Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದುಡಿಯುವ ವರ್ಗದ ಮಹಿಳೆಯರಿಗೆ ʼಗ್ಯಾರಂಟಿ...

ದುಡಿಯುವ ವರ್ಗದ ಮಹಿಳೆಯರಿಗೆ ʼಗ್ಯಾರಂಟಿ ʼ ಪ್ರಯೋಜನ ಸಿಗುತ್ತಿದೆ : ಸಚಿವ ಕೃಷ್ಣ ಬೈರೇಗೌಡ‌

"ಮಹಿಳೆಯರನ್ನು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದು ಖಂಡನೀಯ "

ವಾರ್ತಾಭಾರತಿವಾರ್ತಾಭಾರತಿ14 April 2024 8:00 PM IST
share
ದುಡಿಯುವ ವರ್ಗದ ಮಹಿಳೆಯರಿಗೆ ʼಗ್ಯಾರಂಟಿ ʼ ಪ್ರಯೋಜನ ಸಿಗುತ್ತಿದೆ : ಸಚಿವ ಕೃಷ್ಣ ಬೈರೇಗೌಡ‌

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿಗಳಿಂದ ಬಡವರಿಗೆ, ಗಾರ್ಮೆಂಟ್ಸ್ ಕೆಲಸ ಮಾಡುವ, ಬೀದಿ ಬದಿ ತರಕಾರಿ ಮಾರುವ, ಮನೆಗೆಲಸ ಮಾಡುವ, ಹೊಲದಲ್ಲಿ ಕೆಲಸ ಮಾಡುವ ರೈತ ಮಹಿಳೆಗೆ ಪ್ರಯೋಜನ ಸಿಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ರವಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಲ‌ಬ್ ಗೆ ಹೋಗುವ ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿಲ್ಲ. ದುಡಿಯುವ ಮಹಿಳೆಯರಿಗೆ ನೀಡುತ್ತಿದ್ದೇವೆ. ದುಡಿಯುವ ವರ್ಗದ ಮಹಿಳೆಯರನ್ನು ದಾರಿ ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದು ಖಂಡನೀಯ ಎಂದರು.

ಕಳೆದ 10 ವರ್ಷದಿಂದ ಬಿಜೆಪಿ ಆಡಳಿತದಲ್ಲಿ ಆರ್ಥಿಕ ವ್ಯವಸ್ಥೆ ಬದಲಾಗಿ ಹೋಗಿದೆ. ಸ್ವಾತಂತ್ರ್ಯ ಹೋರಾಟಕ್ಕೂ ಮುಂಚಿತವಾಗಿ ಬ್ರಿಟಿಷ್ ರಾಜ್ ವ್ಯವಸ್ಥೆ ಇತ್ತು, ಈಗಿನ ಬಿಜೆಪಿ ಆಡಳಿತದಲ್ಲಿ ಬಿಲಿಯನೇರ್ ರಾಜ್ ಅಥವಾ ಕುಬೇರರ ರಾಜ್ ಆಗಿದೆ. ಬಿಜೆಪಿ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಉದ್ಯಮಿಗಳ 20 ಲಕ್ಷ ಕೋಟಿ ಸಾಲಮನ್ನಾ ಮಾಡಲಾಗಿದೆ ಎಂದು ಅವರು ಹೇಳಿದರು.

10 ಲಕ್ಷ ಕೋಟಿಯಷ್ಟು ಶ್ರೀಮಂತರ ತೆರಿಗೆ ಕಡಿಮೆ ಮಾಡಲಾಗಿದೆ. ಇದರಿಂದ ಅಸಮಾನತೆ ಹೆಚ್ಚಾಗಿದೆ. ಈ ಭಾರವನ್ನು ಜನರ ಮೇಲೆ ಹಾಕಲಾಗಿದೆ. ಉದ್ಯೋಗ ಸಿಗದೆ ಯುವ ಜನತೆ ಪರದಾಡುತ್ತಿದೆ. ಶೇ.70ರಷ್ಟು ಬಡವರು, ರೈತರು, ಜನ ಸಾಮಾನ್ಯರ ಜನರ ಜೀವನ ಬೆಲೆ ಏರಿಕೆ ಸೇರಿದಂತೆ ಅನೇಕ ಆರ್ಥಿಕ ಸಂಕಷ್ಟಗಳಿಗೆ ಸಿಲುಕಿ ಕೊಂಡಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಈ ಅಸಮಾನತೆ ತೊಲಗಲು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತು. ಇದರಿಂದ 5 ಕೋಟಿ ಕನ್ನಡಿಗರಿಗೆ ಇದರ ಪ್ರಯೋಜನ ತಲುಪಿದೆ. 1.40 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಿದೆ. ಶಕ್ತಿ ಯೋಜನೆಯಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟ ಮಹಿಳೆ ದಾರಿ ತಪ್ಪಿದ್ದಾರೆಯೇ? ಎಂದು ಅವರು ಪ್ರಶ್ನಿಸಿದರು.

ತವರು ಮನೆಗೆ ಹೋಗಲು, ಮಗಳನ್ನು ನೋಡಲು ಹೋಗುವವರು ದಾರಿ ತಪ್ಪಿದ್ದಾರೆಯೇ? ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವೇದಾಂತನ ತಾಯಿ ಈತನ ಶಾಲಾ ಶುಲ್ಕ ಕಟ್ಟಿ ಓದಿಸಿದ್ದಾರೆ, ಇವರು ದಾರಿ ತಪ್ಪಿದ್ದಾರೆಯೇ? ಇಂತಹವರಿಗೆ ನೆರವಾಗಿದ್ದು ಗ್ಯಾರಂಟಿ ಯೋಜನೆಗಳು. ಮಾಡಬಾರದ್ದೆಲ್ಲಾ ಮಾಡಿ ಮೇಲಿನ ಸ್ಥಾನದಲ್ಲಿ ಕುಳಿತು ದುಡಿಯುವ ವರ್ಗದ ಮಹಿಳೆಯರನ್ನು ಅವಮಾನ ಮಾಡುವುದು ಯಾವ ಸಂಸ್ಕೃತಿ ಎಂದು ಅವರು ಕಿಡಿಗಾರಿದರು.

ಮಹಿಳೆಯರ ದುಡಿಮೆಗೆ ಮೌಲ್ಯವಿಲ್ಲವೇ? ಮಹಿಳೆ ದುಡಿಯದೆ ಹೋದರೆ ನಾನು, ನೀವು ಯಾರೂ ಉನ್ನತಸ್ಥಾನಕ್ಕೆ ಹೋಗಲು ಸಾಧ್ಯವಿಲ್ಲ. ಎಲೆಮರೆಕಾಯಿಯಂತೆ ಇದ್ದ ಅಸಂಖ್ಯಾತ ಮಹಿಳೆಯರು ಈಗ ಮುಂದೆ ಬರುತ್ತಿದ್ದಾರೆ. ಗಂಡಸರು ಮಾಡಬಾರದ ಕೆಲಸ ಮಾಡಿ ಹೆಂಗಸರನ್ನು ದಾರಿ ತಪ್ಪಿದ್ದಾರೆ ಎನ್ನುವುದು ಕೆಟ್ಟ ಮನಸ್ಥಿತಿ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇದೇ ಕುಮಾರಸ್ವಾಮಿ ಅವರು ದಾರಿ ತಪ್ಪಿದ ಮಗ ಎಂದು ಸದನದಲ್ಲಿ ಹೇಳಿದ್ದರು. ಅವರು ಮಾಡಿರುವುದನ್ನು ಅವರೇ ಹೇಳಿಕೊಂಡು ಮಹಿಳೆಯರಿಗೆ ಅವಮಾನ ಮಾಡುತ್ತಿದ್ದಾರೆ. ಜೆಡಿಎಸ್ ಪಕ್ಷದ ಗುರುತು ಮಹಿಳೆ. ಆ ಮಹಿಳೆಗೆ ಈಗ ಕಮಲ ಎಂದು ಹೆಸರು ಕೊಟ್ಟಿದ್ದಾರೆ. ಜನತಾದಳದವರು ಮಹಿಳೆಯರ ಕೈಯಲ್ಲಿ ಕೇವಲ ದುಡಿಸಿಕೊಳ್ಳುತ್ತಾರೆ. ಕಾಂಗ್ರೆಸ್ ಮಹಿಳೆಯ ಗ್ಯಾರಂಟಿಯನ್ನು ಗುರುತಿಸಿ ಸಂಬಳ ಕೊಡುತ್ತಿದ್ದೇವೆ ಎಂದು ಅವರು ಹೇಳಿದರು.

ಹೆಸರಿಗೆ ಪ್ರಾದೇಶಿಕ ಪಕ್ಷ ಆದರೆ ಬಿಜೆಪಿಯ ತುತ್ತೂರಿ ಊದುತ್ತಿದ್ದಾರೆ. ಹೆಸರಿನಲ್ಲಿ ಮಾತ್ರ ಜಾತ್ಯತೀತವಿದೆ ಆದರೆ ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ಮಹಿಳೆಯರನ್ನು ಅವಮಾನಿಸುವುದನ್ನು ಕಾಂಗ್ರೆಸ್ ಖಡಾಖಂಡಿತವಾಗಿ ಖಂಡಿಸುತ್ತದೆ. ಇದು ಮಾನವೀಯ ಸಮಾಜಕ್ಕೆ ಅಪಮಾನ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಮೋದಿ ಮಾತಿಗೆ ಮರುಳಾಗಬೇಡಿ, ಆರೆಸ್ಸೆಸ್ ಅವರು ಈ ದೇಶದ ವಿರೋಧಿಗಳು ಎಂದು ಕುಮಾರಸ್ವಾಮಿ ಹೇಳುತ್ತಿದ್ದರು. ಯಾರದೋ ಮೇಲಿನ ಸಿಟ್ಟನ್ನು ಮಹಿಳೆಯರ ಮೇಲೆ ಕಾರುತ್ತಿದ್ದಾರೆ. ಅವರಿಗೆ ಬಿಜೆಪಿ ಸೇರಿ ಏನೂ ಮಾತನಾಡಬೇಕು, ಯಾರನ್ನು ವಿರೋಧಿಸಬೇಕು ಎಂದು ತಿಳಿಯುತ್ತಿಲ್ಲ ಎಂದು ಕಷ್ಣ ಬೈರೇಗೌಡ ಹೇಳಿದರು.

ಗ್ಯಾರಂಟಿ ಯೋಜನೆಗಳ ಹಣ ದುಡಿಯುವ ವರ್ಗದ ಜನರಿಂದ ಬಂದಿರುವುದು. ಇದೆಲ್ಲ ಸಾಮಾನ್ಯ ಜನರ ತೆರಿಗೆ ಹಣದದಿಂದ ಕೊಡುತ್ತಿರುವ ಹಣ. ಬಿಜೆಪಿ ಶ್ರೀಮಂತರ ತೆರಿಗೆ ಕಡಿಮೆ ಮಾಡಿದೆ, ಅದಕ್ಕೆ ವಿರುದ್ಧವಾಗಿ ನಾವು ಜನರ ಹಣವನ್ನು ಜನರಿಗೆ ನೀಡುತ್ತಿದ್ದೇವೆ ಎಂದು ಕೃಷ್ಣ ಬೈರಗೌಡ ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮತ್ತು ಸಾಮಾಜಿಕ ಜಾಲತಾಣದ ಸಹ ಅಧ್ಯಕ್ಷ ವಿಜಯ್ ಮತ್ತಿಕಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X