Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮತ ಕಳ್ಳತನ’ ದೇಶದ ಸೂಕ್ಷ್ಮ ವರ್ಗದವರ...

‘ಮತ ಕಳ್ಳತನ’ ದೇಶದ ಸೂಕ್ಷ್ಮ ವರ್ಗದವರ ಮೇಲಿನ ದಾಳಿ: ರಣದೀಪ್ ಸಿಂಗ್ ಸುರ್ಜೇವಾಲ

ವಾರ್ತಾಭಾರತಿವಾರ್ತಾಭಾರತಿ3 Oct 2025 7:37 PM IST
share
‘ಮತ ಕಳ್ಳತನ’ ದೇಶದ ಸೂಕ್ಷ್ಮ ವರ್ಗದವರ ಮೇಲಿನ ದಾಳಿ: ರಣದೀಪ್ ಸಿಂಗ್ ಸುರ್ಜೇವಾಲ
ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನ

ಬೆಂಗಳೂರು: ‘ಮತ ಕಳ್ಳತನ’ದ ವಿರುದ್ದ ಪಕ್ಷದ ಎಲ್ಲ ಘಟಕಗಳು ಕ್ರಿಯಾಶೀಲವಾಗಿದ್ದು, ಜನಾಭಿಪ್ರಾಯ ರೂಪಿಸಬೇಕು. ಇದು ಕೇವಲ ಕಾಂಗ್ರೆಸ್ ಪಕ್ಷದ ದನಿಯಾಗದೇ ದೇಶದ ಜನಸಾಮಾನ್ಯರ ದನಿಯಾಗಿ ಇದು ರೂಪುಗೊಳ್ಳಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಇಂದಿಲ್ಲಿ ಕರೆ ನೀಡಿದ್ದಾರೆ.

ಶುಕ್ರವಾರ ಮತಗಳ್ಳತನ ವಿರುದ್ದ ಬೆಂಗಳೂರಿನ ಪುಲಕೇಶಿ ನಗರದಲ್ಲಿ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮತ ಕಳ್ಳತನದಿಂದ ಈ ದೇಶದ ಮಹಿಳೆಯರು, ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಎಸ್‍ಸಿ-ಎಸ್‍ಟಿ ವರ್ಗದ ಜನರು ಸೇರಿದಂತೆ ಸಮಾಜದ ಸೂಕ್ಷ್ಮ ವರ್ಗದವರ ಮೇಲಿನ ದಾಳಿ ಎನ್ನಬಹುದು. ಇದು ಕೇವಲ ಮತಕಳ್ಳತನ ಮಾತ್ರವಲ್ಲ, ಜನಸಾಮಾನ್ಯರ ಹಕ್ಕಿನ ಕಳ್ಳತನ’ ಎಂದು ವಿಶ್ಲೇಷಿಸಿದರು.

‘ಸಂವಿಧಾನದಲ್ಲಿ ಒಬ್ಬ ವ್ಯಕ್ತಿ ಒಂದು ಮತ ಎಂದು ಹೇಳಲಾಗಿದೆ. ಇಂದು ಸಂವಿಧಾನವನ್ನು ಮೀರಿ ಮತಕಳ್ಳತನ ಮಾಡಲಾಗುತ್ತಿದೆ. ನಮ್ಮ ಸಂವಿದಾನವನ್ನು ಎಲ್ಲರೂ ಒಟ್ಟಿಗೆ ಸೇರಿ ರಕ್ಷಿಸಿಕೊಳ್ಳಬೇಕಿದೆ. ಈ ದೇಶದಲ್ಲಿ ಹೊಸಕ್ರಾಂತಿಯ ಅಲೆಯನ್ನು, ಬದಲಾವಣೆಯನ್ನು ನಾವು-ನೀವೆಲ್ಲರೂ ಸೇರಿ ಮಾಡಬೇಕಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಎಷ್ಟು ಜನ ಸಾಧ್ಯವೋ ಅಷ್ಟು ಜನರನ್ನು ಒಗ್ಗೂಡಿಸಿ ಮತಕಳ್ಳತನದ ವಿರುದ್ಧ ಜನಾಭಿಪ್ರಾಯ ರೂಪಿಸಬೇಕು. ಜನರ ಹಕ್ಕನ್ನು ಕಾಪಾಡಲು ಪ್ರೇರೆಪಿಸಬೇಕು ಎಂದರು.

ಬೆಂಗಳೂರಿನ ಪುಲಕೇಶಿ ನಗರದಲ್ಲಿ ಎದ್ದಿರುವ ದನಿ ಇಡೀ ದೇಶಕ್ಕೆ ಕೇಳಿಸಬೇಕು. ಮತಕಳ್ಳತನದ ಮೂಲಕ ವ್ಯವಸ್ಥಿತವಾಗಿ ಕದಿಯಲಾಗುತ್ತಿದೆ. ನಾವೆಲ್ಲರೂ ಅಂಬೇಡ್ಕರ್ ಅವರ ಕೊಡುಗೆಯಾದ ಸಂವಿಧಾನವನ್ನ ರಕ್ಷಣೆ ಮಾಡಲು ಸೇರಿದ್ದೇವೆ. ಇಂದು ಸಂವಿಧಾನದ ಜೊತೆ ಜೊತೆಗೆ ಪ್ರಜಾಪ್ರಭುತ್ವವನ್ನು ನಾಶ ಮಾಡಲಾಗುತ್ತಿದೆ. ಇದು ಕೇವಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷವಲ್ಲ. ಈ ದೇಶದ ಜನ ಸಾಮಾನ್ಯರ ಸಂಘರ್ಷ ಎಂದು ಸುರ್ಜೇವಾಲ ನುಡಿದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಮತ ಕಳ್ಳತನ ವಿರೋಧಿ ಹೋರಾಟ ಕೇವಲ ರಾಜಕೀಯ ಉದ್ದೇಶದ ಹೋರಾಟವಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಹೋರಾಟ. ಜನರ ಮತಾಧಿಕಾರದ ರಕ್ಷಣೆಯ ಹೋರಾಟ. ಈ ದೇಶದ ಜನರು ತಮ್ಮ ಆಯ್ಕೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನೇ ಕಳೆದುಕೊಂಡಿದ್ದಾರೆ ಎಂದರು.

ದೇಶದ ಪ್ರತಿಯೊಬ್ಬರ ಮತಗಳನ್ನೂ ವ್ಯವಸ್ಥಿತವಾಗಿ ಕದಿಯಲಾಗುತ್ತಿದೆ. ಒಬ್ಬ ವ್ಯಕ್ತಿಯ ಮತ ಎರಡಾಗಿ ಬದಲಾಗುತ್ತಿದೆ. ಒಂದೊಂದು ಮನೆಯಲ್ಲಿ 50ಕ್ಕೂ ಹೆಚ್ಚು ಜನ ಮತದಾರರು ವಾಸವಿದ್ದಾರೆ. ಇಷ್ಟೊಂದು ಅಕ್ರಮದ ಹಿಂದೆ ಇರುವವರು ಬಿಜೆಪಿ ಪಕ್ಷದ ಜೊತೆ ನಿಂತಿದ್ದಾರೆ. ಈ ಅಕ್ರಮವನ್ನು ನಾವು ಪ್ರಶ್ನೆ ಮಾಡಬೇಕು. ಬಯಲಿಗೆ ಎಳೆಯಬೇಕು. ಅದಕ್ಕಾಗಿ ಬೃಹತ್ ಹೋರಾಟದ ಜೊತೆ-ಜೊತೆಯಲ್ಲಿ ಸಣ್ಣ ಸಣ್ಣ ಪ್ರಮಾಣದ ಜನಜಾಗೃತಿ ಹೋರಾಟಕ್ಕೆ ಕಾಂಗ್ರೆಸ್ ಸಜ್ಜಾಗಿದೆ ಎಂದು ಅವರು ತಿಳಿಸಿದರು.

‘ಪ್ರಜಾಪ್ರಭುತ್ವದ ಕಳ್ಳತನಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು 5 ಕೋಟಿಗೂ ಹೆಚ್ಚು ಸಹಿಗಳನ್ನು ಸಂಗ್ರಹಿಸಿ ಚುನಾವಣಾ ಆಯೋಗಕ್ಕೆ ಕಳುಹಿಸಬೇಕಿದೆ. ಮಹದೇವಪುರ ಹಾಗೂ ಆಳಂದ ಕ್ಷೇತ್ರದಲ್ಲಿ ಮತಕಳ್ಳತನ ನಡೆದಂತೆ ದೇಶದ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ನಡೆಯುತ್ತಿದೆ. ಪ್ರತಿಯೊಬ್ಬರನ್ನು ರಕ್ಷಿಸುತ್ತಿರುವುದು ನಮ್ಮ ಸಂವಿಧಾನ. ನೆಹರು, ಪಟೇಲ್, ಬಾಬುರಾಜೇಂದ್ರ ಪ್ರಸಾದ್, ಮೌಲಾನಾ ಅಬ್ದುಲ್ ಕಲಾಂ ಸೇರಿದಂತೆ ಮಹಾನ್ ವ್ಯಕ್ತಿಗಳ ತ್ಯಾಗ, ಬಲಿದಾನದಿಂದ ಈ ದೇಶ ನಿರ್ಮಾಣವಾಗಿದೆ. ಇಂತಹ ಪವಿತ್ರ ದೇಶವನ್ನ ಲೂಟಿಕೋರರಿಂದ ರಕ್ಷಿಸಲು ಪಣ ತೊಡಬೇಕು’

-ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ಉಸ್ತುವಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X