Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಸರಕಾರ ಬದಲಾದರೂ ಅಕ್ರಮ ಗಣಿಗಾರಿಕೆ...

ಸರಕಾರ ಬದಲಾದರೂ ಅಕ್ರಮ ಗಣಿಗಾರಿಕೆ ನಿಲ್ಲಲಿಲ್ಲ: ಕಾಂಗ್ರೆಸ್ ಆರೋಪ

ಅಧಿಕಾರಿಗಳ ಸಹಕಾರದಲ್ಲಿ ಅಕ್ರಮ ಗಣಿಗಾರಿಕೆ

ವಾರ್ತಾಭಾರತಿವಾರ್ತಾಭಾರತಿ25 July 2023 4:31 PM IST
share
ಸರಕಾರ ಬದಲಾದರೂ ಅಕ್ರಮ ಗಣಿಗಾರಿಕೆ ನಿಲ್ಲಲಿಲ್ಲ: ಕಾಂಗ್ರೆಸ್ ಆರೋಪ

ಕಾರ್ಕಳ: ರಾಜ್ಯದಲ್ಲಿ ಸರಕಾರ ಬದಲಾದರೂ ತಾಲೂಕಿನಾದ್ಯಂತ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿದ್ದು ಇದಕ್ಕೆ ಅಧಿಕಾರಿಗಳ ಸಹಕಾರವೇ ಕಾರಣ ಇದನ್ನು ತಕ್ಷಣ ನಿಲ್ಲಿಸದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪುರಸಭಾ ಸದಸ್ಯ ಶುಭದರಾವ್ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಕಾನೂನಿನಂತೆ ಪರವಾನಿಗೆ ಪಡೆದು ಗಣಿಗಾರಿಕೆ ನಡೆಸುವವರು ಕೆಲವು ಜನ ಮಾತ್ರ, ಆದರೆ ಯಾವುದೇ ಪರವಾನಿಗೆ ಇಲ್ಲದೆ ಅವ್ಯಾಹತವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಇದನ್ನು ತಕ್ಷಣ ನಿಲ್ಲಿಸಬೇಕು ಈ ಬಗ್ಗೆ ಸಚಿವರ ಗಮನಕ್ಕೂ ತಂದಿದ್ದೇವೆ ಎಂದು ಅವರು ಹೇಳಿದ್ದಾರೆ

ಡೀಮ್ಡ್ ಅರಣ್ಯ, ಗೋಮಾಳ ಹಾಗೂ ಸರಕಾರಿ ಜಾಗದಲ್ಲಿ ಗಣಿ ಲೂಟಿಯಾಗುತ್ತಿದೆ ಇದರಲ್ಲಿ ಸ್ವತಃ ಅಧಿಕಾರಿಗಳು ಶಾಮೀಲಾಗಿ ಸಹಕಾರ ನೀಡುತ್ತಿರುವುದು ಎದ್ದು ಕಾಣುತ್ತಿದೆ. ತಾಲೂಕಿನ ಬೆಳ್ಮಣ್, ಸೂಡಾ, ನಿಟ್ಟೆ, ಗುಂಡ್ಯಡ್ಕ, ರೆಂಜಾಳ ಮುಂತಾದ ಕಡೆಗಳಲ್ಲಿ ಗಣಿ ಲೂಟಿಯಾಗುತ್ತಿದ್ದು ಸರಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೆ ವ್ಯವಹಾರ ನಡೆಯುತ್ತಿದೆ ಸಮುದ್ರಕ್ಕೆ ಕಲ್ಲು ಹಾಕುವ ನೆಪದಲ್ಲಿ ನಂದಳಿಕೆ, ಬೆಳ್ಮಣ್ಣು ಭಾಗ ಲೂಟಿಯಾಗಿದೆ. ಇಲ್ಲಿಯೂ ಗಣಿ ಅಧಿಕಾರಿಗಳು ರಾಜ ಧನವನ್ನು ಸಂಗ್ರಹಿಸದೆ ಸರಕಾರಕ್ಕೆ ದ್ರೋಹ ಎಸಗುತ್ತಿದ್ದಾರೆ. ಗಣಿ ಲೂಟಿಕೋರರ ಜತೆ ಶಾಮೀಲಾಗಿ ತಮ್ಮ ಜೇಬು ತುಂಬಿಸಿಕೊಳ್ಳುತಿದ್ದಾರೆ ಎಂದು ಆರೋಪಿಸಿದ್ದಾರೆ.

ಡೀಮ್ಡ್ ಅರಣ್ಯ ಮತ್ತು ಗೋಮಾಳದಲ್ಲಿ ಮನೆ ಕಟ್ಟಿ ಕುಳಿತವರಿಗೆ ಹಕ್ಕು ಪತ್ರ ನೀಡಲು ಆಕ್ಷೇಪಿಸುವ ಈ ಅಧಿಕಾರಿಗಳು, ಗಣಿ ಲೂಟಿಗೆ ಅವಕಾಶ ಕಲ್ಪಿಸಿರುವುದು ಖೇದಕರ ತಕ್ಷಣ ಈ ಅಕ್ರಮ ಲೂಟಿಯನ್ನು ಸಂಬಂಧಿಸಿದ ಅಧಿಕಾರಿಗಳು ತಡೆಗಟ್ಟಬೇಕು ಇಲ್ಲವಾದರೆ ಮುಂದೆಯಾಗುವ ಸಮಸ್ಯೆಗೆ ಅಧಿಕಾರಿಗಳೇ ನೇರ ಹೊಣೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X