Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸ್ಪೀಕರ್ ಸ್ಥಾನಕ್ಕೆ ಝಮೀರ್ ಅಹ್ಮದ್...

ಸ್ಪೀಕರ್ ಸ್ಥಾನಕ್ಕೆ ಝಮೀರ್ ಅಹ್ಮದ್ ಅಗೌರವ ತೋರಿಲ್ಲ: ಸಿಎಂ ಸಿದ್ದರಾಮಯ್ಯ

‘ವಿಪಕ್ಷಗಳು ನೋಟಿಸ್ ನೀಡಿದರೆ ಸರಕಾರ ಚರ್ಚೆಗೆ ಸಿದ್ಧ’

ವಾರ್ತಾಭಾರತಿವಾರ್ತಾಭಾರತಿ11 Dec 2023 7:04 PM IST
share
ಸ್ಪೀಕರ್ ಸ್ಥಾನಕ್ಕೆ ಝಮೀರ್ ಅಹ್ಮದ್ ಅಗೌರವ ತೋರಿಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ‘ಸ್ಪೀಕರ್ ಸ್ಥಾನಕ್ಕೆ ಸಚಿವ ಝಮೀರ್ ಅಹ್ಮದ್ ಖಾನ್ ಅಗೌರವ ತೋರುವುದಾಗಲಿ, ಶಾಸಕರ ಹಕ್ಕುಗಳಿಗೆ ಚ್ಯುತಿ ಬರುವ ರೀತಿಯಲ್ಲಿ ಹೇಳಿಕೆ ನೀಡಿಲ್ಲ ಎಂಬುದನ್ನು ಈಗಾಗಲೆ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಬಿಜೆಪಿ ಶಾಸಕರು ಈ ವಿಚಾರದ ಕುರಿತು ಚರ್ಚೆ ಮಾಡಲೇಬೇಕಾದರೆ ಸ್ಪೀಕರ್ ಗೆ ನೋಟಿಸ್ ನೀಡಲಿ, ತಾವು ಅನುಮತಿ ನೀಡಿದರೆ ಚರ್ಚೆಗೆ ನಾವು ಸಿದ್ಧ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ಬರಗಾಲದ ಕುರಿತು ನಡೆದ ಚರ್ಚೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸದಸ್ಯರ ಧರಣಿ ನಡುವೆಯೇ ಸಚಿವ ಕೃಷ್ಣ ಬೈರೇಗೌಡ ಉತ್ತರ ನೀಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಈ ವಿಷಯ ಪ್ರಮುಖವಾಗಿದ್ದರೆ ಒಂದು ವಾರ ಅಧಿವೇಶನ ನಡೆದಿದೆ. ಆಗ ಏಕೆ ಬಿಜೆಪಿಯವರು ಇದನ್ನು ಪ್ರಸ್ತಾವ ಮಾಡಲಿಲ್ಲ. ರಾಜ್ಯದ 223 ತಾಲೂಕುಗಳಲ್ಲಿ ಬರಗಾಲ ಇದೆ. ಸರಕಾರ ಬರ ನಿರ್ವಹಣೆಗೆ ಕ್ರಮ ಕೈಗೊಂಡಿದೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಉದ್ಯೋಗ ಖಾತರಿ ಅಡಿ ಉದ್ಯೋಗ, ಗುಳೆ ಹೋಗುವುದನ್ನು ತಪ್ಪಿಸಲು ಆದ್ಯತೆ ನೀಡಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್ ಗಳ ಖಾತೆಯಲ್ಲಿ 800-900 ಕೋಟಿ ರೂ.ಗಳಷ್ಟು ಹಣ ಇದೆ. ಬರಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ 100 ದಿನಗಳ ಕೆಲಸವನ್ನು 150 ದಿನಗಳಿಗೆ ಹೆಚ್ಚಿಸಲು ಅವಕಾಶವಿದೆ. ಆದರೆ, ಎರಡು ತಿಂಗಳಿನಿಂದ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಈ ಬಗ್ಗೆ ಮನವಿ ಮಾಡಿದರೂ ಯಾವುದೆ ಉತ್ತರ ನೀಡಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ಝಮೀರ್ ಅಹ್ಮದ್ ನೀಡಿರುವ ಹೇಳಿಕೆ ಸಂಬಂಧ ಸದನದಲ್ಲಿ ಚರ್ಚೆ ಮಾಡಲು ಸ್ಪೀಕರ್ ಗೆ ನೋಟಿಸ್ ನೀಡದೆ ಏಕಾಏಕಿ ಚರ್ಚೆ ಆರಂಭಿಸಿದರೆ ಹೇಗೇ? ಇವರು ನೋಟಿಸ್ ನೀಡಿ, ನೀವು ಅನುಮತಿಸಿದರೆ ಸರಕಾರ ಚರ್ಚೆಗೆ ಸಿದ್ಧವಾಗಿದೆ. ನಾವು ಪಲಾಯನ ಮಾಡಲ್ಲ. ಉತ್ತರ ಕೊಡಲು ಸಿದ್ಧವಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಉತ್ತರ ಕರ್ನಾಟಕದ ವಿರೋಧಿಗಳು. ಚರ್ಚೆ ಮಾಡಿದರೆ ಇವರ ವೈಫಲ್ಯಗಳು ಹೊರಗೆ ಬರುತ್ತವೆ ಎಂಬ ಆತಂಕದಲ್ಲಿದ್ದಾರೆ. ನಮ್ಮ ಉತ್ತರ ಕೇಳಲು ಇವರು ತಯಾರಿಲ್ಲ. ನಮಗೆ ಸಂವಿಧಾನದ ಪಾಠ ಮಾಡುವ ಇವರಿಗೆ ಸಂವಿಧಾನದ ಮೇಲೆ ನಂಬಿಕೆ ಇದೆಯೇ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಸೇರಿದಂತೆ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆಗೆ ನಾವು ಸಿದ್ಧವಾಗಿದ್ದೇವೆ. ಆದರೆ, ಇವರು ಚರ್ಚೆಗೆ ಸಿದ್ಧರಿಲ್ಲ. ಸದನದ ಸಮಯವನ್ನು ಹಾಳು ಮಾಡುವ ಮೂಲಕ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಬಿಜೆಪಿಯವರಂತೆ ಮೊಂಡುತನ ಮಾಡಿ, ಜನವಿರೋಧಿ ಕೆಲಸ ಮಾಡುವ, ಸಂವಿಧಾನ, ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆಯ ವಿರೋಧಿಗಳನ್ನು ನಾನು ಕಂಡಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X