Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸಾಂಪ್ರದಾಯಿಕ ‘ಶ್ರೀಕೃಷ್ಣ...

ಉಡುಪಿ: ಸಾಂಪ್ರದಾಯಿಕ ‘ಶ್ರೀಕೃಷ್ಣ ಲೀಲೋತ್ಸವ-ವಿಟ್ಲಪಿಂಡಿ’ ಸಂಪನ್ನ

ವಾರ್ತಾಭಾರತಿವಾರ್ತಾಭಾರತಿ15 Sept 2025 7:38 PM IST
share
ಉಡುಪಿ: ಸಾಂಪ್ರದಾಯಿಕ ‘ಶ್ರೀಕೃಷ್ಣ ಲೀಲೋತ್ಸವ-ವಿಟ್ಲಪಿಂಡಿ’ ಸಂಪನ್ನ

ಉಡುಪಿ, ಸೆ.15: ಸ್ವರ್ಣ ರಥದಲ್ಲಿ ಬಾಲಕೃಷ್ಣ(ಮಣ್ಣಿನ) ಮೂರ್ತಿಯ ಮೆರವಣಿಗೆ, ರಥಬೀದಿಯ ಸುತ್ತಲೂ ಅಲ್ಲಲ್ಲಿ ನಿಲ್ಲಿಸಿದ ಗುರ್ಜಿಗಳಲ್ಲಿ ಕಟ್ಟಿದ ಮೊಸರು ಕುಡಿಕೆಗಳನ್ನು ಒಡೆಯುತ್ತಾ ಸಾಗುವ ಸಾಂಪ್ರದಾಯಿಕ ವೇಷದ ಗೊಲ್ಲರು ಹೀಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣನ ಜನ್ಮ ಹಾಗೂ ಬಾಲಲೀಲೆಗಳನ್ನು ನೆನಪಿಸುವ ಶ್ರೀಕೃಷ್ಣಲೀಲೋತ್ಸವ, ವಿಟ್ಲಪಿಂಡಿ, ಮೊಸರುಕುಡಿಕೆ ಜನಸಾಗರದ ಪಾಲ್ಗೊಳ್ಳುವಿಕೆ ನಡುವೆ ಇಂದು ಸಂಜೆ ವೈಭವ ದಿಂದ ಸಂಪನ್ನಗೊಂಡಿತು.

ಅಪರಾಹ್ಣ 3 ಗಂಟೆಗೆ ಪ್ರಾರಂಭಗೊಂಡ ವಿಟ್ಲಪಿಂಡಿ ಉತ್ಸವ, ಶ್ರೀಕೃಷ್ಣ ಲೀಲೋತ್ಸವದ ವೈಭವದ ಶೋಭಾಯಾತ್ರೆ ಯಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು, ಕಿರಿಯ ಯತಿಗಳಾದ ಶ್ರೀಸುಶ್ರೀಂದ್ರ ತೀರ್ಥರು ಹಾಗೂ ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥರು ಪಾಲ್ಗೊಂಡರು.

ಈ ಉತ್ಸವಕ್ಕೆಂದು ವಿಶೇಷವಾಗಿ ತಯಾರಿಸಲಾದ ಮೃಣ್ಮಯ(ಮಣ್ಣಿನಲ್ಲಿ ತಯಾರಿಸಿದ ಬಂಗಾರದ ಬಣ್ಣದ ಶ್ರೀಕೃಷ್ಣನ ಮೂರ್ತಿ) ಮೂರ್ತಿಯನ್ನು ಚಿನ್ನದ ರಥದಲ್ಲಿರಿಸಿ ರಥಬೀದಿಯ ಸುತ್ತ ಮೆರವಣಿಗೆ ನಡೆಸಲಾಯಿತು. ವಜ್ರಖಚಿತ ಇನ್ನೊಂದು ರಥದಲ್ಲಿ ಅನಂತೇಶ್ವರ ಹಾಗೂ ಚಂದ್ರಮೌಳೀಶ್ವರ ಉತ್ಸವ ಮೂರ್ತಿಗಳನ್ನಿರಿಸಿ ಮೆರವಣಿಗೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೃಷ್ಣನ ಬಾಲಲೀಲೆಗಳನ್ನು ನೆನಪಿಸುವ ಸಲುವಾಗಿ ಮಣ್ಣಿನ ಮಡಕೆಯಲ್ಲಿ ಮೊಸರು, ಹಾಲು, ಓಕುಳಿಗಳನ್ನು ತುಂಬಿ ರಥಬೀದಿ ಸುತ್ತಲೂ ವಿಶೇಷವಾಗಿ ನಿರ್ಮಿಸಿದ 13 ಗುರ್ಜಿಗಳಿಗೆ ಅವುಗಳನ್ನು ಕಟ್ಟಿ ಯಾದವ ವೇಷಧಾರಿಗಳಾದ ಉಡುಪಿಯ ಗೊಲ್ಲರು ಉದ್ದನೆಯ ಕೋಲುಗಳಿಂದ ಮಡಕೆಗಳನ್ನು ಒಡೆಯುವ ಆಟವನ್ನು ಆಡಲಾ ಯಿತು. ಇದು ಶ್ರೀಕೃಷ್ಣ ಲೀಲೋತ್ಸವದ ಪ್ರಮುಖ ಆಕರ್ಷಣೆಯಾಗಿದೆ.

ರಥಬೀದಿಯ ಮಧ್ಯಭಾಗದಲ್ಲಿ ಹಾಕಲಾದ ವೇದಿಕೆಯಲ್ಲಿ ಹುಲಿವೇಷ ಪ್ರದರ್ಶನವನ್ನು ಪರ್ಯಾಯ ಸ್ವಾಮೀಜಿಗಳು ವೀಕ್ಷಿಸಿದರು. ಬಳಿಕ ಸ್ವಾಮೀಜಿಗಳು ಕಳೆದ ರಾತ್ರಿ ನೈವೇಧ್ಯರೂಪದಲ್ಲಿ ಅರ್ಪಿಸಿದ ಉಂಡೆ, ಚಕ್ಕುಲಿ ಹಾಗೂ ಹಣ್ಣು ಹಂಪಲುಗಳನ್ನು ನೆರೆದ ಜನರತ್ತ ಎಸೆದರು. ಪ್ರಸಾದವನ್ನು ಸ್ವೀಕರಿಸಲು ಭಕ್ತರು ಮುಗಿಬಿದ್ದರು.

ಮೆರವಣಿಗೆಯ ಕೊನೆಯಲ್ಲಿ ಚಿನ್ನದ ರಥದಲ್ಲಿರಿಸಿದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಮಧ್ವ ಸರೋವರದಲ್ಲಿ ವಿಸರ್ಜಿಸುವುದರೊಂದಿಗೆ ಈ ಬಾರಿಯ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ 48 ದಿನಗಳ ವಿಧಿಗಳು ಸಂಪನ್ನ ಗೊಂಡವು. ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ಶೃದ್ಧೆ, ಭಕ್ತಿಗಳಿಂದ ವೈವಿಧ್ಯಮಯ ಧಾರ್ಮಿಕ, ಸಾಸ್ಂಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಖುಷಿ ಪಟ್ಟರು.

ಮೆರವಣಿಗೆಯಲ್ಲಿ ಹುಲಿವೇಷ, ಚಂಡೆ, ತಟ್ಟಿರಾಯ, ವಾದ್ಯ, ಕೃಷ್ಣ ವೇಷ, ರಕ್ಕಸ ವೇಷ ಸೇರಿದಂತೆ ವಿವಿಧ ವೇಷ ಗಳು ಕಂಡುಬಂದವು. ಶೀರೂರು ಮಠದ ಬಳಿ ದಿ.ಶ್ರೀಲಕ್ಷ್ಮೀವರತೀರ್ಥರು ಪ್ರಾರಂಭಿಸಿದ ಹುಲಿವೇಷ ಹಾಗೂ ಜಾನಪದ ವೇಷಗಳ ಪ್ರದರ್ಶನವನ್ನು ಈ ಬಾರಿಯೂ ಶೀರೂರು ಮಠದ ವತಿಯಿಂದ ರಾಘವೇಂದ್ರ ಮಠದ ಎದುರು ನಿರ್ಮಿಸಲಾದ ವೇದಿಕೆಯಲ್ಲಿ ನಡೆಸಲಾಯಿತು.

ನಗರದ ಹಲವು ಕಡೆಗಳಲ್ಲಿ ಇಂದು ಹುಲಿವೇಷ ಹಾಗೂ ಇತರ ವೇಷಗಳ ಪ್ರದರ್ಶನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ರಾಜಾಂಗಣದಲ್ಲಿ ಪರ್ಯಾಯ ಮಠದ ವತಿಯಿಂದ ಹುಲಿವೇಷ, ಜಾನಪದ ವೇಷಗಳ ಕುಣಿತ ಸ್ಪರ್ಧೆಗಳು ನಡೆದವು. ಈ ಬಾರಿ ವೇಷ ಧರಿಸಿದ ಹೆಚ್ಚಿನ ಹುಲಿವೇಷ ತಂಡಗಳು ಇದರಲ್ಲಿ ಭಾಗವಹಿಸಿದವು.

ಆಲಾರೆ ಗೋವಿಂದ: ಶ್ರೀಸಾಯಿಲಕ್ಷ್ಮೀ ಉಡುಪಿ ಸಂಸ್ಥೆಯ ಮೂಲಕ ಮಧುಸೂದನ ಪೂಜಾರಿ ಕೆಮ್ಮಣ್ಣು ಅವರು ಕಳೆದ 13 ವರ್ಷಗಳಂತೆ ಈ ಬಾರಿಯೂ ಕರೆಸಿದ ಮುಂಬಯಿಯ ಪ್ರಸಿದ್ಧ ಅಲಾರೆ ಗೋವಿಂದ ತಂಡ ಸಾಂತಕ್ರೂಸ್ ಪೂರ್ವದ ಬಾಲಮಿತ್ರ ವ್ಯಾಯಾಮ ಶಾಲೆಯ 200 ಮಂದಿ ಅಲಾರೆ ಗೋವಿಂದ ತಂಡದ ಸದಸ್ಯರು ಇಂದು ನಗರದ ವಿವಿದೆಡೆಗಳಲ್ಲಿ 10 ಪ್ರದರ್ಶನವನ್ನು ನೀಡಿದರು.

ಇಂದು ಬೆಳಗಿನಿಂದಲೇ ಮಠದ ಅನ್ನಬ್ರಹ್ಮ ಹಾಗೂ ಭೋಜನಶಾಲೆಯಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಮಂದಿ ಪ್ರಸಾದ ಸ್ವೀಕರಿಸಿದರು.

ಅರ್ಘ್ಯ ಪ್ರಧಾನ: ಶ್ರೀಕೃಷ್ಣ ಜಯಂತಿಯ ಪ್ರಯುಕ್ತ, ಕಳೆದ ನಡುರಾತ್ರಿ 12:11ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರು ಕೃಷ್ಣದೇವರಿಗೆ ವಿಶೇಷ ಪೂಜೆ ನೆರವೇರಿಸಿ, ತುಳಸಿ ಸನ್ನಿಧಿಯಲ್ಲಿ ಅರ್ಘ್ಯಪ್ರಧಾನ ಮಾಡಿದರು. ಬಳಿಕ ಪುತ್ತಿಗೆ ಕಿರಿಯ ಯತಿಗಳು ಹಾಗೂ ಇತರರು ಅರ್ಘ್ಯ ಪ್ರದಾನ ಮಾಡಿದರು.

ಬಿಗಿ ಬಂದೋಬಸ್ತ್: ವಿಟ್ಲಪಿಂಡಿಯಲ್ಲಿ ನಾಡಿನಾದ್ಯಂತದಿಂದ ಬಂದ ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾದ ಹಿನ್ನೆಲೆಯಲ್ಲಿ ರಥಬೀದಿ, ರಾಜಾಂಗಣ ಪಾರ್ಕಿಂಗ್ ಪ್ರದೇಶ ಹಾಗೂ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ವಾಹನಗಳ ಭರಾಟೆ ಹಾಗೂ ಜನಜಂಗುಳಿಯಿಂದಾಗಿ ಇಂದು ಬೆಳಗಿನಿಂದಲೇ ನಗರದ ಪ್ರಮುಖ ರಸ್ತೆಗಳಲ್ಲಿ, ಶ್ರೀಕೃಷ್ಣ ಮಠದ ಆಸುಪಾಸಿನ ರಸ್ತೆಗಳಲ್ಲಿ ಸುಧೀರ್ಘ ಟ್ರಾಫಿಕ್ ಜಾಮ್ ಕಂಡುಬಂದಿದ್ದು, ಪಾದಚಾರಿಗಳು ಪರದಾಡುವಂತಾಯಿತು.




























share
ವಾರ್ತಾಭಾರತಿ
ವಾರ್ತಾಭಾರತಿ
Next Story
X