Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇವಸ್ಥಾನವನ್ನು ತೊಳೆಯುವ ಬದಲು ನಿಮ್ಮ...

ದೇವಸ್ಥಾನವನ್ನು ತೊಳೆಯುವ ಬದಲು ನಿಮ್ಮ ಮನಸ್ಸಿನ ಕೊಳೆಯನ್ನು ತೊಳೆದುಕೊಳ್ಳಿ : ಈಶ್ವರಾನಂದಪುರಿ ಸ್ವಾಮೀಜಿ

ತಾನು ಚನ್ನಕೇಶವ ದೇವಸ್ಥಾನ ಪ್ರವೇಶಿಸಿದ್ದಕ್ಕೆ ಸ್ವಚ್ಛಗೊಳಿಸಿದ ಕುರಿತು ಸ್ವಾಮೀಜಿ ಬೇಸರ

ವಾರ್ತಾಭಾರತಿವಾರ್ತಾಭಾರತಿ3 Feb 2024 1:02 PM IST
share
ದೇವಸ್ಥಾನವನ್ನು ತೊಳೆಯುವ ಬದಲು ನಿಮ್ಮ ಮನಸ್ಸಿನ ಕೊಳೆಯನ್ನು ತೊಳೆದುಕೊಳ್ಳಿ : ಈಶ್ವರಾನಂದಪುರಿ ಸ್ವಾಮೀಜಿ

ಚಿತ್ರದುರ್ಗ: ಬಾಗೂರು ಗ್ರಾಮದಲ್ಲಿರುವ ಚನ್ನಕೇಶವ ದೇವಸ್ಥಾನದಲ್ಲಿ ನಮಗೆ ಜಾತಿ ಕಾರಣಕ್ಕೆ ಗರ್ಭಗುಡಿಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ನಾವು ಹೋಗಿದ್ದೆವೆಂಬ ಕಾರಣಕ್ಕೆ ದೇವಾಲಯವನ್ನು ಸ್ವಚ್ಛಗೊಳಿಸಿದ್ದರು ಎಂದು ಹೊಸದುರ್ಗ ಕನಕ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಸಾಣೇಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿರುವ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶುಕ್ರವಾರ ನಡೆದ 'ಪರಿವರ್ತನೆಯ ಹಾದಿಯಲ್ಲಿ ಮಠಗಳು' ಗೋಷ್ಠಿಯಲ್ಲಿ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿದರು.

‘ಆ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು ಎಂದು ಮೊದಲೇ ಗೊತ್ತಿದ್ದರೆ ಕನಕದಾಸರಂತೆ ನಾವು ಕೂಡ ಪ್ರತಿಭಟನೆ ಮಾಡಿ ದೇವಾಸ್ಥಾನವನ್ನು ಪ್ರವೇಶಿಸುತ್ತಿದ್ದೆವು. ಆದರೆ, ಆ ವಿಷಯ ನಂತರ ತಿಳಿಯಿತು. ದೇವಸ್ಥಾನವನ್ನು ತೊಳೆಯುವ ಬದಲು ನಿಮ್ಮ ಮನಸ್ಸಿನ ಕೊಳೆಯನ್ನು ತೊಳೆದುಕೊಳ್ಳಿ’ ಎಂದು ಹೇಳಿದರು.

‘ವೈಕುಂಠ ಏಕಾದಶಿಯಂದು ದೇವಸ್ಥಾನದ ಆಹ್ವಾನದ ಮೇರೆಗೆ ನಾವು, ಶಾಂತವೀರ ಸ್ವಾಮೀಜಿ ಅಲ್ಲಿಗೆ ಹೋಗಿ, ದೇವಸ್ಥಾನದ ದ ಗರ್ಭಗುಡಿಯ ಪ್ರಾಂಗಣದಲ್ಲಿ ನಿಂತಿದ್ದೆವು. ಗರ್ಭಗುಡಿಗೆ ನಮ್ಮ ಪ್ರವೇಶವನ್ನು ತಡೆದರು. ಆದರೆ, ಅರ್ಚಕರ ಕುಟುಂಬದ ಹೆಣ್ಣುಮಕ್ಕಳಿಗೆ ಅವಕಾಶ ಕಲ್ಪಿಸಿದರು. ಮಠಾಧೀಶರಿಗೆ ಹೀಗಾದರೆ ಹೇಗೆ? ಮುಂದೆಂದೂ ಬಾಗೂರಿನ ಚೆನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಹೋಗುವುದಿಲ್ಲ’ ಎಂದರು.

‘ಕರ್ನಾಟಕದ ಪರಂಪರೆಯಲ್ಲಿ ಮಠಗಳ ಪಾತ್ರ ಬಹಳ ದೊಡ್ಡದಾಗಿದ್ದು, ಹಿಂದಿನಿಂದಲೂ ವೀರಶೈವ ಲಿಂಗಾಯತ ಮಠಗಳು ತಳ ಸಮುದಾಯಗಳ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಬೆಳೆಸಿವೆ’ ಎಂದು ಹೇಳಿದರು.

ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ‘ಮೀಸಲಾತಿ ಕೇಳಬೇಕಾದವರು ಸುಮ್ಮನಿದ್ದಾರೆ. ಆದರೆ, ಇಂದು ಉಳ್ಳವರೇ ಮೀಸಲಾತಿ ಕೇಳುತ್ತಿದ್ದಾರೆ. ಮೀಸಲಾತಿಗಾಗಿ ಉಳ್ಳವರು ಮತ್ತು ಬಡವರ ನಡುವೆ ದೊಡ್ಡ ಕಂದಕ ಸೃಷ್ಟಿಯಾಗಿದೆ’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X