ಬೆಂಗಳೂರು | ರೈಲ್ವೆ ಲೆವೆಲ್ ಕ್ರಾಸಿಂಗ್ಗಳನ್ನು ಮೂರು ವರ್ಷಗಳಲ್ಲಿ ತೆಗೆದುಹಾಕಲು ಕ್ರಮ : ವಿ.ಸೋಮಣ್ಣ

ವಿ.ಸೋಮಣ್ಣ
ಬೆಂಗಳೂರು : ಬೆಂಗಳೂರು ನಗರದ ಸುತ್ತಮುತ್ತ 100 ಕಿಲೊಮೀಟರ್ ವ್ಯಾಪ್ತಿಯೊಳಗಿನ ಎಲ್ಲ ರೈಲ್ವೆ ಲೆವೆಲ್ ಕ್ರಾಸಿಂಗ್ಗಳನ್ನು ಮುಂದಿನ ಮೂರು ವರ್ಷಗಳಲ್ಲಿ ತೆಗೆದು ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ರವಿವಾರ ಬೆಂಗಳೂರು-ಮೈಸೂರು ರೈಲ್ವೆ ಮಾರ್ಗದ ಕೆಂಗೇರಿ-ಹೆಜ್ಜಾಲ ಭಾಗದಲ್ಲಿ ಬರುವ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ-16 (ರಾಮೋಹಳ್ಳಿ ಗೇಟ್) ಕ್ಕೆ ಬದಲಾಗಿ ರಸ್ತೆ ಕೆಳ ಸೇತುವೆಯ ನಿರ್ಮಾಣಕ್ಕೆ ಶಂಕುಸ್ಥಾಪನೆ ಮತ್ತು ಲೆವೆಲ್ ಕ್ರಾಸಿಂಗ್ ಸಂಖ್ಯೆ ಗೇಟ್ ಸಂಖ್ಯೆ 15ರ (ಚಲ್ಲಘಟ್ಟ ಗೇಟ್) ಬದಲಾಗಿ ನಿರ್ಮಿಸಲಾದ ರಸ್ತೆ ಕೆಳ ಸೇತುವೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇಶಾದ್ಯಂತ ರಸ್ತೆ ಮೇಲ್ಸೇತುವೆಗಳು, ಕೆಳಸೇತುವೆ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಭಾರತೀಯ ರೈಲ್ವೆಯೇ ಭರಿಸುತ್ತಿದೆ. 10 ವರ್ಷಗಳಲ್ಲಿ 640ಕ್ಕೂ ಹೆಚ್ಚು ರಸ್ತೆ ಕೆಳಸೇತುವೆಗಳು ಮತ್ತು ರಸ್ತೆ ಮೇಲ್ಸೇತುವೆಗಳು ಪೂರ್ಣಗೊಂಡಿವೆ. ಹೊಸದಾಗಿ ನಿರ್ಮಾಣವಾಗಿರುವ ಚಲ್ಲಘಟ್ಟ ರಸ್ತೆ ಕೆಳ ಸೇತುವೆ ಮತ್ತು ಈಗ ಕಾಮಗಾರಿ ಪ್ರಾರಂಭವಾಗಲಿರುವ ರಾಮೋಹಳ್ಳಿ ರಸ್ತೆ ಕೆಳ ಸೇತುವೆಗಳಿಂದ, ಲೆವೆಲ್ ಕ್ರಾಸಿಂಗ್ಗಳಲ್ಲಿ ವಾಹನ ಸಂಚಾರಕ್ಕೆ ಉಂಟಾಗುವ ವಿಳಂಬವು ಕಡಿಮೆಯಾಗಲಿದೆ ಎಂದು ಸೋಮಣ್ಣ ಹೇಳಿದರು.
ಮೈಸೂರು ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮೂಲಕ ಸ್ಥಳೀಯರಿಗೆ ಹೆಚ್ಚು ಉಪಯೋಗವಾಗಲಿದೆ. ಹೊಸದಾಗಿ ನಿರ್ಮಾಣವಾಗಿರುವ ಚಲ್ಲಘಟ್ಟ ರಸ್ತೆ ಕೆಳ ಸೇತುವೆ ಮತ್ತು ಈಗ ಕಾಮಗಾರಿ ಪ್ರಾರಂಭವಾಗಲಿರುವ ರಾಮೋಹಳ್ಳಿ ರಸ್ತೆ ಕೆಳ ಸೇತುವೆಗಳಿಂದ, ಲೆವೆಲ್ ಕ್ರಾಸಿಂಗ್ಗಳಲ್ಲಿ ವಾಹನ ಸಂಚಾರಕ್ಕೆ ಉಂಟಾಗುವ ವಿಳಂಬವು ಕಡಿಮೆಯಾಗಲಿದೆ. ಮೈಸೂರು ರಸ್ತೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಮೂಲಕ ಸ್ಥಳೀಯರಿಗೆ ಹೆಚ್ಚು ಉಪಯೋಗವಾಗಲಿದೆ ಎಂದು ಅವರು ತಿಳಿಸಿದರು.
ಸ್ಟೇಷನ್ ಪುನರಾಭಿವೃದ್ಧಿ ಯೋಜನೆಯಡಿಯಲ್ಲಿ ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣವನ್ನು ವಿಶ್ವ ದರ್ಜೆಗೆ ಅನುಗುಣವಾಗಿ ಪುನರಾಭಿವೃದ್ಧಿಗೊಳಿಸುವುದು. ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿ ಎರಡು ಹೊಸ ಪ್ಲಾಟ್ಫಾರ್ಮ್ಗಳನ್ನು ನಿರ್ಮಿಸಲಾಗುವುದು, ಬೆಂಗಳೂರು ಉಪನಗರ ರೈಲು ಯೋಜನೆ ಪ್ರಗತಿಯಲ್ಲಿದೆ, ಬೈಯಪ್ಪನಹಳ್ಳಿ-ಹೊಸೂರು ಮಾರ್ಗದ ಡಬ್ಲಿಂಗ್ ಪ್ರಗತಿಯಲ್ಲಿದೆ ಮತ್ತು ಬೆಂಗಳೂರು ಬಳಿ ಮೆಗಾ ಕೋಚಿಂಗ್ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸೋಮಣ್ಣ ಮಾಹಿತಿ ನೀಡಿದರು.
ಈ ವೇಳೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಪರಿಷತ್ ಸದಸ್ಯ ಟಿ.ಎನ್.ಜವರಾಯಿ, ರಿಯ ವಿಭಾಗೀಯ ಎಂಜಿನಿಯರ್ ರಾಜೀವ್ ಶರ್ಮಾ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.







