Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ನಾಯಿಗಳ ಹಾವಳಿಯಿಂದ ಸಾವು ಪ್ರಕರಣ; ಗ್ರಾಮ...

ನಾಯಿಗಳ ಹಾವಳಿಯಿಂದ ಸಾವು ಪ್ರಕರಣ; ಗ್ರಾಮ ಪಂಚಾಯತ್ ಗಳಲ್ಲಿ ಅನುದಾನ ಲಭ್ಯವಿಲ್ಲ

ಜಿ. ಮಹಾಂತೇಶ್ಜಿ. ಮಹಾಂತೇಶ್21 July 2023 10:34 AM IST
share
ನಾಯಿಗಳ ಹಾವಳಿಯಿಂದ ಸಾವು ಪ್ರಕರಣ; ಗ್ರಾಮ ಪಂಚಾಯತ್ ಗಳಲ್ಲಿ ಅನುದಾನ ಲಭ್ಯವಿಲ್ಲ
ಗ್ರಾಮ ಪಂಚಾಯತ್‌ ಗಳ ವ್ಯಾಪ್ತಿಯಲ್ಲಿ ಇರುವ ಬೀದಿ ನಾಯಿಗಳ ರಕ್ಷಣೆ, ಸಂತಾನ ನಿಯಂತ್ರಣ ಹಾಗೂ ರೋಗಗ್ರಸ್ಥ ನಾಯಿಗಳ ಚಿಕಿತ್ಸೆ, ಆರೈಕೆ ಮುಂತಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರಕಾರಗಳ ನಿಯಮಗಳ ಅನ್ವಯ ತಾಲೂಕು ಮಟ್ಟದ ಕಾರ್ಯಾಚರಣೆ ಹಾಗೂ ಮೇಲುಸ್ತುವಾರಿ ಸಮಿತಿ ರಚಿಸಬೇಕು. ಈ ಸಂಬಂಧ ಸರ್ಕಾರವು 2021ರಲ್ಲಿಯೇ ಆದೇಶ ಹೊರಡಿಸಿದೆಯಾದರೂ ಬೀದಿನಾಯಿಗಳ ದಾಳಿಯಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ ನೀಡುವ ಸಂಬಂಧ ಸ್ಥಳೀಯ ಗ್ರಾಮ ಪಂಚಾಯತ್‌ ಗಳಲ್ಲಿ ಅನುದಾನವನ್ನು ನೀಡಿಲ್ಲ...

ಜಿ. ಮಹಾಂತೇಶ್

ಬೆಂಗಳೂರು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಇದರಿಂದ ಸಾವಿಗೀಡಾಗುವ ಮಕ್ಕಳು ಮತ್ತು ಇತರ ಅವಲಂಬಿತರಿಗೆ ಪರಿಹಾರ ಒದಗಿಸಲು ಗ್ರಾಮ ಪಂಚಾಯತ್ಗಳಲ್ಲಿ ಅನುದಾನ ಲಭ್ಯವಿಲ್ಲ ಎಂಬ ಸಂಗತಿ ಇದೀಗ ಬಹಿರಂಗವಾಗಿದೆ.

ಅಲ್ಲದೇ ಇಂತಹ ಪ್ರಕರಣಗಳಲ್ಲಿ ಅನುದಾನ ಒದಗಿಸಿಕೊಳ್ಳುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆಯವ್ಯಯ ಪೂರ್ವದಲ್ಲಿ ಅನುದಾನ ಒದಗಿಸಿಕೊಂಡಿಲ್ಲ ಎಂಬ ವಿಚಾರವೂ ಮುನ್ನೆಲೆಗೆ ಬಂದಿದೆ.

ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಬಿಕೆ ಗ್ರಾಮದಲ್ಲಿ ಬೀದಿ ನಾಯಿಗಳು ಕಚ್ಚಿದ ಪರಿಣಾಮ ದುರ್ಮರಣ ಹೊಂದಿದ ಮಗುವಿನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಒದಗಿಸಬೇಕು ಎಂದು ಹೈಕೋರ್ಟ್ ನ ಧಾರವಾಡ ಪೀಠದ ಆದೇಶ ಪಾಲಿಸುವ ಸಂಬಂಧದ ಪ್ರಕರಣದಲ್ಲಿ ಬೀದಿ ನಾಯಿಗಳ ಕಡಿತ, ನಿಯಂತ್ರಣ, ಪರಿಹಾರಕ್ಕೆ ಸೂಕ್ತ ಅನುದಾನ ಲಭ್ಯವಾಗಿಸಿಕೊಳ್ಳುವ ಸಂಬಂಧ ಇಲಾಖೆಯಲ್ಲಿ ಚರ್ಚೆ ನಡೆದಿದೆ. ಅಲ್ಲದೇ ಈ ಸಂಬಂಧ ಸ್ಥಳೀಯ ಗ್ರಾಮ ಪಂಚಾಯತ್ ನಲ್ಲಿ ಅನುದಾನ ಲಭ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಸಹಾಯಕತೆ ವ್ಯಕ್ತಪಡಿಸಿದೆ. ಜಿಲ್ಲಾ ಪಂಚಾಯತ್ ನಲ್ಲಿ ಲಭ್ಯವಿರುವ ಅನುದಾನದಲ್ಲಿ ಪಾವತಿಸಲು ನಿರ್ಧರಿಸಲಾಗಿದೆ.ಆದರೂ ಇದೊಂದು ಅನಾವಶ್ಯಕ ವೆಚ್ಚ ಎಂಬ ತೀರ್ಮಾನಕ್ಕೆ ಬಂದಿದೆ. ಇಂತಹ ಅನಾವಶ್ಯಕ ವೆಚ್ಚ ಮಾಡುವುದನ್ನು ತಪ್ಪಿಸಲು ಜಿಲ್ಲಾ ಪಂಚಾಯತ್ ವತಿಯಿಂದ ಭರಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದಿರುವ ಇಲಾಖೆಯು ಒಂದೊಮ್ಮೆ ಸರಕಾರದ ಆದೇಶವನ್ನು ಹಿಂಪಡೆದು ಕೊಂಡಲ್ಲಿ ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ. ಎಂಬ ಭೀತಿಯನ್ನೂ ವ್ಯಕ್ತಪಡಿಸಿದೆ. ಈ ಸಂಬಂಧ ‘ದಿ ಫೈಲ್’ಗೆ ಹಲವು ದಾಖಲೆಗಳು ಲಭ್ಯವಾಗಿವೆ.

ಗ್ರಾಮ ಪಂಚಾಯತ್ ವಶದಲ್ಲಿರುವ ಗ್ರಾಮ ಪಂಚಾಯತ್ ನಿಧಿಯು ಅನುಮತಿಸುವಷ್ಟರ ಮಟ್ಟಿಗೆ ಕೆಲವೊಂದು ವಿಷಯಗಳ ಬಗ್ಗೆ ಪಂಚಾಯತ್ ಪ್ರದೇಶದೊಳಗೆ ಸೂಕ್ತ ಅವಕಾಶ ಕಲ್ಪಿಸುವುದು ಕಡ್ಡಾಯ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಆಯವ್ಯಯಕ್ಕನುಗುಣವಾಗಿ ಬೀದಿನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಹಾಗೂ ಇದಕ್ಕಾಗಿ ಪ್ರತ್ಯೇಕ ಅನುದಾನವನ್ನು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರ ಹಂತದಲ್ಲಿ ಕಟಾಯಿಸುವುದಾಗಲಿ ಬ್ಯಾಂಕ್ ಖಾತೆ ತೆರೆಯುವ ಅಗತ್ಯತೆ ಕಂಡು ಬರುತ್ತಿಲ್ಲ’ ಎಂದು ಆರ್ಥಿಕ ಇಲಾಖೆಯು ಮೇ 19ರಂದು ಆರ್ಡಿಪಿಆರ್ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಅಭಿಪ್ರಾಯಿಸಿತ್ತು.

ಪ್ರಕರಣದ ವಿವರ

ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಬಿಕೆ ಗ್ರಾಮದಲ್ಲಿ ಬೀದಿ ನಾಯಿಗಳು ಮಗುವನ್ನು ಕಚ್ಚಿದ್ದರಿಂದಾಗಿ ಮಗು ದುರ್ಮರಣ ಹೊಂದಿತ್ತು. ಈ ಸಂಬಂಧ ರಾಜ್ಯ ಉಚ್ಛ ನ್ಯಾಯಾಲಯದ ಧಾರವಾಡ ಪೀಠದ ಮುಂದೆ ರಿಟ್ ಅರ್ಜಿ ಸಂಖ್ಯೆ 110352/2019 ಸಲ್ಲಿಕೆಯಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಪೀಠವು ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಬೇಕು ಮತ್ತು ಗ್ರಾಮಾಂತರ ಸ್ಥಳೀಯ ಸಂಸ್ಥೆಯಿಂದ 10 ಲಕ್ಷ ರೂ.ಪಾವತಿಸಬೇಕು ಎಂದು ಆದೇಶ ನೀಡಿತ್ತು. ಈ ಆದೇಶ ಪಾಲನೆ ಸಂಬಂಧ ಅಭಿಪ್ರಾಯ ಕೋರಿದ್ದ ಕಡತವು ಇಲಾಖೆಗಳಲ್ಲೇ ಇವೆ ವಿನಃ ಆದೇಶ ಹೊರಬಿದ್ದು ವರ್ಷವಾದರೂ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂಬುದು ತಿಳಿದು ಬಂದಿದೆ.

ಪರಿಹಾರ ಪಾವತಿಸುವ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿದ್ದ ಇಲಾಖೆಯು 8 ಅಂಶಗಳಿಗೆ ಮಾಹಿತಿ ಕೋರಿತ್ತು. ಯಾವ ಯಾವ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ದಾಳಿಯಿಂದ ಜೀವಹಾನಿಯಾದ ಎಷ್ಟು ಪ್ರಕರಣಗಳಿವೆ, ಪಾವತಿಸಲಾಗಿರುವ ಮೊತ್ತ ಎಷ್ಟು, ಯಾವ ಯಾವ ಮೂಲಗಳಿಂದ ಪಾವತಿಸಲಾಗುತ್ತಿದೆ, ನ್ಯಾಯಾಲಯದ ಆದೇಶದಂತೆ ಈ ಪ್ರಕರಣದಲ್ಲಿ ಪರಿಹಾರ ನೀಡಲು ಇಲಾಖೆಯು ಯಾವ ಕ್ರಮ ವಹಿಸಿದೆ, ಶಾಸನಬದ್ಧ ಅನುದಾನದಲ್ಲಿ ಶೇ.೨ರಷ್ಟು ಅನುದಾನವನ್ನು ಇಂತಹ ಪ್ರಕರಣಗಳಿಗೆ ಮೀಸಲಿಡಲು ಯಾವ ಮಾನದಂಡಗಳ ಅಡಿಯಲ್ಲಿ ಕೋರಲಾಗಿದೆ, ಈ ಅನುದಾನವನ್ನು ಇತರೆ ಉದ್ದೇಶಗಳಿಗೆ ಬಳಕೆ ಮಾಡಿದ್ದಲ್ಲಿ ಅನುದಾನದ ಕೊರತೆ ಉಂಟಾಗುವುದಿಲ್ಲವೇ, ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ವಿವಿಧ ಇಲಾಖೆಯಡಿ ಸಮನ್ವಯ ಗೊಳಿಸಲಾಗಿದೆಯೇ ಎಂದು ಮಾಹಿತಿ ಕೋರಿತ್ತು ಎನ್ನುವುದು ತಿಳಿದು ಬಂದಿದೆ.

ಪ್ರಸ್ತಾಪಿತ ಪ್ರಕರಣವನ್ನು ನಿರ್ವಹಣೆ ಮಾಡಲು NGO ಸಂಘ ಸಂಸ್ಥೆಗಳು ಸ್ಥಳೀಯ ಪ್ರಾಧಿಕಾರಗಳಿಂದ ಸಂಪನ್ಮೂಲಗಳನ್ನು ಭರಿಸಲು ತಮ್ಮ ಹಂತದಲ್ಲಿಯೇ ನಿಯಂತ್ರಣ ಕ್ರಮ ವಹಿಸಲು ಆಡಳಿತ ಇಲಾಖೆಯಿಂದ ಸಾಧ್ಯವಿಲ್ಲವೇ, ಶಾಸನಬದ್ಧ ಅನುದಾನದಲ್ಲಿ ಶೇ.೨ರಷ್ಟು ಅನುದಾನವನ್ನು ಕಟಾಯಿಸಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಿಗೆ ಆರ್ಥಿಕ ಅಧಿಕಾರ ಪ್ರತ್ಯಾಯೋಜನೆಗೆ ಸೂಕ್ತ ಕಾರಣ, ಸ್ಪಷ್ಟೀಕರಣ ನೀಡುವುದು, ಇಂತಹ ಪ್ರಕರಣಗಳು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಯವ್ಯಯ ಪೂರ್ವದಲ್ಲಿ ಅನುದಾನ ಒದಗಿಸಲು ಆಡಳಿತ ಇಲಾಖೆಯು ಕ್ರಮ ಕೈಗೊಳ್ಳದಿರಲು ಕಾರಣವೇನು ಎಂಬ ಅಂಶಗಳಿಗೆ ಸ್ಪಷ್ಟೀಕರಣ ಕೋರಿತ್ತು ಎಂಬುವುದು ದಾಖಲೆಗಳಿಂದ ತಿಳಿದು ಬಂದಿದೆ.

ಇದಕ್ಕೆ ತಕರಾರು ಎತ್ತಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಪರಿಶೀಲಿಸಿದಾಗ ಪ್ರಸ್ತಾವವಯನ್ನು ಆರ್ಥಿಕ ಇಲಾಖೆಯು ಪೂರ್ಣ ಪ್ರಮಾಣದಲ್ಲಿ ಪರಿಶೀಲಿಸಿದಂತೆ ಕಂಡು ಬರುತ್ತಿಲ್ಲ. ಕೇವಲ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ ಅಡಿಯಲ್ಲಿ ಮಾತ್ರ ಈ ಅಂಶಗಳನ್ನು ಪರಿಶೀಲಿಸಿ ಅಭಿಪ್ರಾಯ ನೀಡಿದಂತೆ ಕಂಡು ಬರುತ್ತದೆ’ ಎಂದು ಟಿಪ್ಪಣಿ ಹಾಳೆಯಲ್ಲಿ ನಮೂದಿಸಿತ್ತು.

ಭಾರತ ಸರಕಾರವು ರಚಿಸಿರುವ ಪ್ರಾಣಿ ಸಂತಾನ ನಿಯಂತ್ರಣ ನಿಯಮಗಳು 2023ರ ಅನ್ವಯ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಿ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ಮತ್ತು ರೇಬಿಸ್ ವ್ಯಾಕ್ಸಿನ್ ನೀಡುವ ಬಗ್ಗೆ ಮೇಲ್ವಿಚಾರಣೆ ಹಾಗೂ ತಾಲೂಕು ಮಟ್ಟದಲ್ಲಿ ಕ್ರಮ ಕೈಗೊಳ್ಳಲು ಮೂಲ ಸೌಕರ್ಯಗಳು ಬೇಕು. ಈ ಸಂಬಂಧ ಸೂಕ್ತ ಸಂಸ್ಥೆಗಳನ್ನು ಗುರುತಿಸಿ ನಿರ್ವಹಣೆ ಮೇಲ್ವಿಚಾರಣೆ ಮಾಡಲು ಸೂಕ್ತ ಅನುದಾನ ಅಗತ್ಯ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಗ್ರಾಮಾಂತರ ಪ್ರದೇಶದ ಜನಸಂಖ್ಯೆಯ ಶೇ.2ರಷ್ಟು ನಾಯಿಗಳ ಸಂಖ್ಯೆ ಇವೆ. ಇದಕ್ಕಾಗಿ ಸ್ಥಳೀಯ ಸಂಸ್ಥೆಗಳ ಅನುದಾನದ ಶೇ.2ರಷ್ಟನ್ನು ಕಡ್ಡಾಯವಾಗಿ ಈ ಕಾರ್ಯಕ್ರಮಕ್ಕೆ ಮುಡಿಪಾಗಿಡಬೇಕು ಎಂದು ಇಲಾಖೆಯು ಅಭಿಪ್ರಾಯಿಸಿರುವುದು ಗೊತ್ತಾಗಿದೆ.

share
ಜಿ. ಮಹಾಂತೇಶ್
ಜಿ. ಮಹಾಂತೇಶ್
Next Story
X