Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರೆಸ್ಸೆಸ್ ನ ವೈದಿಕ ಸಿದ್ಧಾಂತದ ವಿರುದ್ಧ...

ಆರೆಸ್ಸೆಸ್ ನ ವೈದಿಕ ಸಿದ್ಧಾಂತದ ವಿರುದ್ಧ ಧ್ವನಿ ಎತ್ತಬೇಕಿದೆ: ಮಾವಳ್ಳಿ ಶಂಕರ್

ದಸಂಸ ರಾಜ್ಯಮಟ್ಟದ ಅಧ್ಯಯನ ಶಿಬಿರದ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ27 Aug 2023 8:01 PM IST
share
ಆರೆಸ್ಸೆಸ್ ನ ವೈದಿಕ ಸಿದ್ಧಾಂತದ ವಿರುದ್ಧ ಧ್ವನಿ ಎತ್ತಬೇಕಿದೆ: ಮಾವಳ್ಳಿ ಶಂಕರ್

ಹರಿಹರ: ಚಡ್ಡಿ ಮತ್ತು ಕೋಲಿನಿಂದ ದೇಶದ ಅಭಿವೃದ್ಧಿ ಸಾಧ್ಯವೆಂದು ಆರೆಸ್ಸೆಸ್ ಹೊರಟಿದ್ದು, ಅದು ತನ್ನ ಗುರಿ ತಲುಪುವುದಿಲ್ಲ. ದೇಶದೆಲ್ಲೆಡೆ ವೈದಿಕಶಾಹಿ ಪ್ರಭುತ್ವ ಸಾಧಿಸುತ್ತಾ, ದಲಿತ, ಶೋಷಿತರಾಗಿರುವ ಬಹುಸಂಖ್ಯಾತರನ್ನು ಮೂಲೆಗುಂಪು ಮಾಡಲಾಗುತ್ತಿದೆ. ಆರೆಸ್ಸೆಸ್ ನ ಈ ಸಿದ್ಧಾಂತ ಸೋಲಿಸುವ ಶಕ್ತಿ ದಸಂಸಗಿದೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದ್ದಾರೆ.

ತಾಲೂಕಿನ ಹನಗವಾಡಿ ಸಮೀಪದ ಮೈತ್ರಿ ವನದ ಪ್ರೊ.ಬಿ.ಕೃಷ್ಣಪ್ಪ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿಯಿಂದ ರವಿವಾರ ಆಯೋಜಿಸಿದ್ದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ರಾಜ್ಯಮಟ್ಟದ ಅಧ್ಯಯನ ಶಿಬಿರದ ಸಮಾರೋಪದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬುದ್ಧ, ಬಸವ, ಡಾ.ಅಂಬೇಡ್ಕರ್, ಸಾವಿತ್ರಿಬಾ ಫುಲೆ, ನಾಲ್ವಡಿ, ಕುವೆಂಪು, ಪ್ರೊ.ಬಿ.ಕೃಷ್ಣಪ್ಪರಂತಹ ಮಹನೀಯರು ಇದೇ ವೈದಿಕ ಸಿದ್ಧಾಂತದ ವಿರುದ್ಧ ಧ್ವನಿ ಎತ್ತಿದ್ದರು. ಅಂತಹವರ ಧ್ವನಿಯನ್ನು ನಮ್ಮ ಧ್ವನಿಯಾಗಿಸಿ ದಲಿತ ಹೋರಾಟ, ಚಳವಳಿಗಳನ್ನು ರೂಪಿಸಿ ಜಾಗೃತಿ ಮೂಡಿಸಬೇಕಿದೆ ಎಂದು ಮಾವಳ್ಳಿ ಶಂಕರ್ ಸಲಹೆ ನೀಡಿದರು.

ಸಿಎಂ ಆಪ್ತ ಸಹಾಯಕ ಡಾ.ವೆಂಕಟೇಶ್ ನೆಲ್ಲುಕುಂಟೆ ಮಾತನಾಡಿ, ದಾರ ಧಾರಣೆ ಮಾಡಿದವರು 2,300 ವರ್ಷಗಳಿಂದ ಬಹು ಸಂಖ್ಯಾತ ಭಾರತೀಯರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ. ಇದರ ಪರಿಣಾಮವಾಗಿ ದಾರ ಹಾಕಿಕೊಂಡವರಿಗೆ ದೇಶದ ಶಿಕ್ಷಣ, ಸಂಪತ್ತು, ಅಧಿಕಾರ ಸಿಕ್ಕಿತು. ದೇಶದ ಬಹುಸಂಖ್ಯಾತರು ಗುಲಾಮಗಿರಿ, ಜೀತ, ಬಡತನ, ನಿರಕ್ಷರತೆ, ಹಿಂಸೆಯಲ್ಲಿ ಬೆಂದು ಹೋಗಿದ್ದಾರೆಂದು ನುಡಿದರು.

ಕಳೆದ 20 ವರ್ಷಗಳಿಂದ ದೇಶದಲ್ಲಿ ಬಟ್ಟೆ, ಊಟ, ಸಾಮಾನ್ಯ ಮಟ್ಟದ ಶಿಕ್ಷಣ ಸಿಗುತ್ತಿದೆ. ಇದು ದೊಡ್ಡ ಬದಲಾವಣೆಯಾಗಿದೆ. ಆದರೆ, ಗುಣಮಟ್ಟದ ಶಿಕ್ಷಣದಿಂದ ಈಗಲೂ ಬಡವರು ವಂಚಿತರಾಗಿದ್ದಾರೆ. ಬರೆಯಲು ಬಾರದಿರುವ ಕೆಲವರು ನಮ್ಮ ವಿವಿಗಳಲ್ಲಿ ಅಧ್ಯಾಪಕರಾಗಿದ್ದಾರೆ. ಇಂತಹವರಿಮದ ನಮ್ಮ ಮಕ್ಕಳು ಯಾವ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವೆಂದು ಪ್ರಶ್ನಿಸಿದರು.

ಜ್ಞಾನವೊಂದೇ ನಮಗೆ ಕಾಪಾಡಲು ಸಾಧ್ಯ. ಇದನ್ನು ಡಾ.ಅಂಬೇಡ್ಕರ್ರವರು ಒತ್ತಿ ಹೇಳಿದ್ದರು. ಹೀಗಾಗಿ ಗುಣಮಟ್ಟದ ಶಿಕ್ಷಣ ಬೇಕು. ಆಗ ಮಾತ್ರ ದೀಪದಿಂದ ದೀಪ ಹಚ್ಚಬಹುದು. ಎಲ್ಲಾ ಭಾರತೀಯರಿಗೂ ಜ್ಞಾನದ ಹರಿವು ಆಗಬೇಕೆಂದರೆ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂದು ಡಾ.ವೆಂಕಟೇಶ್ ಹೇಳಿದರು.

ಬೆಂಗಳೂರಿನ ಜಿನ್ನಿ, ಗೊಲ್ಲಹಳ್ಳಿ ಶಿವಪ್ರಸಾದ್, ಡಿಂಗ್ರಿ ಭರತ್, ದೊಡ್ಮಲೆ ರವಿ ತಂಡದ ಹಾಡುಗಳು ಜನಮನ ಸೆಳದವು. ಸಮಾವೇಶದಲ್ಲಿ ಮೈತ್ರಿವನದ ಟ್ರಸ್ಟ್ ನ ಟ್ರಸ್ಟಿ ರುದ್ರಪ್ಪ ಹನಗವಾಡಿ, ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ.ಎ.ಬಿ.ರಾಮಚಂದ್ರಪ್ಪ, ನಾಗಣ್ಣ ಬಡಿಗೇರ್, ದಸಂಸ ಜಿಲ್ಲಾ ಸಂಚಾಲಕ ಬಿ.ದುಗ್ಗಪ್ಪ, ನಾಗಪ್ಳರ ಮಂಜುನಾಥ, ನಿವೃತ್ತ ಐಎಎಸ್ ಅಧಿಕಾರಿ ಈ.ವೆಂಕಟಯ್ಯ, ನಾಗರಾಜ್ ರಾಚಪ್ಪ, ರಾಯಚೂರಿನ ನಾಗರಾಜ್, ಬೆಂಗಳೂರಿನ ನಿರ್ಮಲ, ಸಂತೋಷ್ ನೋಟದವರ್, ರಾಜನಹಳ್ಳಿ ಮಂಜಪ್ಪ ಜಿ.ಎಂ., ಮಂಜುನಾಥ ಎಂ. ಹಾಗೂ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಲಿತರ ಜಾಗೃತಿಯಿಂದಾಗಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ತರಲಾಗಿದೆ. 2024ರ ಲೋಕಸಭಾ ಚುನಾವಣೆ ಎಂಬ ಮಹಾಕದನದಲ್ಲೂ ದಲಿತರು, ಪ್ರಗತಿಪರರು ಒಂದಾಗಿ ದೇಶದಲ್ಲೂ ರಾಜಕೀಯ ಬದಲಾವಣೆ ತರಬೇಕಿದೆ. ಎನ್ಆರ್ಸಿ, ಸಿಎಎಯಂತಹ ಕಾನೂನು ಹಿಡಿದು ದೇಶ ವಾಸಿಗಳಲ್ಲಿ ಭಯ ಮೂಡಿಸಿರುವ ಸರಕಾರಕ್ಕೆ ಸೂಕ್ತ ಉತ್ತರ ನೀಡುವ ಕಾಲ ಬಂದಿದೆ.

- ಮಾವಳ್ಳಿ ಶಂಕರ್, ದಸಂಸ (ಅಂಬೇಡ್ಕರ್ ವಾದ) ರಾಜ್ಯ ಪ್ರಧಾನ ಸಂಚಾಲಕ

Tags

Mavalli Shankar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X