Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೂವಿನ ಬೆಳೆಗಾರರಿಗೆ ಸಹಕಾರದ ಜೊತೆ...

ಹೂವಿನ ಬೆಳೆಗಾರರಿಗೆ ಸಹಕಾರದ ಜೊತೆ ಬ್ಯಾಂಕಿಂಗ್ ವ್ಯವಹಾರ: ಫ್ರಾನ್ಸಿಸ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ21 Sept 2025 11:09 AM IST
share
ಹೂವಿನ ಬೆಳೆಗಾರರಿಗೆ ಸಹಕಾರದ ಜೊತೆ ಬ್ಯಾಂಕಿಂಗ್ ವ್ಯವಹಾರ: ಫ್ರಾನ್ಸಿಸ್ ಡಿಸೋಜ
ಕಾರ್ಕಳ: ಹೂವಿನ ಬೆಳೆಗಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ: ರಾಜ್ಯದಲ್ಲಿ ಹೊಸ ಕಲ್ಪನೆಯಾಗಿರುವ ಹೂವಿನ ಬೆಳೆಗಾರರ ಸಹಕಾರ ಸಂಘವು ಹೂವಿನ ಬೆಳೆಗಾರರ ಸಂಕಷ್ಟಗಳನ್ನು ಸರಕಾರದ ಗಮನ ಸೆಳೆದು ಸಿಗುವ ಸೌಲಭ್ಯಗಳನ್ನು ಬೆಳೆಗಾರರಿಗೆ ತಲುಪಿಸುವಲ್ಲಿ ಶ್ರಮಿಸುತ್ತಿದೆ. ಸಹಕಾರ, ಸೇವೆಯ ಮೂಲಕ ಪ್ರಸಿದ್ಧಿ ಪಡೆದು ಉಡುಪಿ ಜಿಲ್ಲಾ ಮಟ್ಟದ ಮಾನ್ಯತೆ ಪಡೆದು ಕಾರ್ಕಳದಲ್ಲಿ ಕೇಂದ್ರ ಕಚೇರಿಯ ಜೊತೆಗೆ ಹಣಕಾಸು ವ್ಯವಹಾರ ನಡೆಸುತ್ತಿದೆ. ಹೆಬ್ರಿಯಲ್ಲೂ ಶಾಖೆಯನ್ನು ಹೊಂದಿದೆ. ಗ್ರಾಹಕರ ಅನುಕೂಲಕ್ಕಾಗಿ ಶಾಖೆಯನ್ನು ಸಂಪೂರ್ಣ ಗಣಕೀಕರಣಗೊಳಿಸಲಾಗಿದೆ, ಮಲ್ಲಿಗೆ ಬೆಳೆಗಾರರ ಅನುಕೂಲಕ್ಕಾಗಿ ಮುಂದೆ ಇನ್ನಷ್ಟು ಹೊಸ ಶಾಖೆಯನ್ನು ತೆರೆಯುವ ಉದ್ದೇಶವನ್ನು ಹೊಂದಿದೆ ಎಂದು ಹೂವಿನ ಬೆಳೆಗಾರರ ಸಹಕಾರಿ ಸಂಘ ಕಾರ್ಕಳ ಇದರ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಹೇಳಿದರು.

ಅವರು ಶುಕ್ರವಾರ ಕಾರ್ಕಳದ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ನಡೆದ ಹೂವಿನ ಬೆಳೆಗಾರರ ಸಹಕಾರಿ ಸಂಘ ಕಾರ್ಕಳ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಹೂವಿನ ಬೆಳೆಗಾರರಿಗೆ ಸಂಘವು ಸಕಾಲದಲ್ಲಿ ಹೂವಿನ ಗಿಡ ನಾಟಿ ಕ್ರಮ, ಆರೈಕೆ, ಕಾಯಿಲೆ, ಗಿಡಗಳ ಮದ್ದು, ವ್ಯಾಪಾರ ವ್ಯವಹಾರದ ಸಮಗ್ರ ಮಾಹಿತಿಯನ್ನು ವಿವಿಧ ಮಾಧ್ಯಮಗಳ ಮೂಲಕ ಕಾಲ ಕಾಲಕ್ಕೆ ನೀಡುತ್ತಿದೆ, ನಮ್ಮ ಸಹಕಾರ ಸಂಘವು ಹೂವಿನ ಬೆಳೆಗಾರರ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಸರಕಾರದಿಂದ ಕಾಲಕಾಲಕ್ಕೆ ಸಿಗುವ ಸವಲತ್ತುಗಳನ್ನು ಬೆಳೆಗಾರರಿಗೆ ದೊರಕಿಸಿ ಕೊಡಲು ಶ್ರಮಿಸುತ್ತಿದೆ. ಸಂಘವು ಎಲ್ಲಾ ವರ್ಗದ ಜನ ಸಾಮಾನ್ಯರಿಗಾಗಿ ಬ್ಯಾಂಕಿಂಗ್ ವ್ಯವಹಾರವನ್ನು ನಡೆಸುತ್ತಿದೆ. ತಾವು ಎಲ್ಲರೂ ಸೇರಿ ಸಂಘವನ್ನು ಬೆಳೆಸಿ ಮುನ್ನಡೆಸಬೇಕು ಎಂದು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ ಮನವಿ ಮಾಡಿದರು.

ಸಂಘವು ಸದಸ್ಯರ ನಡುವೆ ಮಿತವ್ಯಯ, ಪರಸ್ಪರ ಸ್ವಸಹಾಯ ಮತ್ತು ಸಹಕಾರದ ಮನೋಭಾವವನ್ನು ಉತ್ತೇಜಿಸಲು ಹಾಗೂ ನಿಯಮಿತ ಉಳಿತಾಯವನ್ನು ಶಕ್ತಿ ಹೆಸರಿನ ಸ್ವಸಹಾಯ ಸಂಘವನ್ನು ರಚಿಸಿದ್ದು 27 ಸ್ವಸಹಾಯ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದು ಎಲ್ಲಾ ಸಾಲ ಸೌಲಭ್ಯಗಳನ್ನು ನೀಡಲಾಗಿದೆ. ಇನ್ನಷ್ಟು ಸ್ವಸಹಾಯ ಸಂಘಗಳನ್ನು ತೆರೆಯುವುದು, ಹೆಬ್ರಿಯಲ್ಲಿ ಮಲ್ಲಿಗೆ ಮಾರಾಟ ಮಳಿಗೆ ತೆರೆಯುವ ಉದ್ದೇಶ ಹೊಂದಲಾಗಿದೆ. ಸಂಘದಲ್ಲಿ ಇ ಸ್ಟ್ಯಾಪಿಂಗ್, ಪಾನ್ ಕಾರ್ಡ್, ಮಲ್ಲಿಗೆ ಗಿಡ ಸಹಿತ ವಿವಿಧ ಸೌಲಭ್ಯಗಳು ಕೂಡ ದೊರೆಯುತ್ತಿದೆ ಎಂದು ಫ್ರಾನ್ಸಿಸ್ ಡಿಸೋಜ ತಿಳಿಸಿದರು.

ಹಿರಿಯ ಸಹಕಾರಿ ಧುರೀಣೆ ಫ್ಲೋರಾ ಮೆಂಡೋನ್ಸ ಮಾತನಾಡಿ, ಮಲ್ಲಿಗೆ ಬೆಳೆಗಾರರ ಸಹಿತ ಸರ್ವರೂ ಸೇರಿ ನಮ್ಮ ಸಂಸ್ಥೆಯಲ್ಲಿ ವ್ಯವಹಾರ ನಡೆಸಿ ಸಂಸ್ಥೆಯನ್ನು ಬೆಳೆಸಿ ಮುನ್ನಡೆಸುವಂತೆ ಮನವಿ ಮಾಡಿದರು. ಕಾರ್ಕಳ ಹೆಬ್ರಿ ಶಾಖೆಯ ಪಿಗ್ಮಿ ಸಂಗ್ರಾಹಕರನ್ನು ಗೌರವಿಸಲಾಯಿತು.

ಹೂವಿನ ಬೆಳೆಗಾರರ ಸಹಕಾರಿ ಸಂಘದ ನಿರ್ದೇಶಕರಾದ ಪ್ಲಾವಿಯಾ ಅರಾನ್ಹ, ಬಿ. ಶಶಿಕಾಂತ್ ಭಟ್, ವೆಂಕಟರಮಣ ಶರ್ಮಾ, ಸುಕುಮಾರ್ ಮುನಿಯಾಲ್, ಮಂದಾರ ಆಚಾರ್ಯ ಮಾರಾಳಿ, ರಾಘವೇಂದ್ರ ಪೈ, ಅಮರ್ ಮುಂತಾದವರು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಲತಾ ವಾರ್ಷಿಕ ವರದಿ ಮಂಡಿಸಿದರು. ಹೆಬ್ರಿ ಶಾಖೆಯ ರಕ್ಷಿತಾ ಸ್ವಾಗತಿಸಿದರು. ಭಾರತಿ ವಂದಿಸಿದರು. ಪ್ರಕಾಶ್ ಮಾರ್ಟಿಸ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದ್ಧಿ ವರ್ಗದವರು ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X