Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಾತಿ ಗಣತಿ ವೇಳೆ ‘ಬಿಲ್ಲವ’ ಎಂದೇ...

ಜಾತಿ ಗಣತಿ ವೇಳೆ ‘ಬಿಲ್ಲವ’ ಎಂದೇ ನಮೂದಿಸಿ: ಬಿಲ್ಲವ ಮುಖಂಡರ ಮನವಿ

ವಾರ್ತಾಭಾರತಿವಾರ್ತಾಭಾರತಿ20 Sept 2025 9:56 PM IST
share
ಜಾತಿ ಗಣತಿ ವೇಳೆ ‘ಬಿಲ್ಲವ’ ಎಂದೇ ನಮೂದಿಸಿ: ಬಿಲ್ಲವ ಮುಖಂಡರ ಮನವಿ

ಉಡುಪಿ, ಸೆ.20: ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22ರಿಂದ ನಡೆಯುವ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವೇಳೆ ಉಡುಪಿ ಜಿಲ್ಲೆಯ ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ(9) ಕಾಲಂನಲ್ಲಿ ಕಡ್ಡಾಯವಾಗಿ ‘ಬಿಲ್ಲವ’ ಎಂದೇ ನಮೂದಿಸಬೇಕು ಎಂದು ಜಿಲ್ಲೆಯ ಬಿಲ್ಲವ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಲ್ಲವ ಮುಖಂಡರು, ಸರಕಾರದ ಎಲ್ಲಾ ಮೀಸಲಾತಿ, ಸೌಲಭ್ಯಗಳು ಜನಸಂಖ್ಯೆಯ ಆಧಾರದಲ್ಲಿ ನಿರ್ಧಾರವಾಗುವುದರಿಂದ, ಬಿಲ್ಲವರೆಲ್ಲರೂ 9ನೇ ಜಾತಿ ಕಾಲಂನಲ್ಲಿ ಬಿಲ್ಲವ ಎಂದೇ ನಮೂದಿಸಬೇಕು. ಯಾರೂ ತಮ್ಮ ‘ಬಳಿ’ಯನ್ನು ನೀಡಬಾರದು ಎಂದರು.

ಹಿಂದಿನ ಜನಗಣತಿ ವೇಳೆ ಬಿಲ್ಲವರು ತಮ್ಮ ‘ಬಳಿ’ಯನ್ನು ಜಾತಿಯಾಗಿ ನೀಡಿದ್ದರಿಂದ 2011ರ ಜನಗಣತಿ ವೇಳೆ ಬಿಲ್ಲವರ ಸಂಖ್ಯೆ ತೀರಾ ಕಡಿಮೆ ಬಂದಿತ್ತು. ನಮ್ಮವರ ಕೆಲವು ಸರ್‌ನೇಮ್‌ಗಳು ಉಳಿದ ಜಾತಿಗಳ ಸರ್‌ನೇಮ್ ಒಂದೇ ಆಗಿದ್ದು, ಆಗ ಗೊಂದಲವಾಗಿತ್ತು. ಹೀಗಾಗಿ ಈ ಗೊಂದಲವನ್ನು ತಪ್ಪಿಸಲು ಕರಾವಳಿಯ ಬಿಲ್ಲವರೆಲ್ಲರೂ ಹೆಸರನ್ನು ಸರಿಯಾಗಿ ನೀಡಿ 9ನೇ ಜಾತಿ ಕಾಲಂನಲ್ಲಿ ‘ಬಿಲ್ಲವ’ ಎಂದೇ ಬರೆಸಬೇಕು. 10ನೇ ಉಪಜಾತಿ ಕಾಲಂನಲ್ಲಿ ಅನ್ವಯಿಸುವುದಿಲ್ಲ ಎಂದು ಬರೆಯಬೇಕು. ಅಲ್ಲದೇ 11ನೇ ಕಾಲಂನ ಜಾತಿಗೆ ಇರುವ ಸಮಾನಾರ್ಥಕ ಹೆಸರು ಎಂದು ಇರುವಲ್ಲಿ ಅನ್ವಯಿಸುವುದಿಲ್ಲ ಎಂದೇ ಬರೆಯಬೇಕು ಎಂದು ವಿವರಿಸಿದರು.

ಕರ್ನಾಟಕದಲ್ಲಿ ಈಗ 26 ಒಳಪಂಗಡಗಳಿರುವ ಬಿಲ್ಲವ ಸಮುದಾಯದ ಜನಸಂಖ್ಯೆ 40ರಿಂದ 50 ಲಕ್ಷವಿದ್ದು, ರಾಜ್ಯದ ನಾಲ್ಕನೇ ಗರಿಷ್ಠ ಜನಸಂಖ್ಯೆ ಹೊಂದಿರುವ ಅಂದಾಜಿದೆ. ಬಿಲ್ಲವ, ಈಡಿಗ, ನಾಮಧಾರಿ, ನಾಯಕ್ ಎಲ್ಲವೂ ಬಿಲ್ಲವ ಜಾತಿಯಡಿ ಬರಲಿದ್ದು, ಕರಾವಳಿಯ ಬಿಲ್ಲವರು ಮಾತ್ರ ಕಡ್ಡಾಯವಾಗಿ ಜಾತಿಯನ್ನು ‘ಬಿಲ್ಲವ’ ಎಂದೇ ನಮೂದಿಸುವಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಮುದಾಯ ನಾಯಕರು ಒಮ್ಮತದಿಂದ ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಾವರ ಬಿಲ್ಲವ ಸಂಘದ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ, ಕಾರ್ಕಳ ಸಂಘದ ಅಧ್ಯಕ್ಷ ಪ್ರಮಲ್‌ಕುಮಾರ್, ಬೈರಂಪಳ್ಳಿಯ ಡಾ.ಸಂತೋಷ್‌ಕುಮಾರ್, ಮುದ್ರಾಡಿಯ ಮಂಜುನಾಥ್ ಪೂಜಾರಿ, ಹೆಬ್ರಿ ತಾಲೂಕಿನ ಅಣ್ಣಪ್ಪ ಪೂಜಾರಿ, ಕಾಪು ತಾಲೂಕಿನ ಅನಿಲ್ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X