Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ...

ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ ಯೋಜನೆ | 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆ : ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ7 May 2025 11:53 PM IST
share
ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ ಯೋಜನೆ | 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆ : ವಿ.ಸೋಮಣ್ಣ

ದಾವಣಗೆರೆ : ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ ಯೋಜನೆ 2027 ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಾಗಿ ಈಗಾಗಲೇ ಶೇ.85ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಉಳಿದ ಶೇ.15ರಷ್ಟು ಭೂಸ್ವಾಧೀನ ಶೀಘ್ರವೇ ಮುಗಿಸುವ ಕುರಿತು ಮತ್ತು ತ್ವರಿತವಾಗಿ ಕಾಮಗಾರಿ ನಡೆಸುವ ಸಂಬಂಧ ಮೇ 17ರಂದು ಚಿತ್ರದುರ್ಗದಲ್ಲಿ ಸಭೆ ಕರೆಯಲಾಗಿದ್ದು, ಸಂಸದ ಗೋವಿಂದ ಕಾರಜೋಳ ಮತ್ತು ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ನೇರ ರೈಲು ಮಾರ್ಗ ಯೋಜನೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್ ಅವರ ಕನಸಿನ ಕೂಸಾಗಿದ್ದು, ಶೀಘ್ರವೇ ಇದನ್ನೂ ಪೂರ್ಣಗೊಳಿಸಲಾಗುವುದು. 2027 ಡಿಸೆಂಬರ್ ಒಳಗೆ ರಾಯದುರ್ಗ-ತುಮಕೂರು 207 ಕಿ.ಮೀ., ತುಮಕೂರು-ದಾವಣಗೆರೆ 192 ಕಿ.ಮೀ. ರೈಲು ಮಾರ್ಗಗಳು ಲೋಕಾರ್ಪಣೆಗೊಳ್ಳಲಿವೆ. ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೂ ಮುನ್ನವೇ ಈ ಎರಡೂ ಯೋಜನೆಗಳನ್ನು ಉದ್ಘಾಟಿಸುವ ಉದ್ದೇಶ ಹೊಂದಲಾಗಿದೆ ಎಂದರು.

ರೈಲ್ವೆ ಇಲಾಖೆ ಜಾಗದಲ್ಲಿ ಇನ್ನು ಮುಂದೆ ನಡೆಯುವ ಎಲ್ಲ ಮೇಲ್ಸೇತುವೆ ಮತ್ತು ಕೆಳ ಸೇತುವೆಗಳನ್ನು ಕೇಂದ್ರ ಸರಕಾರದ ಅನುದಾನದಲ್ಲಿಯೇ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ತುಮಕೂರು ಕ್ಷೇತ್ರದಲ್ಲಿ 23 ಮೇಲು- ಕೆಳ ಸೇತುವೆಗಳ ಇದ್ದವು. ಒಂದು ಬಿಟ್ಟು ಹೋಗಿತ್ತು. ಇದೀಗ ಅದರ ಕಾಮಗಾರಿಯೂ ಆರಂಭಗೊಂಡಿದ್ದು, ಒಟ್ಟಾರೆ 900 ಕೋಟಿ ರೂ. ಮೊತ್ತದ ರೈಲ್ವೆ ಸೇತುವೆ ನಿರ್ಮಾಣ ಕಾಮಗಾರಿಗಳು ಬರದಿಂದ ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

ತುಮಕೂರು-ದಾವಣಗೆರೆ ನೇರ ರೈಲು ಮಾರ್ಗ ಯೋಜನೆ ಶೇ.50:50 ಅನುದಾನದಡಿ ಆರಂಭಗೊಂಡಿತ್ತು. ನಂತರ ಭೂಮಿ ಸ್ವಾಧೀನ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ಇದೀಗ ಎಲ್ಲವೂ ಬಗೆಹರಿದಿದ್ದು, ಅಂತಿಮವಾಗಿ 2027 ಡಿಸೆಂಬರ್ ವೇಳೆಗೆ ಉದ್ಘಾಟನೆಗೊಳ್ಳಲಿವೆ ಎಂದರು.

ಲೆವೆಲ್ ಕ್ರಾಸಿಂಗ್ ತಲೆನೋವಾಗಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಹಂತಹಂತವಾಗಿ ರಾಜ್ಯದ ಎಲ್ಲ ಲೆವೆಲ್ ಕ್ರಾಸಿಂಗ್‌ಗಳಿಗೆ ಮುಕ್ತಿ ನೀಡುವ ಕೆಲಸ ಮಾಡಲಾಗುವುದು ಎಂದ ಸೋಮಣ್ಣ, ಹರಿಹರ ರೈಲು ನಿಲ್ದಾಣ ಅಭಿವೃದ್ಧಿಗೆ ಈಗಾಗಲೇ 24 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.

ರೈಲು ಅಪಘಾತಗಳನ್ನು ತಡೆಯುವ ಸಲುವಾಗಿ ‘ಕವಚ್’ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಒಂದು ವೇಳೆ ಎರಡು ರೈಲುಗಳ ಒಂದೇ ಹಳಿಯ ಮೇಲೆ ಬಂದರೂ ರೈಲುಗಳು ಎಷ್ಟೇ ವೇಗವಾಗಿ ಇದ್ದರೂ ಕನಿಷ್ಠ 50 ಮೀಟರ್ ಒಳಗೆ ರೈಲುಗಳ ವೇಗ ತಗ್ಗಿಸಿ ಅಪಘಾತವಾಗದಂತೆ ತಡೆಯುವ ಪ್ರಯೋಗ ನಡೆಯುತ್ತಿದೆ. ಕರ್ನಾಟಕದಲ್ಲಿ 2 ಸಾವಿರ ಕಿ.ಮೀ.ವರೆಗೂ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಪ್ರಾಯೋಗಿಕವಾಗಿ ಕೆಲಸ ಆರಂಭಗೊಂಡಿದೆ. ಭವಿಷ್ಯದಲ್ಲಿ ರೈಲು ಅಪಘಾತ ತಡೆಯುವಲ್ಲಿ ಕವಚ್ ಪರಿಣಾಮಕಾರಿಯಾಗಲಿದೆ ಎಂದು ನುಡಿದರು.

ಭಾರತ ನಡೆಸಿರುವ ದಾಳಿ ಶ್ಲಾಘನೀಯ :

ಪಾಕಿಸ್ತಾನದ ಭಯೋತ್ಪಾದನಾ ತರಬೇತಿ ತಾಣಗಳ ಮೇಲೆ ಭಾರತ ನಡೆಸಿರುವ ದಾಳಿ ಶ್ಲಾಘನೀಯ. ಭಾರತದ ಸಾರ್ವಭೌಮತೆಗೆ ಧಕ್ಕೆ ಉಂಟಾದರೆ ಯಾವುದೇ ಕಾರಣಕ್ಕೂ ದೇಶ ಸುಮ್ಮನೆ ಕೂರುವುದಿಲ್ಲ ಎನ್ನುವುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ,ಶಾಸಕ ಬಿ.ಪಿ.ಹರೀಶ್, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ್, ಎನ್.ಎಂ.ಮುರುಗೇಶ್ ಆರಾಧ್ಯ, ವೀರೇಶ್ ಹನಗವಾಡಿ, ಶ್ರೀನಿವಾಸ್ ದಾಸಕರಿಯಪ್ಪ, ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X