ಲಿರುವ ಕೋಲಾರದಲ್ಲಿಯೂ ಒಂದೂ ಕನ್ನಡ ಪುಸ್ತಕ ಮಳಿಗೆಯೇ ಇಲ್ಲ. ಆದರೆ, ರಾಜ್ಯದಲ್ಲಿ 24 ಸಾವಿರ ಬಾರ್ ಅಂಡ್ ರೆಸ್ಟೋರೆಂಟ್‍ಗಳಿವೆ. ಈ ರೀತಿಯ ಗಂಭೀರ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತರಬೇಕಿತ್ತು ಎನ್ನುವ ಉದ್ದೇಶ ನನ್ನಲ್ಲಿತ್ತು ಎಂದು ಹೇಳಿದರು.

ಸಾಮಾನ್ಯವಾಗಿ ಪುಸ್ತಕ ಬಿಡುಗಡೆ ಸಾಹಿತಿಗಳು ಮಾಡುತ್ತಾರೆ. ಆದರೆ, ಈ ಸಾಹಿತಿಗಳು ಎಷ್ಟೊಂದು ಮಾತನಾಡಿದರೂ ಯಾವುದೇ ಪ್ರಯೋಜನ ಆಗುವುದಿಲ್ಲ. ಹಾಗಾಗಿ, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕನ್ನಡ ಪುಸ್ತಕಗಳ ಸಮಸ್ಯೆ ಪ್ರಸ್ತಾಪಿಸಿದರೆ, ಅದು ಪರಿಣಾಮಕಾರಿ ಆಗಬಹುದು ಎನ್ನುವ ಕಾರಣಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನ ನೀಡಿದ್ದೆ. ಅನಿವಾರ್ಯ ಕಾರಣಗಳಿಂದ ಅವರು ಬರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ ಎಂದು ವಿಶ್ವೇಶ್ವರ ಭಟ್ ಹೇಳಿದರು.

ಕನ್ನಡ ಪುಸ್ತಕ ಲೋಕ ಇಂದು ಬರಡಾಗಿದೆ. ರಾಜ್ಯದಲ್ಲಿ 6 ಕೋಟಿ ಜನಸಂಖ್ಯೆ ಇದ್ದರೂ 6 ಸಾವಿರ ಪುಸ್ತಕಗಳು ಮಾರಾಟವಾಗದೆ ಇರುವುದು ದುರಂತವಾಗಿದೆ. ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಮುಖ್ಯಮಂತ್ರಿಗಳಿಗೆ ತಿಳಿಸುವ ಉದ್ದೇಶದಿಂದ ನನ್ನ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ರಾಜಕಾರಣಿಗಳನ್ನು ಕರೆದೆ ಎಂಬುವುದನ್ನು ಮೊದಲು ಸ್ಪಷ್ಟ ಪಡಿಸುತ್ತೆನೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಬರಹಗಾರ ರಾಧಕೃಷ್ಣ ಭಡ್ತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X