ʼಆಟಿಡೊಂಜಿ ಕೂಟ’ದಿಂದ ಗ್ರಾಮೀಣ ಸಂಸ್ಕೃತಿಯ ಸೊಬಗು ಅನಾವರಣ

ಉಡುಪಿ, ಆ.11: ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಮಹಿಳಾ ಘಟಕದ ವತಿಯಿಂದ ’ಆಟಿಡೊಂಜಿ ಕೂಟ’ ಕಾರ್ಯಕ್ರಮವು ಶ್ರೀನಾರಾಯಣ ಗುರು ಸಮುದಾಯ ಭವನದಲ್ಲಿ ರವಿವಾರ ನಡೆಯಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ವಹಿಸಿದ್ದರು. ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಬಾಲ ಪ್ರತಿಭೆ ಶ್ರೀಯಾ ಎಸ್. ಪೂಜಾರಿ ಅಂಬಲಪಾಡಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಆಡಳಿತ ಸಮಿತಿಯ ನಿಯೋಜಿತ ಅಧ್ಯಕ್ಷ ಶಿವದಾಸ್ ಪಿ., ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಮಹಿಳಾ ಘಟಕದ ಸಂಚಾಲಕಿ ಗೋಧಾವರಿ ಎಂ.ಸುವರ್ಣ, ಸಹ ಸಂಚಾಲಕಿ ದೇವಕಿ ಕೆ.ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿ ಗಳಾದ ಸಂಚಲ ಶಶಿಕಾಂತ್, ಅಶ್ವಿನಿ ಪೂಜಾರಿ ಹಾಗೂ ಅಮ್ಮ ಡ್ರೀಮ್ ಮೆಲೋಡಿಸ್ ತಂಡದ ಸುನಿಲ್ ಕುಮಾರ್, ಅಶ್ವಿನಿ ಸುನಿಲ್ ಮೊದಲಾದ ವರು ಉಪಸ್ಥಿತರಿದ್ದರು.
ಸಂಘಟನಾ ಕಾರ್ಯದರ್ಶಿ ಪ್ರಭಾ ದಯಾನಂದ ಕಾರ್ಯಕ್ರಮ ನಿರೂಪಿಸಿ, ವಿಜಯ ಕೃಷ್ಣ ವಂದಿಸಿದರು. ಮಹಿಳಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಲೋಲಾಕ್ಷಿ ಸಂಯೋಜನೆಯಲ್ಲಿ ಪುಟಾಣಿಗಳಿಂದ ಆಟಿ ಕಳಂಜ ನೃತ್ಯ ಪ್ರದರ್ಶನ ನಡೆಯಿತು. ಆಟಿ ತಿಂಗಳ ವೈವಿಧ್ಯಮಯ ಖಾಧ್ಯಗಳೊಂದಿಗೆ ಸಾಮೂಹಿಕ ಭೋಜನ ನಡೆಯಿತು.





