Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ಕರ್ನಾಟಕ ಒಲಿಂಪಿಕ್ಸ್ ಕ್ರೀಡಾಕೂಟ...

ಕರ್ನಾಟಕ ಒಲಿಂಪಿಕ್ಸ್ ಕ್ರೀಡಾಕೂಟ 2025-26 | ಅತ್ಲೆಟಿಕ್ಸ್‌ನಲ್ಲಿ 9 ಪದಕಗಳೊಂದಿಗೆ ಬೆಳಗಾವಿ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ21 Jan 2026 12:20 AM IST
share
ಕರ್ನಾಟಕ ಒಲಿಂಪಿಕ್ಸ್ ಕ್ರೀಡಾಕೂಟ 2025-26 | ಅತ್ಲೆಟಿಕ್ಸ್‌ನಲ್ಲಿ 9 ಪದಕಗಳೊಂದಿಗೆ ಬೆಳಗಾವಿ ಶುಭಾರಂಭ

ತುಮಕೂರು : ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ 2025-26ರ ಅತ್ಲೆಟಿಕ್ಸ್‌ನಲ್ಲಿ ಮೊದಲ ದಿನವೇ ಬೆಳಗಾವಿ ಅತ್ಲೆಟ್‌ಗಳು 9 ಪದಕಗಳನ್ನು ಗೆದ್ದು ಮೇಲುಗೈ ಸಾಧಿಸಿದ್ದಾರೆ. ಏತನ್ಮಧ್ಯೆ, ಉಡುಪಿಯ ಮಾಧುರ್ಯ ಒಂದು ಚಿನ್ನ ಸೇರಿ ಎರಡು ಪದಕ ಗೆದ್ದು ಬೀಗಿದ್ದಾರೆ.

ಕೂಟದ ಐದನೇ ದಿನವಾದ ಮಂಗಳವಾರ ಅತ್ಲೆಟಿಕ್ಸ್, ವೇಟ್‌ಲಿಫ್ಟಿಂಗ್, ಟೇಬಲ್ ಟೆನಿಸ್, ಲಾನ್ ಟೆನಿಸ್ ಮತ್ತು ಈಜು ಸ್ಪರ್ಧೆಗಳಲ್ಲಿ ಪದಕ ಬೇಟೆ ನಡೆದವು. ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅತ್ಲೆಟಿಕ್ಸ್‌ನಲ್ಲಿ ಬೆಳಗಾವಿ ಜತೆ ಆತಿಥೇಯ ತುಮಕೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತ್ಲೇಟ್‌ಗಳು ಒಂದೊಂದು ಸ್ಪರ್ಧೆಯಲ್ಲಿ ಎಲ್ಲಾ ಮೂರು ಪದಕ ಗೆದ್ದ ಸಾಧನೆಯನ್ನೂ ಮಾಡಿದ್ದಾರೆ. ಉಡುಪಿಯ ಮಾಧುರ್ಯ ಡಿಸ್ಕಸ್ ಥ್ರೋನಲ್ಲಿ ಸ್ವರ್ಣ ಮತ್ತು ಶಾಟ್‌ಪುಟ್‌ನಲ್ಲಿ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.

ಪುರುಷರ 400 ಮೀ. ಓಟದಲ್ಲಿ ಬೆಳಗಾವಿಯ ಓಂ ಸುನಿಲ್ ಚೌಹಾಣ್, ವೀರೇಶ್ ಬಿ. ಕಾಂಬ್ಳೆ ಮತ್ತು ಸ್ವಯಂ ದಿನೇಶ್ ಜುವೇಕರ್ ಸ್ವರ್ಣ, ಬೆಳ್ಳಿ, ಕಂಚಿನ ಪದಕ ಗೆದ್ದರು; ಇದೇ ಸ್ಪರ್ಧೆಯ ಮಹಿಳೆಯರ ವಿಭಾಗದಲ್ಲಿ ದಕ್ಷಿಣ ಕನ್ನಡದ ಶ್ರಾವಣಿ ಭಾಟೆ, ರೇಖಾ ಬಸಪ್ಪ ಪಿರೊಜಿ ಮತ್ತು ಗೀತಾ ಬಿ. ಚೌಕಾಶಿ ಕ್ರಮವಾಗಿ ಮೊದಲ 3 ಸ್ಥಾನ ಗೆದ್ದರು. ಈ ಮಧ್ಯೆ, ಪುರುಷರ 10 ಸಾವಿರ ಮೀ.ನಲ್ಲಿ ತುಮಕೂರಿನ ಟಿ.ಸಿ. ಸಂದೀಪ್, ಎಲ್. ರಘುವೀರ್ ಮತ್ತು ಎಚ್.ಎ. ದರ್ಶನ್ ಅನುಕ್ರಮವಾಗಿ ಪೋಡಿಯಂ ಸ್ಥಾನ ಗಳಿಸಿ ಗಮನ ಸೆಳೆದರು.

ಟೇಬಲ್ ಟೆನಿಸ್ ಡಬಲ್ಸ್- ಬೆಂಗಳೂರು, ಮಂಗಳೂರಿಗೆ ಪ್ರಶಸ್ತಿ: ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣ ದಲ್ಲಿ ನಡೆದ ಪುರುಷರ ಟೇಬಲ್ ಟೆನಿಸ್ ಡಬಲ್ಸ್ ವಿಭಾಗದಲ್ಲಿ ಬೆಂಗಳೂರಿನ ರೋಹಿತ್ ಶಂಕರ್-ರಾಮ್ ಕುಮಾರ್ ಜೋಡಿ 3-0 ಸೆಟ್‌ಗಳಿಂದ ಮಂಗಳೂರಿನ ಸನ್ಮಾನ್-ವಿನಯ್ ಕುಮಾರ್ ಜೋಡಿಯನ್ನು ಸೋಲಿಸಿ ಬಂಗಾರದ ಪದಕಕ್ಕೆ ಕೊರಳೊಡ್ಡಿತು.

ಇದೇ ವೇಳೆ ಮಹಿಳೆಯರ ಡಬಲ್ಸ್‌ನಲ್ಲಿ ಮಂಗಳೂರಿನ ಪಿ.ಪ್ರೇಕ್ಷ -ನಹಲಾ ಜೋಡಿ 3-2 ಸೆಟ್‌ನಿಂದ ಬೆಂಗಳೂರು ನಗರದ ಸಹನಾ-ಕರ್ಣ ಜೋಡಿ ವಿರುದ್ಧ ಜಯಗಳಿಸಿ ಸ್ವರ್ಣ ಗೆದ್ದಿತು

ಟೆನಿಸ್‌ನಲ್ಲಿ ಜೇಸನ್ ಡೇವಿಡ್, ಹೃದಯೇಶಿಗೆ ಸ್ವರ್ಣ: ತುಮಕೂರು ಜಿಲ್ಲಾ ಲಾನ್ ಟೆನಿಸ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಜೇಸನ್ ಡೇವಿಡ್ 2-6, 6-2, 2-1 ಸೆಟ್‌ಗಳಿಂದ ನಿಶಿತ್ ನವೀನ್ ಅವರನ್ನು ಮಣಿಸಿ, ಸ್ವರ್ಣ ಪದಕ ಗೆದ್ದುಕೊಂಡಿದ್ದಾರೆ. ಆದರೆ 3ನೇ ಹಾಗೂ ನಿರ್ಣಾಯಕ ಸೆಟ್‌ನಲ್ಲಿ ನಿಶಿತ್ ಗಾಯಗೊಂಡು ನಿವೃತ್ತಿಯಾದ ಹಿನ್ನೆಲೆಯಲ್ಲಿ ಜೇಸನ್ ಡೇವಿಡ್ ವಿಜಯಿ ಎಂದು ಘೋಷಿಸಲಾಯಿತು. ಬೆಂಗಳೂರು ಸಿದ್ದಾಂತ ಶಾಸ್ತ್ರಿ ಬಳ್ಳಾರಿಯ ಧನುಶ್ ಸೋಲಿಸಿ ಕಂಚು ಗೆದ್ದರು.

ಮಹಿಳೆಯರ ಸಿಂಗಲ್ಸ್ ಸ್ಪರ್ಧೆಯಲ್ಲಿ ಹೃದಯೇಶಿ ಪೈ 4-6, 6-1, 6-4 ಸೆಟ್‌ಗಳಿಂದ ಭಾರತಿಯನ್ ಬಿ. ಪೈ ವಿರುದ್ಧ ಗೆದ್ದರೆ, ಬೆಂಗಳೂರಿನ ಸುರಭಿ ಶ್ರೀನಿವಾಸ್ 6-0, 6-0 ಸೆಟ್‌ಗಳಿಂದ ತುಮಕೂರು ಸ್ವಾತಿ ಕುಮಾರ್ ಮಣಿಸಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಪುರುಷರ ಡಬಲ್ಸ್‌ನಲ್ಲಿ ಬಳ್ಳಾರಿಯ ಅಭಿಷೇಕ್ ರೆಡ್ಡಿ-ಧನುಶ್ ಜೋಡಿಗೆ ಚಿನ್ನ. ತುಮಕೂರಿನ ಅಮೋಘ -ರಕ್ಷಿತ್ ಜೋಡಿಗೆ ಬೆಳ್ಳಿ. ಬೆಂಗಳೂರಿನ ನಿಶಿತ್ ನವೀನ್-ಸಿದ್ಧಾಂತ್ ಶಾಸ್ತ್ರಿ ಜೋಡಿಗೆ ಕಂಚಿನ ಪದಕ ಲಭಿಸಿತು. ಮಹಿಳಾ ಡಬಲ್ಸ್ ನಲ್ಲಿಬೆಂಗಳೂರಿನ ಭಾರತಿಯಾನ-ಹೃದೇಶಿ (ಸ್ವರ್ಣ), ತುಮಕೂರಿನ ಎಂ.ಎನ್.ರಂಜಿತಾ - ಸ್ವಾತಿ ಎಚ್. ಕುಮಾರ್ (ಬೆಳ್ಳಿ), ತುಮಕೂರಿನ ತಾನ್ಯಾ ಮೋರಸ್ - ಮೇಘನಾ ಸುರೇಶ್ (ಕಂಚು) ಅನುಕ್ರಮವಾಗಿ ಮೊದಲ ಮೂರು ಸ್ಥಾನ ಗಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X