Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವನ್ಯಜೀವಿ ಕಂಡುಬಂದರೆ ತಕ್ಷಣ 1926 ಗೆ...

ವನ್ಯಜೀವಿ ಕಂಡುಬಂದರೆ ತಕ್ಷಣ 1926 ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ13 Nov 2025 12:03 AM IST
share
ವನ್ಯಜೀವಿ ಕಂಡುಬಂದರೆ ತಕ್ಷಣ 1926 ಗೆ ಕರೆ ಮಾಡಿ: ಸಚಿವ  ಈಶ್ವರ್ ಖಂಡ್ರೆ
ವನ್ಯಜೀವಿ-ಮಾನವ ಸಂಘರ್ಷ: ನೋಡಲ್ ಅಧಿಕಾರಿಗಳ ನಿಯೋಜನೆಗೆ ಸೂಚನೆ

ಬೆಂಗಳೂರು: ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಹುಲಿಗಳು ಪದೇ ಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಿನಂಚಿನ ಪ್ರದೇಶದಲ್ಲಿ ಕ್ಯಾಮರಾ ಅಳವಡಿಸಿ, ಹುಲಿಗಳ ಸಂಚಾರದ ಮೇಲೆ 24/7 ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.

ಬುಧವಾರ ಅರಣ್ಯ ಭವನದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರೈತರು ತಮ್ಮ ಹೊಲ, ಗದ್ದೆ, ತೋಟದಲ್ಲಿ ಕೆಲಸಕ್ಕೆ ಬರುತ್ತಾರೆ ವನ್ಯಜೀವಿಗಳು ದಾಳಿ ಮಾಡುತ್ತಿವೆ. ಹೀಗಾಗಿ ಜನ ವಸತಿ, ರೈತರ ಜಮೀನಿನ ಬಳಿ ಕ್ಯಾಮರಾ ಅಳವಡಿಸಿ ನಿಗಾ ಇಟ್ಟು ಮುನ್ನೆಚ್ಚರಿಕೆ ನೀಡಿದರೆ ಜೀವಹಾನಿ, ಬೆಳೆ ಹಾನಿ ತಪ್ಪಿಸಿ ಎಂದರು.

ಮಾನವ-ವನ್ಯಜೀವಿ ಸಮಸ್ಯೆಗೆ ಅಲ್ಪಾವಧಿ ಮತ್ತು ದೀರ್ಘಕಾಲೀನ ಪರಿಹಾರ ಕ್ರಮಗಳನ್ನು ರೂಪಿಸಿ. ಥರ್ಮಲ್ ಕ್ಯಾಮರಾಗಳ ನೆರವಿನಿಂದ ನಿಗಾ ಇಡುವುದರ ಜೊತೆಗೆ ಗಸ್ತು ಹೆಚ್ಚಳ ಮಾಡಿ. ಬಂಡೀಪುರ ಮತ್ತು ನಾಗರಹೊಳೆಯ ಕಾಡಿನಂಚಿನಲ್ಲಿ ಇರುವ ಗ್ರಾಮಗಳ ಪೈಕಿ ಯಾವ ಗ್ರಾಮದಲ್ಲಿ ಹೆಚ್ಚು ಸಂಘರ್ಷ ಇದೆ ಎಂಬುದನ್ನು ಗುರುತಿಸಿ, 5-6 ಕಿ.ಮೀ. ದೂರದಲ್ಲಿ ಒಂದು ಅರಣ್ಯ ಗಸ್ತು ಶಿಬಿರ ಸ್ಥಾಪಿಸಿ, ಸ್ಥಳೀಯ ಯುವಕರನ್ನೂ ನೇಮಿಸಿಕೊಂಡು ನಿಗಾ ಇಡಲು ಕ್ರಮ ಕೈಗೊಳ್ಳಿ ಎಂದು ಅವರು ಹೇಳಿದರು.

ಯಾವುದೇ ಗ್ರಾಮದ ಬಳಿ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡಿದರೆ ಕೂಡಲೇ ಅಲ್ಲಿಗೆ ಆನೆಗಳ ಸಹಿತ ರಕ್ಷಣಾ ತಂಡ ರವಾನಿಸಿ ಕಾರ್ಯಾಚರಣೆ ನಡೆಸಬೇಕು. ಹುಲಿಗಳು ಗಾಯಗೊಂಡಿದ್ದರೆ ಅಥವಾ ವಯಸ್ಸಾಗಿದ್ದರೆ ಅಂತಹ ಹುಲಿಗಳನ್ನು ಸೆರೆ ಹಿಡಿಯಲು ಕ್ರಮ ವಹಿಸಬೇಕು. ಮಾನವ-ವನ್ಯಜೀವಿ ಸಂಘರ್ಷ ಇರುವ ಕಾನನ ಪ್ರದೇಶಕ್ಕೆ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಿ, ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿ ಸಮಸ್ಯೆ ಪರಿಹರಿಸಬೇಕು ಎಂದು ಈಶ್ವರ್ ಖಂಡ್ರೆ ಸೂಚಿಸಿದರು.

ಪರಿಸರ ಧಾರಣಾ ಸಾಮಥ್ರ್ಯ ಅಧ್ಯಯನಕ್ಕೆ ಸಮಿತಿ: ಹೆಚ್ಚುತ್ತಿರುವ ವನ್ಯಜೀವಿಗಳಿಗೆ ಅನುಗುಣವಾಗಿ ಕಾನನ ಪ್ರದೇಶ ಇದೆಯೆ?. ಈ ವನ್ಯಜೀವಿಧಾಮಗಳ ಪರಿಸರ ಧಾರಣಾ ಸಾಮಥ್ರ್ಯದ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಲು ತಜ್ಞರ ತಂಡವನ್ನು ರಚಿಸಿ, ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುವುದಕ್ಕೆ ಕಾರಣವೇನು ಎಂಬ ಬಗ್ಗೆ ಸಮಿತಿ ಅಧ್ಯಯನ ವರದಿ ನೀಡಬೇಕು. ಆ ವರದಿ ಆಧರಿಸಿ ನಾವು ಮುಂದಿನ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಸನ್ನಾ, ಲಂಟನಾ ತೆರವಿಗೆ ಸೂಚನೆ: ಸನ್ನಾ ಮತ್ತು ಲಂಟನಾ ಕಳೆ ವ್ಯಾಪಕವಾಗಿ ಅರಣ್ಯದಲ್ಲಿ ಬೆಳೆದಿದ್ದು, ಇದರಿಂದ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲು ಸಿಗದಂತಾಗಿದೆ. ಇದರಿಂದ ಆನೆಗಳು ಹೊರಬರುತ್ತಿವೆ. ಕಾಡಿನ ಸ್ವರೂಪವನ್ನೆ ನಾಶ ಮಾಡುತ್ತಿರುವ ಲಂಟನಾ, ಸನ್ನಾ ತೆರವಿಗೆ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಿ, ಬೇರೆ ರಾಜ್ಯಗಳು ಸನ್ನಾ, ಲಂಟನಾ ತೆರವಿಗೆ ಕೈಗೊಂಡಿರುವ ಕ್ರಮಗಳ ಅಧ್ಯಯನ ಮಾಡಿ, ಉತ್ತಮ ರೂಢಿ ಅಳವಡಿಸಿಕೊಳ್ಳಿ ಎಂದು ಈಶ್ವರ್ ಖಂಡ್ರೆ ಸಲಹೆ ನೀಡಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ.ರೇ ಹಾಗೂ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ:

‘ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ. ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ’

-ಈಶ್ವರ್ ಖಂಡ್ರೆ, ಅರಣ್ಯ ಮತ್ತು ಪರಿಸರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X