Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ...

ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ನಿಧನ

ವಾರ್ತಾಭಾರತಿವಾರ್ತಾಭಾರತಿ2 Jan 2024 12:20 PM IST
share
ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ನಿಧನ

ಉಡುಪಿ : ಕನ್ನಡದ ಹಿರಿಯ ಸಾಹಿತಿ, ಅಂಕಣಕಾರ್ತಿ ಕೆ.ಶಾರದಾ ಭಟ್ (75) ಸೋಮವಾರ ರಾತ್ರಿ ಕುಂದಾಪುರ ಸಮೀಪ ಕೊಟೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಶಾರದಾ ಭಟ್ ಅವರ ಪಯಣ, ಪಲಾಯನ, ಪರಿಭ್ರಮಣ, ಪದರಗಳು, ಸಾತತ್ತೆಗೊಂದು ಸನ್ಮಾನ, ಅಸ್ತಮಾನ (ಕೊಂಕಣಿ ಕಾದಂಬರಿ) ಸೇರಿದಂತೆ ಒಟ್ಟು ಸುಮಾರು 15 ಕಾದಂಬರಿ, ಕಥಾ ಸಂಕಲನ, ವಿಡಂಬನೆ-ವಾರನೋಟ, ಪಂಡಿತ ರಮಾಬಾಯಿ ಅವರ ಜೀವನಚರಿತ್ರೆ ಪ್ರಕಟಗೊಂಡಿವೆ. ಶಾರದಾ ಭಟ್ ಅತ್ಯುತ್ತಮ ಸಂಘಟಕರು, ಅಂಕಣ ಬರೆಹಗಾರರಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು.

ಶಾರದಾ ಭಟ್ ಅವರ ಹಿರಿಯ ಸಹೋದರಿ, ಲೇಖಕಿ ತಾರಾ ಭಟ್ ಕಳೆದ ನವೆಂಬರ್ ತಿಂಗಳ ಮೊದಲ ವಾರ ನಿಧನರಾಗಿದ್ದರು. ಶಾರದಾ ಭಟ್‌ರ ನಿಧನಕ್ಕೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕೋಟೇಶ್ವರದ ಡಾ.ಆರ್.ಎನ್.ಆಚಾರ್ಯ ಸ್ಮಾರಕ ಆಸ್ಪತ್ರೆಯ ಡಾ.ಎನ್.ಭಾಸ್ಕರಾಚಾರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

ಶಾರದಾ ಭಟ್ ಅವರ ಇಚ್ಛೆಯಂತೆ ಅವರ ದೇಹವನ್ನು ಸಂಶೋಧನೆಗಾಗಿ ಮಣಿಪಾಲ ಆಸ್ಪತ್ರೆಗೆ ನೀಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸ್ತ್ರೀವಾದ, ಸ್ತ್ರೀ ಸಮಾನತೆಯ ಪ್ರತಿಪಾದಕಿ

ಸ್ತ್ರೀವಾದ ಹಾಗೂ ಸ್ತ್ರೀಸಮಾನತೆಯ ಪ್ರತಿಪಾದಕಿಯಾಗಿದ್ದ ಶಾರದಾ ಭಟ್ ಅವರು ಜನಿಸಿದ್ದು ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ 1949ರ ಅ.24ರಂದು. ತಂದೆ ಕೆ. ವಿಠಲಭಟ್, ತಾಯಿ ಕಾವೇರಿಯಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟಿದೂರಿನಲ್ಲಿ. ದೂರಸಂಪರ್ಕ ಇಲಾಖೆಯಲ್ಲಿ ಕೆಲಸ ದೊರೆತಿ ದ್ದರಿಂದ ಉದ್ಯೋಗದ ಜೊತೆಗೆ ಬೆಂಗಳೂರಿನ ಆಚಾರ್ಯ ಪಾಠಶಾಲಾ ಸಂಜೆ ಕಾಲೇಜಿನಿಂದ ಬಿ.ಎ. ಪದವಿಯೊಂದಿಗೆ ಬಾಹ್ಯ ವಿದ್ಯಾರ್ಥಿನಿಯಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನೂ ಪಡೆದರು.

ಚಿಕ್ಕಂದಿನಿಂದಲೇ ಸಾಹಿತ್ಯದತ್ತ ಒಲವು. ಮಹಿಳೆಯರ ಶೋಷಣೆಯ ಬಗ್ಗೆ ಅರಿವು ಮೂಡಿಸಲು ಹಲವಾರು ಮಹಿಳಾ ಸಂಘಟನೆಗಳೊಡನೆ ಸಂಪರ್ಕ. ಶೋಷಣೆ ಕುರಿತು ಆಕಾಶವಾಣಿಗಾಗಿ ಹಲವಾರು ನಾಟಕಗಳನ್ನು ಬರೆದು ನಿರ್ದೇಶನ. ಉದ್ಯೋಗದ ಜೊತೆಗೆ ರೂಢಿಸಿಕೊಂಡ ಮತ್ತೊಂದು ಹವ್ಯಾಸ ಪತ್ರಿಕೋದ್ಯಮ. ‘ಸದರ್ನ್ ಸ್ಪೀಕರ್’ ಎಂಬ ಆಂಗ್ಲ ಪತ್ರಿಕೆಯ ವರದಿಗಾರ್ತಿಯಾಗಿದ್ದ ಅವರು ನಂತರ ‘ಪೊಲಿಟಿಕಲ್ ವ್ಯೆ ಆ್ಯಂಡ್ ರಿವ್ಯೆ’ ಎಂಬ ಆಂಗ್ಲ ಪತ್ರಿಕೆಯ ಗೌರವ ಸಹ ಸಂಪಾದಕಿಯಾಗಿ ಕಾರ್ಯ ನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಉಡುಪಿಯಲ್ಲಿದ್ದಾಗ ಅವರು ‘ವಾರ್ತಾಭಾರತಿ’ ದೈನಿಕದಲ್ಲಿ ‘ಉತ್ತರೆಯ ಅಳಲು’ ಎಂಬ ಜನಪ್ರಿಯ ಅಂಕಣವನ್ನು ಬರೆಯುತಿದ್ದರು.

ಹಲವಾರು ಪತ್ರಿಕೆಗಳಲ್ಲಿ ಇವರ ಕಥೆ, ಕವನ, ಲೇಖನಗಳು, ವಿಡಂಬನಾ ಲೇಖನಗಳು ಪ್ರಕಟಗೊಂಡಿವೆ. ಸಾಮಾಜಿಕ ಪಿಡುಗುಗಳಾದ ವರದಕ್ಷಿಣೆ, ವಧುದಹನ, ಅನಕ್ಷರತೆ ಮುಂತಾದ ಮಹಿಳೆಯರ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕಾಗಿ ‘ಅಭಿಯಾನ’ ಪ್ರತಿಷ್ಠಾನದ ಮೂಲಕ ಕ್ರಿಯಾಶೀಲರಾಗಿದ್ದರು. ಪ್ರತಿಷ್ಠಾನದಿಂದ ಯೋಗ ಶಿಬಿರ, ಫಿಲ್ಮ್ ಸ್ಕ್ರಿಪ್ಟ್ ರೈಟಿಂಗ್, ಸಾಹಿತ್ಯ ಸಂಕಿರಣ ಮುಂತಾದ ಕಾರ್ಯಕ್ರಮಗಳನ್ನು ಸಂಘಟಿಸಿದ್ದರು. ಉಡುಪಿಯಲ್ಲಿದ್ದಾಗ ‘ನಡುಮನೆ’ ಎಂಬ ಮನೆಮನೆಯಲ್ಲಿ ತಿಂಗಳಿಗೊಮ್ಮೆ ಆಯೋಜಿಸುತಿದ್ದ ಕಾರ್ಯಕ್ರಮವೂ ಸಾಕಷ್ಟು ಜನಪ್ರಿಯಗೊಂಡಿತ್ತು.

ಸ್ತ್ರೀವಾದವೆಂದರೆ ಪುರುಷರೊಡನೆ ಸಂಘರ್ಷವೆಂದು ಕೆಲವರು ಅರ್ಥೈಸುವುದನ್ನು ಖಂಡಿಸುತಿದ್ದ ಶಾರದಾ ಭಟ್ ಅವರ ನಿಲುವು, ಸ್ತ್ರೀಯರ ಸಮಾನತೆಗಾಗಿ ಹಕ್ಕೊತ್ತಾಯವಾಗಿತ್ತು. ಮಹಿಳೆಯರ ಉನ್ನತಿಗಾಗಿ ಅವರು ನಿರಂತರವಾಗಿ ಶ್ರಮಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X