Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಉಡುಪಿ ನಗರದ ನೆರೆಪೀಡಿತ ಪ್ರದೇಶಗಳಿಗೆ...

ಉಡುಪಿ ನಗರದ ನೆರೆಪೀಡಿತ ಪ್ರದೇಶಗಳಿಗೆ ಅವಶ್ಯಕತೆ ಬಿದ್ದರೆ NDRF ತಂಡ ಆಗಮನ: ಡಿಸಿ ಕೂರ್ಮಾ ರಾವ್

ನೆರೆಪೀಡಿತ ಪ್ರದೇಶಗಳಿಗೆ ಎಸ್ಪಿ, ಡಿಸಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ6 July 2023 5:15 PM IST
share
ಉಡುಪಿ ನಗರದ ನೆರೆಪೀಡಿತ ಪ್ರದೇಶಗಳಿಗೆ ಅವಶ್ಯಕತೆ ಬಿದ್ದರೆ NDRF ತಂಡ ಆಗಮನ: ಡಿಸಿ ಕೂರ್ಮಾ ರಾವ್
‘ಮಳೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಂಪರ್ಕಿಸಿ ಎಲ್ಲ ರೀತಿಯ ಮಾಹಿತಿಯನ್ನು ಪಡೆದುಕೊಂಡು ನಿರ್ದೇಶನ ನೀಡುತ್ತಿದ್ದಾರೆ. ಮಳೆಯಿಂದ ಹಾನಿ ಸಂಭವಿಸಿದ ಕುಟುಂಬಗಳಿಗೆ ತುರ್ತಾಗಿ ತಹಶೀಲ್ದಾರ್ ಹಂತದಲ್ಲೇ ಪರಿಹಾರ ನೀಡುವ ಕಾರ್ಯ ಮಾಡಲಾಗುತ್ತಿದೆ. ಇದಕ್ಕೆ ಯಾವುದೇ ಅನುದಾನದ ಕೊರತೆ ಇಲ್ಲ. ಹಾನಿ ಸಂಭವಿಸಿದ ಮನೆಗಳಿಗೆ ತಕ್ಷಣವೇ ಪರಿಹಾರ ನೀಡಲಾಗುವುದು’ -ಕೂರ್ಮಾ ರಾವ್, ಜಿಲ್ಲಾಧಿಕಾರಿ, ಉಡುಪಿ

ಉಡುಪಿ, ಜು.6: ಉಡುಪಿ ನಗರದ ನೆರೆಪೀಡಿತ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ಭೇಟಿ ನೀಡಿ ಅಗತ್ಯ ಕ್ರಮಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬನ್ನಂಜೆ ಮೂಡನಿಡಂಬೂರು ಪ್ರದೇಶಕ್ಕೆ ಆಗಮಿಸಿದ ಜಿಲ್ಲಾಧಿಕಾರಿ, ಸ್ಥಳೀಯ ನಗರಸಭೆ ಸದಸ್ಯೆ ಸವಿತಾ ಹರೀಶ್ರಾಂ, ತಹಶೀಲ್ದಾರ್ ಎಸ್.ರವಿ ಅಂಗಡಿ, ನಗರ ಪೊಲೀಸ್ ಠಾಣಾ ನಿರೀಕ್ಷಕ ಮಂಜಪ್ಪ, ಉಡುಪಿ ಅಗ್ನಿಶಾಮಕದಳದ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್, ಗ್ರಾಮ ಲೆಕ್ಕಿಗ ವಿದ್ಯಾ ಅವರಿಂದ ಮಾಹಿತಿಗಳನ್ನು ಪಡೆದುಕೊಂಡರು. ಬಳಿಕ ಸಂತ್ರಸ್ತರೊಂದಿಗೂ ಮಾತುಕತೆ ನಡೆಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕಳೆದ ಐದು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಎಲ್ಲ ರೀತಿಯ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜಲಾವೃತ್ತಗೊಂಡ ತಗ್ಗು ಪ್ರದೇಶಗಳಲ್ಲಿನ ಮನೆಗಳಿಂದ ಕುಟುಂಬಗಳನ್ನು ಅಗತ್ಯ ಬಿದ್ದರೆ ಸ್ಥಳಾಂತರಿಸಲು ಅಗ್ನಿಶಾಮಕದಳ ಹಾಗೂ ಗೃಹರಕ್ಷಕ ದಳ ಮತ್ತು ಸ್ಥಳೀಯಾಡಳಿತಗಳ ಕಾರ್ಯಪಡೆಗಳು ಸಜ್ಜಾಗಿವೆ. ಜಿಲ್ಲೆಯ ಇಂತಹ 9 ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿ ಬೋಟುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದರು.

ನಗರದ ಕಲ್ಸಂಕ ಬೈಲಕೆರೆ, ಬನ್ನಂಜೆ ಮೂಡನಿಡಂಬೂರು ಸಹಿತ ಕೆಲವು ತಗ್ಗು ಪ್ರದೇಶಗಳಲ್ಲಿ ಜಲಾವೃತ್ತಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಜನರನ್ನು ಮನವೊಲಿಸಿ ಎತ್ತರ ಪ್ರದೇಶಕ್ಕೆ ಕರೆದುಕೊಂಡು ಹೋಗುವ ಕಾರ್ಯಾಚರಣೆ ನಡೆಸಲಾಗಿದೆ. ಕೆಲವರು ಸಂಬಂಧಿಕರ ಮನೆಗಳಿಗೆ ಮತ್ತು ಇನ್ನು ಕೆಲವರು ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾದ ಕಾಳಜಿ ಕೇಂದ್ರಗಳಲ್ಲಿ ಸುರಕ್ಷಿತವಾಗಿದ್ದಾರೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಅಧಿಕಾರಿಗಳು, ಜನಪ್ರತಿಧಿಗಳು ಎಲರ್ಟ್ ಆಗಿದ್ದಾರೆ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು ನಮ್ಮ ಸಂಪರ್ಕದಲ್ಲಿದ್ದು, ಮಂಗಳೂರಿನಲ್ಲಿರುವ ಈ ತಂಡಗಳು ಅವಶ್ಯಕತೆ ಇದ್ದರೆ ಕೂಡಲೇ ಸ್ಪಂದಿಸಲಿದೆ. ಇದರೊಂದಿಗೆ ಸ್ಥಳೀಯವಾಗಿ ಕೆಲವು ಪ್ರದೇಶಗಳಲ್ಲಿ ಮೀನುಗಾರರರು ಹಾಗೂ ಸ್ಥಳೀಯ ಮಟ್ಟದಲ್ಲಿ ತರಬೇತಿ ಪಡೆದ ಆಪ್ತಮಿತ್ರರು ಕೂಡ ಈ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ ಎಂದರು. ಅದೇ ರೀತಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ ಕಲ್ಸಂಕ, ಬೈಲಕೆರೆ, ಕೊಡವೂರು ಮೊದಲಾದವರು ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಡಿವೈಎಸ್ಪಿ ದಿನಕರ ಮೊದಲಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X