Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಟಾಪ್ ಸುದ್ದಿಗಳು
  3. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ...

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅರ್ಭಟಕ್ಕೆ 3 ಮಂದಿ ಸಾವು, 289 ಮನೆಗಳಿಗೆ ಹಾನಿ: ಜಿಲ್ಲಾಧಿಕಾರಿ ಕವಳಿಕಟ್ಟಿ

ಹೊನ್ನಾವರ ಮತ್ತು ಕುಮಟಾ ಭಾಗದಲ್ಲಿ 11 ಕಾಳಜಿ ಕೇಂದ್ರ ಸ್ಥಾಪನೆ

ವಾರ್ತಾಭಾರತಿವಾರ್ತಾಭಾರತಿ26 July 2023 1:23 PM IST
share
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅರ್ಭಟಕ್ಕೆ 3 ಮಂದಿ ಸಾವು,  289 ಮನೆಗಳಿಗೆ ಹಾನಿ: ಜಿಲ್ಲಾಧಿಕಾರಿ ಕವಳಿಕಟ್ಟಿ

ಕಾರವಾರ: ಉತ್ತರಕನ್ನಡ ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಬೀಳುತ್ತಿದ್ದು ಅಪಾರ ಆಸ್ತಿಪಾಸ್ತಿ ಜೀವ ಹಾನಿ ಸಂಭವಿಸಿದ್ದು ಒಟ್ಟು ನಷ್ಟದ ಲೆಕ್ಕಚಾರಕ್ಕೆ ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾಹಿತಿ ಹಂಚಿಕೊಂಡ ಅವರು, ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಅಧಿಕವಾಗಿ ನದಿ ಪಾತ್ರಗಳಲ್ಲಿ ನೆರೆ ಉಂಟಾಗಿತ್ತು. ನದಿ ತೀರದ ನಿವಾಸಿಗಳು ಆತಂಕದಲ್ಲೇ ದಿನ ಕಳೆದಿದ್ದರು. ಅನೇಕರ ಮನೆಗಳಿಗೆ ನೀರು ನುಗ್ಗಿದ್ದು, ಇನ್ನು ಕೆಲವೆಡೆ ಮನೆಗಳು ಕುಸಿದು ಹಾನಿಯಾಗಿದೆ. ಗದ್ದೆಗಳಲ್ಲಿ ನೀರು ನಿಂತು ಬೆಳೆ ಹಾನಿಯಾಗಿದ್ದು, ಸೇತುವೆ, ಕಾಲುಸಂಕ, ರಸ್ತೆಗಳೂ ಕುಸಿದು ಹಲವೆಡೆ ಸಂಪರ್ಕ ಕಡಿತಗೊಂಡಿವೆ. ವಿದ್ಯುತ್ ಕಂಬಗಳು ಧರೆಗುರುಳಿ ಈವರೆಗೆ ಕೆಲವೆಡೆ ವಿದ್ಯುತ್ ಸಂಪರ್ಕವೂ ಆಗಿಲ್ಲ. ಇದರಿಂದಾಗಿ ನೂರಾರು ಜನ ಸಂತ್ರಸ್ತರಾಗಿ, ಸಂಕಷ್ಟ ಅನುಭವಿಸಿದ್ದಾರೆ. ಜಿಲ್ಲೆಯಲ್ಲಿ ಅಬ್ಬರದ ಭಾರಿ ಮಳೆಯಿಂದಾಗಿ ಈವರೆಗೆ 3 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಾದ್ಯಂತ ಒಟ್ಟು 289 ಮನೆಗಳಿಗೆ ಹಾನಿಯಾಗಿದೆ. 14 ಜಾನುವಾರುಗಳು ಸಾವನ್ನಪ್ಪಿವೆ. ಇದಲ್ಲದೆ ಕುಮಟಾ-ಶಿರಸಿ, ಹೆದ್ದಾರಿ, ಕುಮಟಾ-ಸಿದ್ದಾಪುರ ಹೆದ್ದಾರಿ ಹಾಗೂ ಗೋವಾ ಸಂಪರ್ಕಿಸುವ ರಾಮನಗರ- ಲೋಂಡಾ ಹದ್ದಾರಿಯಲ್ಲಿ ಧರೆಗಳು ಕುಸಿದು ಸಂಚಾರಕ್ಕೆ ಪರದಾಡುವಂತಾಗಿದೆ. ಜಲಾಶಯಗಳಲ್ಲಿ ಜಿಲ್ಲಾಡಳಿತ ಸೂಚಿಸಿದ ನೀರಿನ ಮಟ್ಟ ಕಾಯ್ದುಕೊಂಡು ಪ್ರವಾಹವಾಗದಂತೆ ಅಲ್ಪ ಪ್ರಮಾಣದಲ್ಲಿ ನೀರು ಹೊರಹಾಕಲಾಗುತ್ತಿದೆ. ಹೊನ್ನಾವರ, ಕುಮಟಾದಲ್ಲಿ 11 ಕಾಳಜಿ ಕೇಂದ್ರ ತೆರೆಯಲಾಗಿದ್ದು, ಅಲ್ಲಿ ಹಿರಿಯ ಅಧಿಕಾರಿಗಳನ್ನು ಇಟ್ಟು ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಲಾಶಯಗಳಿಂದ ಸೀಮಿತ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು ಕೆಳ ಪ್ರದಶದಲ್ಲಿ ಯಾವುದೇ ತೊಂದರೆಯಾಗಿಲ್ಲ. ಜಲಾಶಯಗಳಲ್ಲಿ ಜಿಲ್ಲಾಡಳಿತ ಸೂಚಿಸಿದ ನೀರಿನ ಮಟ್ಟ ಕಾಯ್ದುಕೊಂಡು ಪ್ರವಾಹವಾಗದಂತೆ ಅಲ್ಪ ಪ್ರಮಾಣದಲ್ಲಿ ನೀರು ಹೊರಹಾಕಲಾಗುತ್ತಿದೆ ಎಂದರು.

ಹೊನ್ನಾವರ ಹಾಗೂ ಕುಮಟಾ ಭಾಗದಲ್ಲಿ ಅಘನಾಶಿನಿ ಹಾಗೂ ಶರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು ಕೆಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. 11 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. 360 ಜನ ಇದ್ದಾರೆ. ಮಂಗಳವಾರ ಬೆಳಗ್ಗೆ 2 ಕಾಳಜಿ ಕೇಂದ್ರಗಳನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ಸ್ವಲ್ಪ ಪ್ರಮಾಣದಲ್ಲಿ ನೆರೆ ಕಡಿಮೆಯಾದ ಕಾರಣ ಎರಡು ಕಾಳಜಿ ಕೇಂದ್ರದಿಂದ ಜನ ಮನೆಗೆ ತೆರಳಿದ್ದಾರೆ. ಇನ್ನು ಕಾಳಜಿ ಕೇಂದ್ರದಲ್ಲಿ ಹಿರಿಯ ಅಧಿಕಾರಿಗಳನ್ನು ಇಟ್ಟು ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಾಲಾಗಿದೆ ಎಂದು ತಿಳಿಸಿದರು. ಶಿರಸಿ-ಕುಮಟಾ ಸಂಪರ್ಕಿಸುವ ದೇವಿಮನೆ ಘಟ್ಟದಲ್ಲಿ ಕುಸಿದಿದ್ದ ಗುಡ್ಡವನ್ನು ತೆರವುಗೊಳಿಸಲಾಗಿದೆ. 'ರಸ್ತೆಯು ಪೂರ್ಣಗೊಳ್ಳದ ಕಾರಣ ಭಾರಿ ವಾಹನಗಳಿಗೆ ಯಲ್ಲಾಪುರ- ಅಂಕೋಲಾ ಮಾರ್ಗದ ಅರೆಬೈಲ್ ಘಟ್ಟದಲ್ಲಿ ಸಂಚಿರುವಂತೆ ನಿರ್ದೇಶನ ನೀಡಲಾಗಿದೆ. ಎಂದರು.

ಅಣಶಿ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಪರಿಶೀಲನೆ ಮಾಡಲಾಗುತ್ತದೆ. ಗುಡ್ಡದ ಮಣ್ಣು ತೆರವು ಮಾಡಿದರು ಕೂಡ ಮತ್ತೆ ಕುಸಿಯುತ್ತಿರುವ ಕಾರಣ ಭಾರಿ ವಾಹನಗಳು ಬದಲಿ ಮಾರ್ಗದಲ್ಲಿ ತೆರಳುವುದು ಉತ್ತಮ. ಈಗಾಗಲೇ ಗುಡ್ಡ ಕುಸಿಯುವ ಪ್ರದೇಶವನ್ನು ಗುರುತಿಸಿ ತೆರವುಗೊಳಿಸಲಾಗುತ್ತಿದೆ. ಆದರೆ ಇದೇ ರೀತಿ ಗುಡ್ಡ ಕುಸಿತ ಮುಂದುವರಿದಲ್ಲಿ ಈ ಹಿಂದಿನಂತೆ ರಾತ್ರಿ ಸಂಚಾರವನ್ನು ನಿರ್ಬಂಧಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X