Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. "ಸಮಸಮಾಜ ನಿರ್ಮಾಣಕ್ಕೆ ಆಡುಭಾಷೆಯನ್ನೇ...

"ಸಮಸಮಾಜ ನಿರ್ಮಾಣಕ್ಕೆ ಆಡುಭಾಷೆಯನ್ನೇ ಬಳಸಿದ ಲಿಂಗಾಯತ ಧರ್ಮ"

ವಾರ್ತಾಭಾರತಿವಾರ್ತಾಭಾರತಿ18 Sept 2025 8:31 PM IST
share
ಸಮಸಮಾಜ ನಿರ್ಮಾಣಕ್ಕೆ ಆಡುಭಾಷೆಯನ್ನೇ ಬಳಸಿದ ಲಿಂಗಾಯತ ಧರ್ಮ
ಸಾರ್ವಜನಿಕ ಸಮಾವೇಶದಲ್ಲಿ ಶಿವಾನಂದ ಮಹಾಸ್ವಾಮಿ

ಉಡುಪಿ, ಸೆ.18: ಸಮಸಮಾಜ ನಿರ್ಮಾಣಕ್ಕಾಗಿ ಆಡುಭಾಷೆಯನ್ನೇ (ಕನ್ನಡ) ದೇವಭಾಷೆಯನ್ನಾಗಿ ಬಳಸಿಕೊ ಳ್ಳುವ ಮೂಲಕ ನುಡಿದಂತೆ ನಡೆದ ಧರ್ಮ ಲಿಂಗಾಯತ ಧರ್ಮವಾಗಿದೆ ಎಂದು ಹುಲಸೂರು ಶ್ರೀಮಠದ ಶಿವಾನಂದ ಮಹಾಸ್ವಾಮಿ ತಿಳಿಸಿದ್ದಾರೆ. ಅಂದು ಸಮಾಜದಲ್ಲಿದ್ದ ಶೋಷಣೆ, ಅಸಮಾನತೆ ವಿರುದ್ಧ ವಿಶ್ವಗುರು ಬಸವಣ್ಣ ಸಮಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು ಎಂದವರು ಹೇಳಿದರು.

ಶುದ್ಧ ಬಸವತತ್ವವನ್ನು ಪ್ರಚಾರ, ಪ್ರಸಾರ ಹಾಗೂ ಅನುಷ್ಠಾನ ಮಾಡುವ ಆಶಯದೊಂದಿಗೆ ಲಿಂಗಾಯತ ಮಠಾಪತಿಗಳ ಒಕ್ಕೂಟ ಸೆ.1ರಿಂದ ಅ.1ರವರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಬಸವ ಸಂಸ್ಕೃತಿ ಅಭಿಯಾನ ಗುರುವಾರ ಉಡುಪಿಗೆ ಆಗಮಿಸಿ ಸಂಜೆ ಪುರಭವನದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಅವರು ಮಾತನಾಡುತಿದ್ದರು.

ಹಿರಿಯ ಪತ್ರಕರ್ತ, ಪ್ರಗತಿಪರ ಕವಿ, ವಿಮರ್ಶಕ ರಂಜಾನ್ ದರ್ಗಾ ಮಾತನಾಡಿ, ಬಸವಣ್ಣನೆಂದರೆ ಕಲ್ಯಾಣದ ಬೆಳಕು. ಅವರ ಆದರ್ಶಗಳು ಇಂದಿಗೂ ಪ್ರಸ್ತುತ. ಜಗತ್ತಿಗೆ ಜ್ಞಾನ ನೀಡುವ ಶಕ್ತಿ ವಚನ ಸಾಹಿತ್ಯಕ್ಕಿತ್ತು. ಇದು ಸ್ವರ್ಗ, ನರಕಗಳಿಲ್ಲದ ಧರ್ಮ ಎಂದರು.

ಲಿಂಗಾಯತ ಧರ್ಮವು ಸ್ವರ್ಗ, ನರಕವನ್ನು ನಂಬದೇ ಜೀವ ಕಾರುಣ್ಯದ ಮೇಲೆ ನಿಂತಿದೆ. ಇವುಗಳ ಮೂಲಕವೇ ವಚನಗಳನ್ನು ಅರ್ಥೈಸಿಕೊಳ್ಳಬೇಕು. ಬಸವಣ್ಣನೇ ಧರ್ಮಗುರು, ವಚನ ಸಾಹಿತ್ಯವೇ ಧರ್ಮಗ್ರಂಥ, ಇಷ್ಟಲಿಂಗವೇ ಪೂಜಾ ಸಾಧನ. ಈ ಮಹತ್ವವನ್ನು ತಿಳಿದುಕೊಂಡರೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ ಎಂದು ದರ್ಗಾ ಹೇಳಿದರು.

ಹಂದಿಗುಂದ ಮಠದ ಶ್ರೀಶಿವನಾಂದ ಮಹಾಸ್ವಾಮಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಮಹಾಸ್ವಾಮಿ, ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು, ಧಾರವಾಡ ನವಲಗುಂದ ಗವಿಮಠದ ಶ್ರೀಬಸವಲಿಂಗ ಮಹಾಸ್ವಾಮೀಜಿ, ಕಲಬುರ್ಗಿ ಷಣ್ಮುಖ ಶಿವಯೋಗಿಗಳ ಮಠದ ಶ್ರೀವೀರಸಿದ್ಧ ದೇವರು, ರಾಯಚೂರು ಶ್ರೀವೀರಭದ್ರ ಶಾಸ್ತಿಗಳು, ಬೆಳಗಾವಿ ಶ್ರೀಶಿವಬಸವ ದೇವರು, ಬಸವ ಕಲ್ಯಾಣದ ಶ್ರೀಬಸವರಾಜ ದೇವರು, ಮಮ್ಮಿಗಟ್ಟಿಯ ಬಸವನಂದ ಸ್ವಾಮೀಜಿ, ಬೆಳಗಾವಿ ಸೆಗುಣಿಸೆಯ ಶ್ರೀ ಡಾ. ಮಹಾಂತ ಪ್ರಭು ಸ್ವಾಮೀಜಿ ಭಾಗವಹಿಸಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಉಡುಪಿ ಜಿಲ್ಲೆ ಗೌರವಾಧ್ಯಕ್ಷ ಡಾ.ಜಿ.ಎಸ್. ಚಂದ್ರಶೇಖರ್, ಶರಣ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಅಧ್ಯಕ್ಷ ನಿರಂಜನ ಚೋಳಯ್ಯ ಉಪಸ್ಥಿತರಿದ್ದರು.

ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮುಖಂಡ ಪ್ರಸಾದ್ ರಾಜ್ ಕಾಂಚನ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಪೊಲೀಸ್ ಅದೀಕ್ಷಕ ಹರಿರಾಂ ಶಂಕರ್, ಬಸವಣ್ಣ ವೇಷಧಾರಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿ ನೀಲಕಂಠಯ್ಯ ಕರಕಳ್ಳಿಮಠ ಉಪಸ್ಥಿತರಿದ್ದರು.

ಸಾರ್ವಜನಿಕ ಸಮಾವೇಶಕ್ಕೂ ಮುನ್ನ ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಗಾಂಧಿ ಸ್ಮಾರಕದಿಂದ ಅಜ್ಜರಕಾಡಿನ ಪುರಭವನದವರೆಗೆ ಸಾಮರಸ್ಯ ನಡಿಗೆ ನಡೆಯಿತು. ನೂರಾರು ಮಂದಿ ಇದರಲ್ಲಿ ಭಾಗವಹಿಸಿದ್ದರು.

ಸಭಾ ಕಾರ್ಯಕ್ರಮದ ಬಳಿ ಸಾಣೇಹಳ್ಳಿ ಶ್ರೀತರಳಬಾಳು ಜಗದ್ಗುರು ಶಾಖಾ ಮಠದ ಶ್ರೀಪಂಡಿತಾರಾಧ್ಯ ಶಿವಾ ಚಾರ್ಯ ಸ್ವಾಮೀಜಿಗಳ ರಚನೆಯ ‘ಜಂಗಮದೆಡೆಗೆ’ ನಾಟಕವು ಶಿವಸಂಚಾರ ಸಾಣೇಹಳ್ಳಿ ತಂಡದಿಂದ ಜಗದೀಶ್ ಆರ್. ನಿರ್ದೇಶನದಲ್ಲಿ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X