Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಸುಗ್ರೀವಾಜ್ಞೆ ವಿಚಾರದಲ್ಲಿನ...

ಸುಗ್ರೀವಾಜ್ಞೆ ವಿಚಾರದಲ್ಲಿನ ಭಿನ್ನಾಭಿಪ್ರಾಯ ಕೂತು ಬಗೆಹರಿಸಿಕೊಳ್ಳಿ: ಆಪ್, ಕಾಂಗ್ರೆಸ್ ಗೆ ಮಮತಾ ಬ್ಯಾನರ್ಜಿ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ24 Jun 2023 10:18 AM IST
share
ಸುಗ್ರೀವಾಜ್ಞೆ ವಿಚಾರದಲ್ಲಿನ ಭಿನ್ನಾಭಿಪ್ರಾಯ ಕೂತು ಬಗೆಹರಿಸಿಕೊಳ್ಳಿ: ಆಪ್, ಕಾಂಗ್ರೆಸ್ ಗೆ ಮಮತಾ ಬ್ಯಾನರ್ಜಿ ಕಿವಿಮಾತು

ಹೊಸದಿಲ್ಲಿ: ಟೀ ಹಾಗೂ ಬಿಸ್ಕತ್ ಸೇವನೆಯ ಮೂಲಕ ದಿಲ್ಲಿ ಸುಗ್ರೀವಾಜ್ಞೆ ವಿಚಾರದಲ್ಲಿ ಎಎಪಿ ಹಾಗೂ ಕಾಂಗ್ರೆಸ್ ತಮ್ಮ ಭಿನ್ನಾಭಿಪ್ರಾಯಗಳನ್ನು ಮುಂದಿನ ದಿನಗಳಲ್ಲಿ ಬಗೆಹರಿಸಿಕೊಳ್ಳುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಲಹೆ ನೀಡಿದ್ದು, ಪಾಟ್ನಾ ಪ್ರತಿಪಕ್ಷಗಳ ಸಭೆ ಇಂತಹ ಚರ್ಚೆಗೆ ಸೂಕ್ತ ವೇದಿಕೆಯಲ್ಲ ಎಂದು ನೆನಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಂದು ದಿನದ ಉಪವಾಸದಲ್ಲಿರುವ ಮಮತಾ ಬ್ಯಾನರ್ಜಿ, ಸುಗ್ರೀವಾಜ್ಞೆಯ ಮೇಲಿನ ಕಿತ್ತಾಟವು ಚರ್ಚೆಗಳನ್ನು ಹಳಿತಪ್ಪಿಸುವುದಿಲ್ಲ ಎಂಬ ವಿಶ್ವಾಸದಲ್ಲಿದ್ದು, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಸಭೆಯ ಕೊನೆಯಲ್ಲಿ ಸುಗ್ರೀವಾಜ್ಞೆ ವಿಷಯದಲ್ಲಿ ಎಎಪಿಗೆ ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿದಾಗ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆಯಲ್ಲಿ, ತಮ್ಮ ಭಾಷಣದಲ್ಲಿ ಎಎಪಿಗೆ ತಾತ್ವಿಕ ಬೆಂಬಲವನ್ನು ನೀಡಿದರು, ಪಕ್ಷವು ಸಂವಿಧಾನ ವಿರೋಧಿಯಾದ ಯಾವುದನ್ನೂ ಬೆಂಬಲಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಲು ತಮ್ಮ ಪಕ್ಷವು ಒಂದು ರೀತಿಯ ಕಾರ್ಯವಿಧಾನವನ್ನು ಹೊಂದಿದೆ ಮತ್ತು ಅದರ ಬಗ್ಗೆ ಪ್ರಕಟಣೆಯನ್ನು ನಂತರದ ದಿನದಲ್ಲಿ ಮಾಡಲಾಗುವುದು. ಯಾವುದೇ ಹಂತದಲ್ಲೂ ಕೇಜ್ರಿವಾಲ್ ಸಭೆಯಿಂದ ಹೊರನಡೆಯುವುದಾಗಿ ಬೆದರಿಕೆ ಹಾಕಲಿಲ್ಲ ಎಂದು ಮೂಲಗಳು ತಿಳಿಸಿವೆ.

ಹಾಜರಿದ್ದ ಎಲ್ಲಾ ವಿರೋಧ ಪಕ್ಷದ ಸದಸ್ಯರು ಕಾಂಗ್ರೆಸ್ ಪರವಾಗಿ ನಿಂತರು ಮತ್ತು ಈ ವಿಷಯದ ಬಗ್ಗೆ ಪಕ್ಷದ ನಿಲುವು "ಸಮಂಜಸ" ಎಂದು ಹೇಳಿದರು ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿಯವರು ತಮ್ಮ ಭಾಷಣದ ಸಮಯದಲ್ಲಿ ಸುಗ್ರೀವಾಜ್ಞೆಯ ವಿಷಯವನ್ನು ಪ್ರಸ್ತಾಪಿಸಲಿಲ್ಲ. ಸಭೆಯಲ್ಲಿ ಭಾಗವಹಿಸಿರುವ ಪಕ್ಷಗಳು ಹಿಂದಿನ ಇಷ್ಟವಾದ, ಇಷ್ಟವಾಗದ ವಿಷಯವನ್ನು ಮರೆತು ಭಾಗವಹಿಸಿದ್ದಾರೆ ಎಂದು ಪ್ರತಿಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X