ಕಾರಂತರು ಸಂವಿಧಾನದ ಅಂಶ ಜೀವನದಲ್ಲಿ ಪ್ರತಿಪಾದಿಸಿದರು: ಡಾ.ಎಕ್ಕಾರು

ಉಡುಪಿ, ಸೆ.29: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗ ದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ-10 ಕಾರ್ಯಕ್ರಮವು ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಶಿವರಾಮ ಕಾರಂತರು ಸುಮಾರು 6 ದಶಕಗಳ ಹಿಂದಿ ನಿಂದಲೂ ಸಂವಿಧಾನದ ಅಂಶಗಳನ್ನು ತಮ್ಮ ಜೀವನದಲ್ಲಿ ಪ್ರತಿಪಾದಿಸಿ ದವರು. ಅವರ ಕೃತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆಯನ್ನು ತಿಳಿಸಿಕೊಡುತ್ತದೆ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೇ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದರು.
ಕಾರಂತರ ಬದುಕು ಬರಹಗಳು ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಎಂಬ ವಿಷಯದ ಕುರಿತು ಸಾಹಿತಿ ವಸಂತಿ ಶೆಟ್ಟಿ ಬ್ರಹ್ಮಾವರ ಉಪನ್ಯಾಸ ನೀಡಿ, ಕಾರಂತರ ನೇರ ನಡೆ-ನುಡಿ ಹಾಗೂ ಅವರು ಬದುಕಿದ ರೀತಿ ಪ್ರತಿ ಯೊಬ್ಬರಿಗೂ ಆದರ್ಶ. ಅವರು ಎಲ್ಲಾ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸಿದವರು. ಇಂದಿನ ಯುವ ಪೀಳಿಗೆ ಅವರ ಮಾರ್ಗವನ್ನು ಪಾಲುಸುವಂತಗಬೇಕು ಎಂದರು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್ ಉದ್ಘಾಟಿಸಿದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು, ಕನ್ನಡ ಸಾಹಿತ್ಯ ಪರಿಷತಿತಿನ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಮೊದಲಾದವರು ಉಪಸ್ಥಿತರಿದ್ದರು.
ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ ದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಭವ್ಯ ವಂದಿಸಿದರು.







