Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಟ್ರೆಂಡಿಂಗ್
  4. ಪರೀಕ್ಷೆ ಬರೆಯಲು ಬಂದ ತಾಯಿಯ ಮಗುವನ್ನು...

ಪರೀಕ್ಷೆ ಬರೆಯಲು ಬಂದ ತಾಯಿಯ ಮಗುವನ್ನು ಆರೈಕೆ ಮಾಡಿ ಗಮನ ಸೆಳೆದ ಮಹಿಳಾ ಪೊಲೀಸ್ ಪೇದೆ

ವಾರ್ತಾಭಾರತಿವಾರ್ತಾಭಾರತಿ11 July 2023 7:18 PM IST
share
ಪರೀಕ್ಷೆ ಬರೆಯಲು ಬಂದ ತಾಯಿಯ ಮಗುವನ್ನು ಆರೈಕೆ ಮಾಡಿ ಗಮನ ಸೆಳೆದ ಮಹಿಳಾ ಪೊಲೀಸ್ ಪೇದೆ

ಅಹಮದಾಬಾದ್: ರವಿವಾರ ಓಧವ್‌ನಲ್ಲಿ ಜರುಗಿದ ಗುಜರಾತ್ ಹೈಕೋರ್ಟ್‌ನ ಜವಾನ ಹುದ್ದೆ ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದ ತಾಯಿಯೊಬ್ಬಳ ಮಗುವನ್ನು ಆರೈಕೆ ಮಾಡಿರುವ ಗುಜರಾತ್ ಮಹಿಳಾ ಪೊಲೀಸ್ ಪೇದೆಯೊಬ್ಬರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಅಹಮದಾಬಾದ್ ಪೊಲೀಸರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೆಯಾಗಿರುವ ಭಾವಚಿತ್ರಗಳಲ್ಲಿ ಮಹಿಳಾ ಪೊಲೀಸ್ ಪೇದೆ ದಯಾ ಬೆನ್, ಆರು ತಿಂಗಳ ಮಗುವನ್ನು ಹಿಡಿದುಕೊಂಡು, ಮಗು ಜೊತೆ ಆಟವಾಡುತ್ತಿರುವುದನ್ನು ಕಾಣಬಹುದಾಗಿದೆ.

ಗುಜರಾತ್ ಹೈಕೋರ್ಟ್‌ನ ಜವಾನ ಹುದ್ದೆ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಮಹಿಳಾ ಅಭ್ಯರ್ಥಿಯೊಬ್ಬರು ತಮ್ಮ ಆರು ತಿಂಗಳ ಗಂಡು ಮಗುವಿನೊಂದಿಗೆ ಓಧವ್ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು ಎಂದು ಆ ಪೋಸ್ಟ್‌ಗೆ ನೀಡಿರುವ ಶೀರ್ಷಿಕೆಯಲ್ಲಿ ಹೇಳಲಾಗಿದೆ. ಪರೀಕ್ಷೆ ಇನ್ನೇನು ಪ್ರಾರಂಭವಾಗಬೇಕಿದ್ದಾಗ ಆ ಮಹಿಳೆಯ ಮಗುವು ನಿರಂತರವಾಗಿ ಅಳಲು ಶುರು ಮಾಡಿದೆ. ಆಗ ಆ ಮಹಿಳೆಗೆ ನೆರವು ನೀಡಲು ಮುಂದಾದ ಮಹಿಳಾ ಪೇದೆಯು ಆ ಮಗುವನ್ನು ಆರೈಕೆ ಮಾಡುವ ಆಹ್ವಾನ ನೀಡಿ, ಆ ಮಹಿಳಾ ಅಭ್ಯರ್ಥಿಯು ಯಾವುದೇ ತೊಂದರೆ ಇಲ್ಲದಂತೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಹಮದಾಬಾದ್ ಪೊಲೀಸರು, "ಓಧವ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಆಗಮಿಸಿದ್ದ ಮಹಿಳಾ ಅಭ್ಯರ್ಥಿಯ ಮಗುವು ಅಳುತ್ತಿತ್ತು. ಹೀಗಾಗಿ, ಆ ಮಹಿಳೆಗೆ ಪ್ರಶ್ನೆ ಪತ್ರಿಕೆಗೆ ಉತ್ತರಿಸುವ ಸಮಯ ವ್ಯರ್ಥವಾಗಬಾರದಿತ್ತು. ಆಕೆ ತನ್ನ ಪರೀಕ್ಷೆಯನ್ನು ವ್ಯವಸ್ಥಿತ ರೀತಿಯಲ್ಲಿ ಮುಗಿಸಿರುವುದು ಸಂತಸದಾಯಕ ಸಂಗತಿಯಾಗಿದೆ" ಎಂದು ಹೇಳಿದ್ದಾರೆ.

ಅಹಮದಾಬಾದ್ ಪೊಲೀಸರು ಹಂಚಿಕೊಂಡಿರುವ ಈ ಘಟನೆಯ ಭಾವಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಹಲವಾರು ಬಳಕೆದಾರರು ಮಹಿಳಾ ಪೇದೆಯನ್ನು ಶ್ಲಾಘಿಸಿದ್ದಾರೆ.

ಮೆಚ್ಚುಗೆಯ ಸುರಿಮಳೆ ಸುರಿಸಿರುವ ನೆಟ್ಟಿಗರ ಪೈಕಿ ಓರ್ವ ಬಳಕೆದಾರ, "ನಿಮ್ಮ ಬಗ್ಗೆ ನಮಗೆ ಹೆಮ್ಮೆಯಾಗುತ್ತಿದೆ ಮೇಡಂ" ಎಂದು ಹೇಳಿದ್ದರೆ, ಮತ್ತೋರ್ವ ಬಳಕೆದಾರರು, "ಮಹಿಳಾ ಪೊಲೀಸ್ ಅಧಿಕಾರಿಯಾದ ದಯಾ ಬೆನ್ ಓರ್ವ ಮಹಿಳಾ ಪರೀಕ್ಷಾರ್ಥಿಗೆ ನೆರವು ಒದಗಿಸಿದ್ದು, ನಿಜಾರ್ಥದಲ್ಲಿ ಅವರು ತಾಯಿಯಾಗುವ ಮೂಲಕ ಆಕೆಯ ಮಗುವನ್ನು ರಕ್ಷಿಸಿದ್ದಾರೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

"ಇದು ಪೊಲೀಸರ ನಿಜವಾದ ಗುರುತು. ಇತ್ತೀಚೆಗೆ ಮಕ್ಕಳ ಕಾಟ ಜಾಸ್ತಿಯಾದರೆ, "ಪೊಲೀಸರು ಬಂದು ನಿನ್ನನ್ನು ಹಿಡಿದುಕೊಂಡು ಹೋಗುತ್ತಾರೆ" ಎಂದು ಹೆದರಿಸಿ ಅವರನ್ನು ಸುಮ್ಮನಾಗಿಸಬಹುದಾಗಿದೆ" ಎಂದು ಮತ್ತೊಬ್ಬ ಬಳಕೆದಾರರೊಬ್ಬರು ಹಾಸ್ಯ ಮಾಡಿದ್ದಾರೆ.

"ಶ್ಲಾಘನೀಯ ಕೆಲಸ. ಅಹಮದಾಬಾದ್ ಪೊಲೀಸರಿಗೆ ವಂದನೆಗಳು", "ಭಾರಿ ಪ್ರಶಂಸನೀಯ ಹಾಗೂ ಆದರ್ಶಪ್ರಾಯ ಮಾನವೀಯತೆ" ಎಂದು ನೆಟ್ಟಿಗರೊಬ್ಬರು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X