Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಚಿತ್ರದುರ್ಗ: ಕೆಎಸ್ಆರ್ಟಿಸಿ ಸಿಬ್ಬಂದಿಗೆ...

ಚಿತ್ರದುರ್ಗ: ಕೆಎಸ್ಆರ್ಟಿಸಿ ಸಿಬ್ಬಂದಿಗೆ ಹಲ್ಲೆ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ22 Jun 2023 1:22 PM IST
share
ಚಿತ್ರದುರ್ಗ: ಕೆಎಸ್ಆರ್ಟಿಸಿ ಸಿಬ್ಬಂದಿಗೆ ಹಲ್ಲೆ; ಪ್ರಕರಣ ದಾಖಲು

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್ಸಿನಿಂದ ಪ್ರಯಾಣಿಕರನ್ನು ಇಳಿಸುತ್ತಿರುವಾಗ ಮಹಿಳೆಯೊಬ್ಬಳೊಂದಿಗೆ ಬಂದ ಮೂರು ಮಂದಿಯ ತಂಡ ಏಕಾಏಕಿ ನಿರ್ವಾಹಕನ ಮೇಲೆ ಹಲ್ಲೆ‌ ನಡೆಸಿದ್ದು, ತಡೆಯಲು ಬಂದ ಚಾಲಕನ‌‌ ಮೇಲೂ ಸಹ ಹಲ್ಲೆ‌ ನಡೆಸಿರುರುವ ಘಟನೆ ಚಳ್ಳಕೆರೆ ಸರ್ಕಲ್ ನಲ್ಲಿ ಇಂದು ಬೆಳಿಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ‌.

ಆರೋಪಿಗಳನ್ನು ಚಳ್ಳಕೆರೆ ನಿವಾಸಿಗಳಾದ ಚಂದ್ರಿಕಾ, ಮಲ್ಲಿಕಾರ್ಜುನ, ಶಿವರಾಜ, ನವೀನ ಎಂದು ಗುರುತಿಸಲಾಗಿದೆ.

ಚಾಲಕ ಮತ್ತು ನಿರ್ವಾಹಕರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಬ್ಬಂದಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ನಿರ್ವಾಹಕನ ಎದೆ ಮತ್ತು ಕೊರಳಿಗೆ ಏಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಅಥವಾ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಲಾಗಿದೆ ಎಂದು ನಿಗಮದ ಮೂಲಗಳು ತಿಳಿಸಿವೆ.

ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ - 6 ರ ವಾಹನ ಸಂಖ್ಯೆ KA 57 F-1065 ದಿನಾಂಕ: 20.06.2023 ರಂದು ರಾಯದುರ್ಗ - ಬೆಂಗಳೂರು ಅಂತರರಾಜ್ಯ ಮಾರ್ಗಕ್ಕೆ ನಿಯೋಜಿಸಲಾಗಿದ್ದು, ಇದು ಅಂತರರಾಜ್ಯದ ಏಕ ಮಾರ್ಗ ರಹದಾರಿಯ ವಾಹನವಾಗಿದ್ದು, ಮಹಿಳಾ ಪ್ರಯಾಣಿಕರು "ಶಕ್ತಿ" ಯೋಜನೆಯಡಿಯಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು ಎನ್ನಲಾಗಿದೆ.

ಮಂಗಳವಾರ ಚಳ್ಳಕೆರೆಯಿಂದ ಬಸ್ ಹತ್ತಿದ ಚಂದ್ರಿಕಾ ದಾಬಸ್‌ಪೇಟೆಗೆ ಟಿಕೆಟ್ ಕೇಳಿದಾಗ, ‘ಇದು ಅಂತರ ರಾಜ್ಯ ವಾಹನವಾಗಿದ್ದು, ದಾಬಸ್ ಪೇಟೆ ಬಳಿ ನಿಲುಗಡೆ‌ ಇರುವುದಿಲ್ಲ , ತುಮಕೂರಿಗೆ ಬೇಕಾದರೆ ತೆರಳಿ, ಅಲ್ಲಿಂದ ಬೇರೆ ವಾಹನದಲ್ಲಿ ಹೋಗಬಹುದು’ ಎಂದು ನಿರ್ವಾಹಕರು ತಿಳಿಸಿದ್ದರು. ಹೀಗಾಗಿ ತುಮಕೂರಿಗೆ ಟಿಕೇಟ್ ಪಡೆದ ಮಹಿಳೆ ತುಮಕೂರಿನಲ್ಲಿ ಇಳಿಯದೆ, ಬಸ್ಸಿನೊಳಗೆ ಎಲ್ಲಾ ಪ್ರಯಾಣಿಕರ‌ ಮುಂದೆ ತನ್ನ ಚಪ್ಪಲಿ ಹಿಡಿದು ನಾನು ಇಲ್ಲಿ ಇಳಿಯುವುದಿಲ್ಲ ನೀನು ದಾಬಸ್ ಪೇಟೆಗೆ ಹೋಗಬೇಕು. ಅಲ್ಲಿಯೇ ನಾನು‌ ಇಳಿಯುವುದು ‌ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಮಹಿಳೆ ಎಂಬ ಕಾರಣದಿಂದ ನಿರ್ವಾಹಕರು ಏನೂ ಮಾತನಾಡದೇ, ಹತ್ತಿರಕ್ಕೂ ಹೋಗದೆ , ನಿಲುಗಡೆ ಇಲ್ಲದಿದ್ದರೂ ಸಹ ದಾಬಸ್‌ಪೇಟೆಯ ಫ್ಲೈ ಓವರ್ ಬಳಿ, ಚಾಲಕರಿಗೆ ತಿಳಿಸಿ ನಿಲುಗಡೆ ನೀಡಿ ಮಹಿಳೆಯನ್ನು ಇಳಿಸಿರುತ್ತಾರೆ ಎಂದು ನಿಗಮ ತನ್ನ ದೂರಿನಲ್ಲಿ ತಿಳಿಸಿದೆ.

ಈ ಸಂಬಂಧ ಹಲ್ಲೆ ಮಾಡಿದ ವ್ಯಕ್ತಿಗಳ ಮೇಲೆ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ನಿಗಮದ ವತಿಯಿಂದ ದೂರು ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ನಿಗಮದ ಚಾಲನಾ ಸಿಬ್ಬಂದಿ ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಲು ಹಾಗೂ ಪ್ರಯಾಣಿಕರು ಸಹ ಚಾಲನಾ ಸಿಬ್ಬಂದಿಗಳೊಂದಿಗೆ ಸಹಕರಿಸಲು ನಿಗಮ ಕೋರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X