Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರು: ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ...

ತುಮಕೂರು: ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 54 ಪೋಕ್ಸೋ ಪ್ರಕರಣಗಳು

ವಾರ್ತಾಭಾರತಿವಾರ್ತಾಭಾರತಿ15 Dec 2023 10:40 PM IST
share
ತುಮಕೂರು: ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 54 ಪೋಕ್ಸೋ ಪ್ರಕರಣಗಳು

ತುಮಕೂರು: ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಲ್ಲಿ 54 ಪೋಕ್ಸೋ ಪ್ರಕರಣಗಳು ದಾಖಲಾಗಿ ಎಫ್.ಐ.ಆರ್.ಆಗಿವೆ. ಅದರಲ್ಲಿ 5 ಪ್ರಕರಣಗಳು ಅಪ್ರಾಪ್ತ ಬಾಲಕಿಯರ ಮೇಲಾದ ದೌರ್ಜನ್ಯ ಪ್ರಕರಣಗಳಾಗಿವೆ.ಉಳಿದ ಪ್ರಕರಣಗಳು ಅಂತರಜಾತಿ ವಿವಾಹ,ಬಾಲ್ಯ ವಿವಾಹ,ಅಪ್ರಾಪ್ತರ ವಿವಾಹವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ತಿಳಿಸಿದ್ದಾರೆ.

ತುಮಕೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರ ಮತ್ತು ಮಹಿಳಾ ಅಧ್ಯಯನ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಐ.ಕ್ಯೂ.ಎ.ಸಿ.,ವಿವಿವಿಜ್ಞಾನ ಕಾಲೇಜು ಇವರ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆ ಹೇಗೆ? ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

" 2013ರಲ್ಲಿ ಜಾರಿಯಾದ ‘ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆ’ ಕಾಯಿದೆ 1997ರಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದ ವಿಶಾಖ ಪ್ರಕರಣದ ಮಾರ್ಗಸೂಚಿಗಳನ್ನು, ಕಾಯಿದೆಯ ಹಿನ್ನೆಲೆಯನ್ನು ಪ್ರತಿಯೊಬ್ಬ ಹೆಣ್ಣು ತಿಳಿಯಬೇಕು.ರಾಜಸ್ತಾನದ ಗುಜ್ಜರ್ ಕುಟುಂಬದ ಹೆಣ್ಣುಮಗಳಾದ ಬನ್ವಾರೀದೇವಿಯ ಮೇಲಾದ ಸಾಮೂಹಿಕ ಅತ್ಯಾಚಾರದಿಂದ ಹೊರಬಂದ ತೀರ್ಪಿನಿಂದಾಗಿ ಮಹಿಳೆಯರ ಹಿತರಕ್ಷಣೆಗೆ ಕಾನೂನು ಭದ್ರ ಕೋಟೆಯನ್ನು ರಚಿಸಿತು "ಎಂದು ತಿಳಿಸಿದರು.

2013ರ ಕಾಯಿದೆ ಪ್ರಕಾರ ಉದ್ಯೋಗ ಸ್ಥಳಗಳಲ್ಲಿ ಮಹಿಳೆಯರ ಹಿತಕ್ಕಾಗಿ ಆಂತರಿಕ ಸಮಿತಿ ರಚಿಸಬೇಕು.ಸಮಿತಿಯಲ್ಲಿ ಶೇ.50ರಷ್ಟು ಮಹಿಳೆಯರು ಇರಬೇಕು.ಸಂಸ್ಥೆಯಲ್ಲಿ 10ಕ್ಕಿಂತ ಕಡಿಮೆ ಮಹಿಳಾ ಉದ್ಯೋಗಿಗಳಿದ್ದಲ್ಲಿ ಸ್ಥಳೀಯ ಸಮಿತಿ ರಚಿಸಿ, ಜಿಲ್ಲಾಧಿಕಾರಿಗಳ ಉಸ್ತುವಾರಿಯಿರಬೇಕು.ಮಹಿಳೆಯರ ಮೇಲೆ ಯಾವುದೇ ರೀತಿಯ ದೌರ್ಜನ್ಯವಾದಲ್ಲಿ ಸಮಿತಿಯ ಮುಖೇನ ಬಲಿಪಶುವಾದ ಹೆಣ್ಣುಮಗಳು ಲಿಖಿತ ರೂಪದಲ್ಲಿ ಪೋಲಿಸ್ ಠಾಣೆಗೆ ದೂರು ನೀಡಬೇಕು. ಅಪರಾಧಿಗೆ 3 ವರ್ಷ ಜೈಲು, 50,000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಮಹಿಳೆಯರ ಖಾಸಗಿ ಬದುಕನ್ನು ಚಿತ್ರೀಕರಿಸಿಕೊಳ್ಳುವುದು, ಧ್ವನಿಮುದ್ರಿಸಿಕೊಳ್ಳುವುದು ದೊಡ್ಡ ಅಪರಾಧ.ಅಪರಾಧಿಗಳಿಗೆ 7 ವರ್ಷ ಸಜೆ ಖಂಡಿತ.ಅಪ್ರಾಪ್ತ ಬಾಲಕಿಯರನ್ನು ಮದುವೆಯಾದಲ್ಲಿ ಅಪಹರಣ,ಅತ್ಯಾಚಾರದ ಪ್ರಕರಣ ದಾಖಲಾಗುತ್ತದೆ.ಅಂಥವರಿಗೆ 20 ವರ್ಷ ಸಜೆ ಹಾಗೂ ಬದುಕು ನಾಶವಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿವಿ ಕುಲಸಚಿವೆ ನಾಹಿದಾ ಜೂಮ್, ಶಿಸ್ತು, ಮೌಲ್ಯಗಳಿಂದ ಕೂಡಿದ ಬದುಕು ವಿದ್ಯಾರ್ಥಿಗಳದ್ದಾಬೇಕು.ಬದಲಾವಣೆಯನ್ನು ತರುವ ಯುವಸಮಾಜ ಎಡವಬಾರದು.ಹೆಣ್ಣಾಗಿ ಹುಟ್ಟವುದೇ ಸಾಧನೆಯಾಗಿದೆ.ಆದರೂ ಹೆಣ್ಣು ಭ್ರೂಣ ಹತ್ಯೆಗಳ ಸಂಖ್ಯೆ ಏರುತ್ತಿದೆ.ಮಹಿಳೆಯರನ್ನು ಪ್ರೋತ್ಸಾಹಿಸುವ ಪ್ರಧಾನ ಸಮಾಜ ಬೇಕು ಎಂದು ಹೇಳಿದರು.

ವಿವಿ ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕಿ ಡಾ.ಜ್ಯೋತಿ ಉಪಸ್ಥಿತರಿದ್ದರು.

Tags

Tumkur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X