Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವದಾಖಲೆಗಾಗಿ ದೀಕ್ಷಾ ವಿ. ಭರತನಾಟ್ಯ...

ವಿಶ್ವದಾಖಲೆಗಾಗಿ ದೀಕ್ಷಾ ವಿ. ಭರತನಾಟ್ಯ ಮೂರನೇ ದಿನಕ್ಕೆ

ವಾರ್ತಾಭಾರತಿವಾರ್ತಾಭಾರತಿ23 Aug 2025 8:56 PM IST
share
ವಿಶ್ವದಾಖಲೆಗಾಗಿ ದೀಕ್ಷಾ ವಿ. ಭರತನಾಟ್ಯ ಮೂರನೇ ದಿನಕ್ಕೆ

ಉಡುಪಿ, ಆ.23: ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ನೃತ್ಯ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಯಲು ಹೊರಟ ವಿದುಷಿ ದೀಕ್ಷಾ ವಿ. ಇವರ ನೃತ್ಯ ಪ್ರದರ್ಶನ ಇಂದು ಮೂರನೇ ದಿನ ಮುಂದುವರಿದಿದೆ.

ಆ.21ರಂದು ಅಪರಾಹ್ನ 3 ಗಂಟೆಗೆ ಪ್ರಾರಂಭಗೊಂಡ ಭರತನಾಟ್ಯ ಪ್ರದರ್ಶನ ಆ.30ರವರೆಗೆ ನಿರಂತರ 216 ಗಂಟೆಗಳ ಕಾಲ ನಡೆಯಲಿದೆ. ಅಜ್ಜರಕಾಡಿನಲ್ಲಿರುವ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜಿನ ಸಭಾಂಗಣ ದಲ್ಲಿ ನಡೆದಿರುವ ಈ ನೃತ್ಯ ಪ್ರದರ್ಶನವನ್ನು ಇಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ವೀಕ್ಷಿಸಿ ಶುಭಹಾರೈಸಿದರು.

ಡಾ.ಪರಮೇಶ್ವರ್ ಅವರೊಂದಿಗೆ ಮಾಜಿ ಶಾಸಕ ಕೆ.ರಘುಪತಿ ಭಟ್, ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ಮಹೇಶ್ ಠಾಕೂರ್ ಜೊತೆಗಿದ್ದರು.

‘ನವರಸ ದೀಕ್ಷಾವೈಭವಂ’ ಎಂಬ ಹೆಸರಿನಡಿ ಮಣಿಪಾಲದ ರತ್ನ ಸಂಜೀವ ಕಲಾಮಂಡಲ ಈ ವಿಶ್ವದಾಖಲೆಯ ನೃತ್ಯ ಪ್ರದರ್ಶನವನ್ನು ಆಯೋಜಿಸಿದೆ. ಕಾರ್ಯಕ್ರಮವನ್ನು ಕೆ.ರಘುಪತಿ ಭಟ್ ಅವರು ಉದ್ಘಾಟಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಸಾಧನೆಗೆ ಧೈರ್ಯ ಮತ್ತು ಸಂಕಲ್ಪ ಬೇಕು. ವಿದುಷಿ ದೀಕ್ಷಾ ಅವರ ಸಂಕಲ್ಪಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದರು.

ದೀಕ್ಷಾ ಅವರ ಕಲಾಗುರುಗಳಾದ ವಿದ್ವಾನ್ ಶ್ರೀಧರ್ ರಾವ್ ಶಿಷ್ಯೆಯ ಪ್ರಯತ್ನಕ್ಕೆ ಶುಭ ಕೋರಿದರು. ಈ ಸಂದರ್ಭ ದಲ್ಲಿ ಗೀತಾಂಜಲಿ ಸುವರ್ಣ, ಬಿ.ಎನ್.ಶಂಕರ ಪೂಜಾರಿ, ವಿ.ಉಷಾ ಹೆಬ್ಬಾರ್, ವಿ.ವೀಣಾ ಸಾಮಗ, ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ. ಉಪಸ್ಥಿತರಿದ್ದರು.

ಭರತನಾಟ್ಯದ ಮೂಲಕ ಸಾಧನೆ ಮಾಡಬೇಕೆನ್ನುವುದು ನನ್ನ ಗುರಿಯಾಗಿದ್ದು, ಗುರುಗಳು, ಹೆತ್ತವರು, ಸಹಪಾಠಿ ಗಳು ಹಾಗೂ ಹಿರಿಯರ ಸಹಕಾರ, ಬೆಂಬಲ ಮತ್ತು ಆಶೀರ್ವಾದಗಳಿಂದ ಇದರಲ್ಲಿ ಯಶಸ್ವಿಯಾಗುವ ವಿಶ್ವಾಸವಿದೆ ಎಂದು ದೀಕ್ಷಾ ವಿ.ನುಡಿದರು.

ರೆಮೋನಾ ದಾಖಲೆ ಮುರಿಯಲು ಪ್ರಯತ್ನ: ಕಳೆದ ತಿಂಗಳು ಮಂಗಳೂರಿನಲ್ಲಿ ರೆಮೋನಾ ಎವೆಟ್ ಪಿರೇರಾ ಅವರು 170 ಗಂಟೆಗಳ ಕಾಲ ನಿರಂತರ ಭರತನಾಟ್ಯ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ನಲ್ಲಿ ಬರೆದ ದಾಖಲನೆಯನ್ನು ಮುರಿಯಲು ವಿದುಷಿ ದೀಕ್ಷಾ ಪ್ರಯತ್ನಿಸುತಿದ್ದಾರೆ.

ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಮುಂಡ್ಕಿನಜೆಡ್ಡಿನ ವಿದುಷಿ ದೀಕ್ಷಾ ವಿ. ಭರತನಾಟ್ಯದಲ್ಲಿ ವಿಶೇಷ ಪ್ರೀತಿ ಹಾಗೂ ಆಸಕ್ತಿಯನ್ನು ಹೊಂದಿದ್ದಾರೆ. ಕಲೆಯಲ್ಲಿ ವಿಶೇಷ ಸಾಧನೆ ಮಾಡಬೇಕೆಂಬ ಕನಸನ್ನು ಹೊಂದಿ ದ್ದಾರೆ. ಬಹುಮುಖ ಪ್ರತಿಭೆಯ ವಿದುಷಿ ದೀಕ್ಷಾ ಭರತನಾಟ್ಯವನ್ನಲ್ಲದೇ, ಯಕ್ಷಗಾನ, ವೀಣೆ, ಚಂಡೆ, ಮದ್ದಳೆ, ಚಿತ್ರಕಲೆ ಸಹಿತ ಅನೇಕ ಪ್ರಕಾರಗಳಲ್ಲಿ ತಮ್ಮ ಆಸಕ್ತಿ ಹಾಗೂ ಪ್ರತಿಭೆಯನ್ನು ಈಗಾಗಲೇ ಮೆರೆದಿದ್ದಾರೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X