Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಟ್ರೆಂಡಿಂಗ್
  4. ವಂದೇಭಾರತ್ ರೈಲಿನಲ್ಲಿ ಪೂರೈಸಲಾದ...

ವಂದೇಭಾರತ್ ರೈಲಿನಲ್ಲಿ ಪೂರೈಸಲಾದ ಊಟದಲ್ಲಿ ಜಿರಳೆ ಪತ್ತೆ: ಐಆರ್‌ಸಿಟಿಸಿ ಪ್ರತಿಕ್ರಿಯಿಸಿದ್ದು ಹೀಗೆ..

ವಾರ್ತಾಭಾರತಿವಾರ್ತಾಭಾರತಿ28 July 2023 4:57 PM IST
share
ವಂದೇಭಾರತ್ ರೈಲಿನಲ್ಲಿ ಪೂರೈಸಲಾದ ಊಟದಲ್ಲಿ ಜಿರಳೆ ಪತ್ತೆ: ಐಆರ್‌ಸಿಟಿಸಿ ಪ್ರತಿಕ್ರಿಯಿಸಿದ್ದು ಹೀಗೆ..

ಭೋಪಾಲ್: ಜುಲೈ 24ರಂದು ಭೋಪಾಲ್‌ನಿಂದ ಗ್ವಾಲಿಯರ್‌ಗೆ ವಂದೇಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಐಆರ್‌ಸಿಟಿಸಿ ಪೂರೈಸಿರುವ ಊಟದಲ್ಲಿ ಜಿರಳೆ ಕಂಡು ಬಂದಿದ್ದು, ಅದರಿಂದ ಅವರು ಆಘಾತಕ್ಕೀಡಾಗಿದ್ದಾರೆ. ಆ ಪ್ರಯಾಣಿಕರು ತಮಗೆ ಪೂರೈಸಲಾದ ಊಟದ ಹಲವಾರು ಚಿತ್ರಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಪ್ರತಿಯಾಗಿ ಭಾರತೀಯ ರೈಲುಗಳಲ್ಲಿ ಪೂರೈಸಲಾಗುತ್ತಿರುವ ಆಹಾರಗಳ ಗುಣಮಟ್ಟದ ಕುರಿತು ಹಲವಾರು ಬಳಕೆದಾರರು ದೂರಿದ್ದಾರೆ.

ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ಪ್ರಯಾಣಿಕ ಸುಭೋದ್ ಪಹಲಾಜನ್, "@IRTCofficial, ವಂದೇಭಾರತ್ ರೈಲಿನಲ್ಲಿ ನನಗೆ ಪೂರೈಸಲಾದ ಆಹಾರದಲ್ಲಿ ಜಿರಳೆ ಕಂಡು ಬಂದಿದೆ" ಎಂದು ಹೇಳಿದ್ದಾರೆ. ಅವರು ಊಟದ ಹಲವಾರು ಚಿತ್ರಗಳನ್ನು ಹಂಚಿಕೊಂಡಿದ್ದು, ಆ ಚಿತ್ರಗಳಲ್ಲಿ ರೋಟಿಯೊಂದಕ್ಕೆ ಸಣ್ಣ ಜಿರಳೆ ಅಂಟಿಕೊಂಡಿರುವುದು ಕಂಡು ಬಂದಿದೆ.

ಈ ದೂರಿನ ಕುರಿತು ಪ್ರತಿಕ್ರಿಯಿಸಿರುವ ರೈಲ್ವೆ ಸೇವಾ, ಈ ಅಹಿತಕರ ಅನುಭವದ ಕುರಿತು ಕ್ಷಮೆ ಯಾಚಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ತಿಳಿಸಿದೆ.

"ಇಂತಹ ಅಹಿತಕರ ಅನುಭವ ಒದಗಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನೇರ ಸಂದೇಶದ ಮೂಲಕ ನಿಮ್ಮ ಪಿಎನ್‌ಆರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನಮ್ಮೊಂದಿಗೆ ಹಂಚಿಕೊಳ್ಳುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇವೆ" ಎಂದು ಅದು ಪ್ರತಿಕ್ರಿಯಿಸಿದೆ.

ಪ್ರಯಾಣಿಕ ಸುಬೋಧ್ ಪಹಲಾಜನ್ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಐಆರ್‌ಟಿಸಿ, ಅವರಿಗೆ ಆಹಾರವನ್ನು ಮರು ಪೂರೈಸಲಾಗಿದೆ ಎಂದು ಹೇಳಿದೆ. "ಈ ಕುರಿತು ಐಆರ್‌ಟಿಸಿ ಪ್ರಾಮಾಣಿಕ ಕ್ರಮ ಕೈಗೊಂಡಿದ್ದು, ಪ್ರಯಾಣಿಕರಿಗೆ ಪರ್ಯಾಯ ಆಹಾರವನ್ನು ಒದಗಿಸಲಾಗಿದೆ. ಇಂತಹ ಘಟನೆಗಳ ಕುರಿತು ಶೂನ್ಯ ಸಹಿಷ್ಣು ಎಚ್ಚರಿಕೆಯೊಂದಿಗೆ ಪರವಾನಗಿದಾರರ ವಿರುದ್ಧ ಸೂಕ್ತ ದಂಡನಾ ಕ್ರಮವನ್ನು ಕೈಗೊಳ್ಳಲಾಗುವುದು" ಎಂದು ಐಆರ್‌ಟಿಸಿ ಪ್ರತಿಕ್ರಿಯೆ ನೀಡಿದೆ.

ಭೋಪಾಲ್‌ನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರೂ ಕೂಡಾ ಟ್ವೀಟ್ ಮಾಡಿದ್ದು, ಪ್ರಯಾಣಿಕರಿಗೆ ತಕ್ಷಣವೇ ಪರ್ಯಾಯ ಆಹಾರವನ್ನು ಪೂರೈಸಲಾಗಿದ್ದು, ಪರವಾನಗಿದಾರರಿಗೆ ದಂಡ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

"ಈ ವಿಷಯದಲ್ಲಿ ಐಆರ್‌ಟಿಸಿ ಪ್ರಾಮಾಣಿಕ ಕ್ರಮ ಕೈಗೊಂಡಿದ್ದು, ಪ್ರಯಾಣಿಕರಿಗೆ ಪರ್ಯಾಯ ಆಹಾರ ಒದಗಿಸಿದೆ. ಇಂತಹ ಘಟನೆಗಳ ವಿರುದ್ಧ ಶೂನ್ಯ ಸಹಿಷ್ಣುತೆಯ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ, ಪರವಾನಗಿದಾರರ ವಿರುದ್ಧ ಸೂಕ್ತ ದಂಡನಾ ಕ್ರಮವನ್ನು ಕೈಗೊಳ್ಳಲಾಗಿದೆ" ಎಂದು ಅವರು ತಿಳಿಸಿದ್ದಾರೆ.

ಭೋಪಾಲ್-ದಿಲ್ಲಿ ಮಾರ್ಗದ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ರಾಣಿ ಕಮಲಾಪತಿ ನಿಲ್ದಾಣದಿಂದ ಹಝರತ್ ನಿಝಾಮುದ್ದೀನ್ ನಿಲ್ದಾಣದವರೆಗೆ ಸಂಚರಿಸುತ್ತದೆ. ಇದೇ ರೈಲಿನಲ್ಲಿ ಪ್ರಯಾಣಿಸುವ ಹಲವಾರು ಪ್ರಯಾಣಿಕರೂ ಕೂಡಾ ಈ ರೈಲಿನಲ್ಲಿ ಪೂರೈಸಲಾಗುವ ಆಹಾರ ಗುಣಮಟ್ಟದ ಕುರಿತು ಟ್ವಿಟರ್‌ನಲ್ಲಿ ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X