ರೈತರೆಡೆಗೆ ನಮ್ಮ ನಡಿಗೆ ಮಾಲಿಕೆ: ಶಾರದ ಶೆಟ್ಟಿಗೆ ರೈತ ಪುರಸ್ಕಾರ

ಕೋಟ, ಆ.31: ಪಂಚವರ್ಣ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ರೈತರಿಗೆ ಪೋತ್ಸಾಹಕರ ವಾತಾವರಣ ಸೃಷ್ಠಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಹೇಳಿದ್ದಾರೆ.
ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ರೈತ ಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರ ಸಹಯೋಗ ದೊಂದಿಗೆ ರವಿವಾರ ನಡೆದ 48ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮವನ್ನು ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಉದ್ಘಾಟಿಸಿದರು. ಕೃಷಿ ಮತ್ತು ಹೈನುಗಾರಿಕಾ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯ ಮಹಿಳಾ ಕೃಷಿಕರಾದ ಶಾರದ ಶೆಟ್ಟಿಯವರನ್ನು ಕೃಷಿ ಪರಿಕರಗಳನ್ನು ನೀಡಿ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಯಕ್ಷಗುರು ಸೀತಾರಾಮ ಶೆಟ್ಟಿ ಕೊಯ್ಕೂರು, ಕೊಯ್ಕೂರು ಬೊಬ್ಬರ್ಯರೇಶ್ವರ ದೇಗುಲದ ಅಧ್ಯಕ್ಷ ಸದಾಶಿವ ಶೆಟ್ಟಿ, ಕೋಟ ಸಿಎ ಬ್ಯಾಂಕ್ ನಿರ್ದೇಶಕ ಮಹೇಶ್ ಶೆಟ್ಟಿ,ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.
ಸ್ಥಳೀಯರಾದ ವಿಜಯ ಕುಮಾರ್ ಶೆಟ್ಟಿ ಸ್ವಾಗತಿಸಿ ಅಭಿನಂದನಾ ನುಡಿಗಳನ್ನಾಡಿದರು. ಪಂಚವರ್ಣದ ಸದಸ್ಯ ಕೇಶವ ಆಚಾರ್ ಸನ್ಮಾನ ಪತ್ರ ವಾಚಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.







