Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಅವಳ ಹೆಜ್ಜೆ’ ಮಹಿಳಾ ಕನ್ನಡ...

‘ಅವಳ ಹೆಜ್ಜೆ’ ಮಹಿಳಾ ಕನ್ನಡ ಕಿರುಚಿತ್ರೋತ್ಸವದ ಮೊದಲ ಆವೃತ್ತಿ; 1 ಲಕ್ಷ ನಗದು ಬಹುಮಾನ ಗೆದ್ದ ಕವಿತಾ ಬಿ.ನಾಯಕ್ ಅವರ ‘ಅನ್ ಹರ್ಡ್ ಎಕೋಸ್’

ವಾರ್ತಾಭಾರತಿವಾರ್ತಾಭಾರತಿ16 Jun 2025 11:54 PM IST
share
‘ಅವಳ ಹೆಜ್ಜೆ’ ಮಹಿಳಾ ಕನ್ನಡ ಕಿರುಚಿತ್ರೋತ್ಸವದ ಮೊದಲ ಆವೃತ್ತಿ; 1 ಲಕ್ಷ ನಗದು ಬಹುಮಾನ ಗೆದ್ದ ಕವಿತಾ ಬಿ.ನಾಯಕ್ ಅವರ ‘ಅನ್ ಹರ್ಡ್ ಎಕೋಸ್’

ಬೆಂಗಳೂರು: ಬೆಂಗಳೂರಿನಲ್ಲಿ ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿದ್ದ ಅವಳ ಹೆಜ್ಜೆ ಮಹಿಳಾ ಕನ್ನಡ ಕಿರುಚಿತ್ರೋತ್ಸವದಲ್ಲಿ ನಿರ್ದೇಶಕಿ ಕವಿತಾ ಬಿ.ನಾಯಕ್ ಅವರ ‘ಅನ್ ಹರ್ಡ್ ಎಕೋಸ್’ ಎಂಬ ಕನ್ನಡ ಕಿರುಚಿತ್ರವು ಪ್ರತಿಷ್ಠಿತ ‘ಅವಳ ಹೆಜ್ಜೆ’ ಪ್ರಶಸ್ತಿ, ಒಂದು ಲಕ್ಷ ರೂ.ನಗದು ಬಹುಮಾನ ಗೆದ್ದಿದೆ.

ಈ ಉತ್ಸವದಲ್ಲಿ ಎಂಟು ಆಕರ್ಷಕ ಕಿರುಚಿತ್ರಗಳನ್ನು ಪ್ರದರ್ಶಿಸಲಾಯಿತು. ಎಂಟು ನಿರ್ದೇಶಕಿಯರೊಂದಿಗೆ ಸಂವಾದವನ್ನು ನಡೆಸಲಾಯಿತು. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕವಿತಾ ಬಿ.ನಾಯಕ್ ರಂಗಭೂಮಿ ಕಲಾವಿದೆ ಮತ್ತು ನಿರ್ದೇಶಕಿ. ಬದುಕು ಕಮ್ಯೂನಿಟಿ ಕಾಲೇಜಿನಲ್ಲಿ ನಿರ್ದೇಶನ ಮತ್ತು ಚಿತ್ರಕಥೆಗಳಲ್ಲಿ ಡಿ ಮಾ ಪಡೆದು ‘ಹದಿನೇಳೆಂಟು’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಸಿನಿಮಾ ಮಾಧ್ಯಮದ ಮೂಲಕ ಮಹಿಳೆಯರ ಸಮಸ್ಯೆಗಳನ್ನು ಪ್ರೇಕ್ಷಕರಿಗೆ ತಲುಪಿಸಬೇಕೆಂಬ ಅವರ ಬದ್ಧತೆ, ‘ಅನ್‍ಹರ್ಡ್ ಎಕೋಸ್’ ನ ಮೂಲಕ ಮುಂದುವರೆಸಿದ್ದಾರೆ. ಈ ಚಿತ್ರವು ಪ್ರೇಕ್ಷಕರ ಆಯ್ಕೆ ಬಹುಮಾನವನ್ನು ಸಹ ಪಡೆದುಕೊಂಡಿದೆ. ಕ್ಷಮಾ ಅಂಬೆಕಲ್ಲು ಅವರ ಕಿರುಚಿತ್ರ ‘ಪುಷ್ಪ’, ವಿದ್ಯಾರ್ಥಿನಿ ನಿರ್ದೇಶಕಿ ಎಂಬ ವಿಶೇಷ ವರ್ಗದಲ್ಲಿ ನಗದು ಬಹುಮಾನ ಪಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಕ್ಷಮಾ, ಮೈಸೂರಿನ ಅಮೃತ ವಿಶ್ವ ವಿದ್ಯಾಪೀಠದಲ್ಲಿ ದೃಶ್ಯ ಸಂವಹನದಲ್ಲಿ ಬಿ.ಎಸ್ಸಿ. ಪದವಿ ಪಡೆಯುತ್ತಿದ್ದಾರೆ.

ನಗದು ಬಹುಮಾನ: ಮಂದಾರ ಬಟ್ಟಲಹಳ್ಳಿ ನಿರ್ದೇಶನದ ‘ದಿ ಲಾಸ್ಟ್ ಹ್ಯಾಪಿ ಕಸ್ಟಮರ್’ (2024), ಸಿಂಚನಾ ಶೈಲೇಶ್ ನಿರ್ದೇಶನದ ‘ಕೇಕ್‍ವಾಕ್’ (2025) ಮತ್ತು ಸತ್ಯ ಪ್ರಮೋದ ಎಂ.ಎಸ್ ನಿರ್ದೇಶನದ ‘ಆನ್‍ಲೈನ್’ (2025) ಕಿರುಚಿತ್ರಗಳು ಚೊಚ್ಚಲ ನಿರ್ದೇಶನದ ನಗದು ಬಹುಮಾನಗಳನ್ನು ಪಡೆದುಕೊಂಡವು. ಹಾವೇರಿ ಜಿಲ್ಲೆಯ ರೈತ ಮಹಿಳೆ ರೇಣುಕಾ ಯಲ್ಲಪ್ಪ ಮಲ್ಲಿಗಾರ್ ನಿರ್ಮಿಸಿದ ‘ನೀರೆಲ್ಲವೂ ತೀರ್ಥ’ (2025) ಎಂಬ ಕಿರುಚಿತ್ರವನ್ನು ಸ್ಪರ್ಧಾತ್ಮಕವಲ್ಲದ ವಿಭಾಗದಲ್ಲಿ ಪ್ರದರ್ಶಿಸಲಾಯಿತು.

ಚಿತ್ರೋತ್ಸವದ ಪ್ರಮುಖ ಆಕರ್ಷಣೆ, ಪತ್ರಕರ್ತೆ ಸುನಯನ ಸುರೇಶ್ ನಿರ್ವಹಿಸಿದ ಚರ್ಚಾಗೋಷ್ಠಿ ‘ಕನ್ನಡ ಸಿನಿಮಾದಲ್ಲಿ ಮಹಿಳಾ ಧ್ವನಿ’ಯಲ್ಲಿ ಚಲನಚಿತ್ರ ನಿರ್ದೇಶಕಿ ರೂಪಾ ರಾವ್ (ಗಂಟು ಮೂಟೆ), ಟೆಂಟ್ ಸಿನೆಮಾ ಶಾಲೆಯ ಸ್ಥಾಪಕ ನಿರ್ದೇಶಕಿ ಶೋಭಾ ಸಿ.ಎಸ್. ಮತ್ತು ಮುಖ್ಯ ಅತಿಥಿ ಡಿ.ಸುಮನ್ ಕಿತ್ತೂರು ಭಾಗವಹಿಸಿದ್ದರು.

ತಮ್ಮ ಜಾತಕಗಳು ಹೊಂದಿಕೆಯಾಗಲಿಲ್ಲ ಎಂಬ ಕಾರಣಕ್ಕೆ ತನ್ನ ಚಿತ್ರಕ್ಕೆ ಹಣಕಾಸು ಒದಗಿಸಲು ನಿರಾಕರಿಸಿದ ನಿರ್ಮಾಪಕರ ಬಗ್ಗೆ ಸುಮನ್ ಕಿತ್ತೂರು ಒಂದು ಸ್ವಾರಸ್ಯಕರ ಅನುಭವವನ್ನು ಹಂಚಿಕೊಂಡರು.

ರೂಪಾ ರಾವ್ ಅವರು ಚಲನಚಿತ್ರೋದ್ಯಮದಲ್ಲಿ ಎದುರಿಸಿದ ಲಿಂಗ ತಾರತಮ್ಯದ ಬಗ್ಗೆ ಮುಕ್ತವಾಗಿ ಮಾತನಾಡಿ, ‘ನಿರ್ಮಾಪಕರು ಮತ್ತು ವಿತರಕರು ನನ್ನನ್ನು ನೇರವಾಗಿ ಉದ್ದೇಶಿಸಿ ಮಾತನಾಡುವ ಬದಲು ನನ್ನ ಪುರುಷ ಸಹಾಯಕರೊಂದಿಗೆ ಮಾತನಾಡುತ್ತಿದ್ದರು. ಹಲವು ನಿರಾಕರಣೆಗಳು ಮತ್ತು ಆರ್ಥಿಕ ಸಂಕಷ್ಟಗಳ ನಡುವೆಯೂ ‘ಹುಚ್ಚು ಮತ್ತು ಉತ್ಸಾಹ’ ಇದ್ದರೆ ಮಾತ್ರ ಚಲನಚಿತ್ರ ನಿರ್ದೇಶಕರು ಮುಂದುವರೆಯಲು ಸಾಧ್ಯ’ ಎಂದರು.

‘ಇದು ಕೇವಲ ಕಿರುಚಿತ್ರ ಪ್ರದರ್ಶನವಲ್ಲ-ಮಹಿಳೆಯರ ಅನುಭವ, ದೃಷ್ಟಿಕೋನಗಳಿಗೆ ವೇದಿಕೆ ನೀಡುವ, ಲಿಂಗ ಸಮಾನತೆಯ ಚಿಂತನೆಗೆ ಉತ್ತೇಜನ ನೀಡುವ ಒಂದು ಚಳವಳಿ’ ಎಂದು ಗುಬ್ಬಿವಾಣಿ ಸ್ಥಾಪಕ ಟ್ರಸ್ಟಿ ಮಾಳವಿಕಾ ತಿಳಿಸಿದರು.

‘ಈ ಉತ್ಸವದ ಮೊದಲ ಆವೃತ್ತಿಯ ಯಶಸ್ಸಿನಿಂದ ನಮಗೆ ತುಂಬಾ ಪ್ರೋತ್ಸಾಹ ಸಿಕ್ಕಿದೆ. ಮುಂದಿನ ವರ್ಷದಲ್ಲಿ ಕರ್ನಾಟಕದಾದ್ಯಂತ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದಕ್ಕಾಗಿ ಎದುರು ನೋಡುತ್ತೇವೆ’

-ಶಾಂತಲಾ ದಾಮ್ಲೆ, ಚಿತ್ರೋತ್ಸವ ನಿರ್ದೇಶಕಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X