Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾರ್ತಾಭಾರತಿ ಚಾನಲ್ ನ ಚರ್ಚಾ...

ವಾರ್ತಾಭಾರತಿ ಚಾನಲ್ ನ ಚರ್ಚಾ ಕಾರ್ಯಕ್ರಮವನ್ನು ಬ್ಲಾಕ್ ಮಾಡಿದ ಯೂಟ್ಯೂಬ್

ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿಗೆ, ಲೈಂಗಿಕ ಕಿರುಕುಳ ಪ್ರಕರಣ ಕುರಿತ ಡಿಬೇಟ್

ವಾರ್ತಾಭಾರತಿವಾರ್ತಾಭಾರತಿ21 July 2023 2:06 PM IST
share
ವಾರ್ತಾಭಾರತಿ ಚಾನಲ್ ನ ಚರ್ಚಾ ಕಾರ್ಯಕ್ರಮವನ್ನು ಬ್ಲಾಕ್ ಮಾಡಿದ ಯೂಟ್ಯೂಬ್

ಮಂಗಳೂರು: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಸಾರ್ವಜನಿಕವಾಗಿ ನಗ್ನಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ ಹೇಯ ಕೃತ್ಯದ ಬಗ್ಗೆ ವಾರ್ತಾಭಾರತಿ ಡಿಜಿಟಲ್ ಚಾನಲ್ ನಡೆಸಿದ್ದ ಚರ್ಚಾ ಕಾರ್ಯಕ್ರಮವನ್ನು ಯೂಟ್ಯೂಬ್ ಯಾವುದೇ ವೀಕ್ಷಕರಿಗೆ ಕಾಣಿಸದಂತೆ ಬ್ಲಾಕ್ ಮಾಡಿದೆ.

ಮಣಿಪುರದಲ್ಲಿ ನಡೆದ ಘಟನೆಯ ಬಗ್ಗೆ ಗುರುವಾರ ರಾತ್ರಿ 8 ಗಂಟೆಗೆ "ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ, ದೇಶವನ್ನೇ ಬೆಚ್ಚಿ ಬೀಳಿಸಿದ ಪ್ರಕರಣ" ಎಂಬ ಹೆಸರಿನಲ್ಲಿ ವಾರ್ತಾಭಾರತಿ ಯೂಟ್ಯೂಬ್ ಚಾನಲ್ ನಲ್ಲಿ ದಿ ಬಿಗ್ ಡಿಬೇಟ್ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಪ್ರಸಾರವಾದ ಒಂದು ಗಂಟೆಯೊಳಗೆ 8000 ಕ್ಕೂ ಹೆಚ್ಚು ವೀಕ್ಷಕರು ಅದನ್ನು ನೋಡಿದ್ದರು. ಆದರೆ ಶುಕ್ರವಾರ ಯೂಟ್ಯೂಬ್ ಆ ಕಾರ್ಯಕ್ರಮದ ವೀಡಿಯೊವನ್ನು private (locked) ಎಂದು ಗುರುತಿಸಿ ಬ್ಲಾಕ್ ಮಾಡುವ ಮೂಲಕ ಯಾವುದೇ ಹೊಸ ವೀಕ್ಷಕರಿಗೆ ಕಾರ್ಯಕ್ರಮ ಕಾಣದಂತೆ ಮಾಡಿಬಿಟ್ಟಿದೆ.

ಕೇಂದ್ರ ಸರಕಾರ ಗುರುವಾರ ತಮ್ಮ ವೇದಿಕೆಗಳಿಂದ ಮಣಿಪುರ ಘಟನೆಯ ವೀಡಿಯೊಗಳನ್ನು ಹಾಗು ಅದಕ್ಕೆ ಸಂಬಂಧಿಸಿದ ಎಲ್ಲ ಪ್ರಚೋದನಕಾರಿ ಪೋಸ್ಟ್ ಗಳನ್ನು ತೆಗೆದು ಹಾಕುವಂತೆ ಟ್ವಿಟರ್, ಫೇಸ್ ಬುಕ್, ಯೂಟ್ಯೂಬ್ ಹಾಗು ಇನ್ಸ್ಟಾ ಗ್ರಾಂ ಗಳಿಗೆ ಸೂಚನೆ ನೀಡಿತ್ತು.

ಆದರೆ ವಾರ್ತಾಭಾರತಿಯ ಚರ್ಚಾ ಕಾರ್ಯಕ್ರಮದಲ್ಲಿ ಮಣಿಪುರ ಘಟನೆಯ ವಿಡಿಯೋವನ್ನಾಗಲಿ, ಫೋಟೋವನ್ನಾಗಲಿ ಬಳಸಿಲ್ಲ. ಆ ಡಿಬೇಟ್ ನಲ್ಲಿ ಒಮ್ಮೆ ಪ್ರಕರಣದ ಆರೋಪಿಗಳನ್ನು ಮಾತ್ರ ತೋರಿಸಲಾಗಿತ್ತು. ಘಟನೆಯಲ್ಲಿ ಸಂತ್ರಸ್ತ ಮಹಿಳೆಯರ ಫೋಟೋ, ವಿಡಿಯೋ ಯಾವುದನ್ನೂ ಕಾರ್ಯಕ್ರಮದಲ್ಲಿ ಬಳಸಿಲ್ಲ. ಅಲ್ಲದೆ ಮಣಿಪುರ ಘಟನೆ ಕುರಿತು ಹಲವಾರು ಯೂಟ್ಯೂಬ್ ಚಾನಲ್ ಗಳಲ್ಲಿ ವಿಶ್ಲೇಷಣೆ , ಚರ್ಚೆಗಳು ಪ್ರಸಾರವಾಗಿದೆ.

ವಾರ್ತಾಭಾರತಿಯ ಚರ್ಚಾ ಕಾರ್ಯಕ್ರಮಕ್ಕೆ ಬಿಜೆಪಿ ವಕ್ತಾರರನ್ನು ಕಳಿಸಲು ಕೇಳಿದಾಗ "ಈಗಾಗಲೇ ಪ್ರಧಾನಿ ಆ ಘಟನೆಯನ್ನು ಖಂಡಿಸಿದ್ದಾರೆ. ಇನ್ನು ನಾವು ಅದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ವಕ್ತಾರರನ್ನು ಕಳಿಸುವುದಿಲ್ಲ" ಎಂದು ಬಿಜೆಪಿ ಮಾಧ್ಯಮ ಘಟಕ ಹೇಳಿತ್ತು. ಹಾಗಾಗಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್, ಜೆಡಿಎಸ್, ಹಾಗು ಇಬ್ಬರು ಸಾಮಾಜಿಕ ಕಾರ್ಯಕರ್ತೆಯರು ಭಾಗವಹಿಸಿ ಮಾತನಾಡಿದ್ದರು. ಚಾನಲ್ ನ ಪರವಾಗಿ ಹಿರಿಯ ಆಂಕರ್ ಮಂಜುಳಾ ಮಾಸ್ತಿಕಟ್ಟೆ ಕಾರ್ಯಕ್ರಮ ನಡೆಸಿಕೊಟ್ಟಿದ್ದರು.

ಈಗ ಯೂಟ್ಯೂಬ್ ಆ ಕಾರ್ಯಕ್ರಮವನ್ನೇ ಬ್ಲಾಕ್ ಮಾಡಿದೆ. "ಕಾರ್ಯಕ್ರಮ ಯೂಟ್ಯೂಬ್ ನ ಪಾಲಿಸಿ ಉಲ್ಲಂಘಿಸಿರಲಿಕ್ಕಿಲ್ಲ , ಆದರೂ ಅದು ವೀಕ್ಷಕರಿಗೆ ಸೂಕ್ತವಲ್ಲ" ಎಂಬ ಕಾರಣಕ್ಕಾಗಿ ಬ್ಲಾಕ್ ಮಾಡುತ್ತಿದ್ದೇವೆ ಎಂದು ಯೂಟ್ಯೂಬ್ ಹೇಳಿದೆ. ಈ ಬಗ್ಗೆ ಯೂಟ್ಯೂಬ್ ಗೆ ವಾರ್ತಾಭಾರತಿ ಮನವಿ ಸಲ್ಲಿಸಿದ್ದು ವೀಡಿಯೊ ಮೇಲೆ ಹಾಕಿರುವ ನಿರ್ಬಂಧವನ್ನು ತೆಗೆದುಹಾಕಬೇಕು ಎಂದು ಹೇಳಿತ್ತು. ಆ ಮನವಿಯನ್ನೂ ಯೂಟ್ಯೂಬ್ ತಿರಸ್ಕರಿಸಿದೆ.

ಈ ಡಿಬೇಟ್ ವಿಡಿಯೋ dailymotion.com ನಲ್ಲಿ ಲಭ್ಯವಿದೆ. ವಿಡಿಯೋ ಲಿಂಕ್ ಇಲ್ಲಿದೆ https://www.dailymotion.com/video/x8mojgx










share
ವಾರ್ತಾಭಾರತಿ
ವಾರ್ತಾಭಾರತಿ
Next Story
X