Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಬಿಗಿ...

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್| ನೂಕುನುಗ್ಗಲು, ಕಾಲ್ತುತ ಆಗದಂತೆ ಕಟ್ಟೆಚ್ಚರ: ಎಸ್ಪಿ ಹರಿರಾಂ ಶಂಕರ್

ವಾರ್ತಾಭಾರತಿವಾರ್ತಾಭಾರತಿ13 Sept 2025 8:09 PM IST
share
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಬಿಗಿ ಪೊಲೀಸ್ ಬಂದೋಬಸ್ತ್| ನೂಕುನುಗ್ಗಲು, ಕಾಲ್ತುತ ಆಗದಂತೆ ಕಟ್ಟೆಚ್ಚರ: ಎಸ್ಪಿ ಹರಿರಾಂ ಶಂಕರ್

ಉಡುಪಿ, ಸೆ.13: ಉಡುಪಿ ಶ್ರೀಕೃಷ್ಣ ಮಠದಲ್ಲಿ ರವಿವಾರ ಹಾಗೂ ಸೋಮವಾರ ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಪ್ರಯುಕ್ತ ಉಡುಪಿ ನಗರ, ಕೃಷ್ಣ ಮಠ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗು ತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದಲ್ಲಿರುವ ಮಥುರಾ ಛತ್ರ ಹೊಟೇಲ್ ಸಭಾಂಗಣದಲ್ಲಿ ಶನಿವಾರ ನಡೆದ ಬಂದೋಬಸ್ತ್ ಸಂಬಂಧ ಪೊಲೀಸರ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು.

ಸೆ.15ರ ವಿಟ್ಲಪಿಂಡಿ ದಿನ ಎಂಟು ಕಡೆ ಮೊಸರು ಕುಡಿಕೆ ನಡೆಯುವಾಗ ಯಾವುದೇ ನೂಕುನುಗ್ಗಲು ಆಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮ್ಮ ಸಿಬಂದಿಗಳು ಲೌಡ್ ಸ್ಪೀಕರ್ ಮೂಲಕ ಅನ್ಸೌನ್ ಮಾಡಿ ಜನಸಂದಣಿ ನಿಯಂತ್ರಿಸುವ ಕಾರ್ಯ ಮಾಡಲಿದ್ದಾರೆ. ಆ ದಿನ ರಥಬೀದಿಯಲ್ಲಿ ಇಕ್ಕಟ್ಟು ಆಗದಂತೆ ನಗರಸಭೆಯ ಮೂಲಕ ಅಲ್ಲಿನ ಸುತ್ತಮುತ್ತಲಿನ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಎಂದರು.

ಕಳೆದ ವರ್ಷದ ರೀತಿಯಲ್ಲಿ ಹಾಗೂ ಇಲಾಖೆಯ ಜನಸಂದಣಿ ನಿಯಂತ್ರಣ ಸುತ್ತುಲೋಯಂತೆ ಸೂಕ್ತ ಬಂದೋಬಸ್ತ್ ಮಾಡಲಾಗುವುದು. ಮಹಿಳೆಯರ ಸುರಕ್ಷೆ, ಅಪರಾಧ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿಟ್ಲ ಪಿಂಡಿ ದಿನ ಜನ ಬಹಳ ಸಂಖ್ಯೆಯಲ್ಲಿ ಸೇರುವುದರಿಂದ ಮಳೆ ಬಂದರೇ ನೂಕುನುಗ್ಗಲು ಆಗದಂತೆ ರಥಬೀದಿಯ ಸುತ್ತ ಇರುವ ಮನೆ ಹಾಗೂ ಕಟ್ಟಡಗಳ ಗೇಟುಗಳನ್ನು ತೆರೆದಿಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಎಲ್ಲ ಸಿಬ್ಬಂದಿಗಳಿಗೆ ಎಲ್ಲ ರೀತಿಯ ನಿರ್ದೇಶನಗಳನ್ನು ನೀಡ ಲಾಗಿದೆ. ಎರಡು ದಿನ ಯಾವುದೇ ರೀತಿಯಲ್ಲೂ ಲೋಪ ಬಾರದಂತೆ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ಹೇಳಿದರು.

ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ನಾಯ್ಕ್, ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಡಿಗೇರ, ಮಣಿಪಾಲ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಹಾಜರಿದ್ದರು.

400ಕ್ಕೂ ಅಧಿಕ ಪೊಲೀಸರ ನಿಯೋಜನೆ

ಒಬ್ಬರು ಡಿವೈಎಸ್ಪಿ, ಐವರು ಪೊಲೀಸರು ನಿರೀಕ್ಷಕರು, 12 ಎಸ್ಸೈಗಳು, 34 ಎಎಸ್ಸೈಗಳು, 191 ಹೆಡ್‌ಕಾನ್ಟೇಬಲ್/ಸಿಬ್ಬಂದಿ, 43 ಮಹಿಳಾ ಸಿಬ್ಬಂದಿ, 47 ಹೋಮ್ ಗಾರ್ಡ್ ಸೇರಿದಂತೆ ಒಟ್ಟು 333 ಸಿಬ್ಬಂದಿಗಳನ್ನು ಬಂದೋಬಸ್ತಿ ಗಾಗಿ ನಿಯೋಜಿಸಲಾಗುತ್ತಿದೆ. ಅದೇ ರೀತಿ 16 ಜಿಲ್ಲಾ ಸಶಸ್ತ್ರ ಮೀಸಲು ತುಕಡಿಗಳನ್ನು ನಿಯೋಜಿಸಲಾಗುತ್ತದೆ ಎಂದು ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದರು.

ಅದೇ ರೀತಿ ಒಂದು ಅಗ್ನಿಶಾಮಕ ದಳ, ಏಳು ವಿಡಿಯೋಗ್ರಫಿ, ಮಫ್ತಿ ಕ್ರೈಮ್ ಸಿಬ್ಬಂದಿ, ದ.ಕ. ಜಿಲ್ಲೆಯ ಎರಡು, ಚಿಕ್ಕಮಗಳೂರು ಜಿಲ್ಲೆಯ 2, ಉತ್ತರ ಕನ್ನಡ ಜಿಲ್ಲೆಯ ಎರಡು ಹೆಚ್ಚುವರಿ ಕ್ಱೈಮ್ ಸ್ಟಾಫ್‌ಗಳನ್ನು ನಿಯೋಜಿಸಲಾಗುತ್ತಿದೆ.

ಬೀಡಿನಗುಡ್ಡೆ ಮೈದಾನ, ಎಂಜಿಎಂ ಮೈದಾನ, ಡಿಮಾರ್ಟ್ ಪಾರ್ಕಿಂಗ್ ಸ್ಥಳ, ಅಮ್ಮಣ್ಣಿ ರಾಮಣ್ಣ ಶೆಟ್ಟಿ ಹಾಲ್, ರಾಜಾಂಗಣ ಪಾರ್ಕಿಂಗ್ ಸ್ಥಳಗಳನ್ನು ಗುರುತಿಸಲಾಗಿದೆ. ಎರಡು ಶ್ವಾನ ದಳ, ಮೂರು ವಿದ್ವಂಸ ಕೃತ್ಯ ತಡೆ ತಂಡ, ಒಂದು ಕ್ವಿಕ್ ರೆಸ್ಪಾನ್ಸ್ ಟೀಮ್, ಎರಡು ಡ್ರೋನ್ ಕ್ಯಾಮೆರಾಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

‘ಅಷ್ಟಮಿಯ ಎರಡು ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ಯೋಜನೆ ರೂಪಿಸಿ ಬಂದೋಬಸ್ತ್ ಮಾಡಲಾಗಿದೆ. ಅಷ್ಟಮಿಯ ಪ್ರಯುಕ್ತ ಯಾವುದೇ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಹಾಗೂ ಪ್ರಚೋದನ ಕಾರಿ ವೇಷಗಳನ್ನು ಯಾರು ಹಾಕಬಾರದು’

-ಹರಿರಾಮ್ ಶಂಕರ್, ಎಸ್ಪಿ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X