Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಟ್ಟಿಯಂಗಡಿ ಗ್ರಾಮ ಪಂಚಾಯತ್ ನೂತನ ಕಟ್ಟಡ...

ಹಟ್ಟಿಯಂಗಡಿ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Oct 2025 6:21 PM IST
share
ಹಟ್ಟಿಯಂಗಡಿ ಗ್ರಾಮ ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

ಕುಂದಾಪುರ, ಅ.7: ರಾಜಕೀಯವ ಹಿತಾಸಕ್ತಿಗಿಂತ ಊರಿನ ಅಭಿವೃದ್ಧಿ ಮುಖ್ಯ. ಸ್ಥಳೀಯ ನಾಯಕತ್ವ, ಆಡಳಿತ ವ್ಯವಸ್ಥೆ ಚೆನ್ನಾಗಿದ್ದಾಗ ಗ್ರಾಮದ ಅಭಿವೃದ್ಧಿಯಾಗುತ್ತದೆ. ಇದಕ್ಕೆ ಊರಿನವರ ಒಗ್ಗಟ್ಟು ಮುಖ್ಯ. ಪಂಚಾಯತ್ ಮೇಲೆ ಊರಿನವರಿಟ್ಟ ಪ್ರೀತಿಯಿಂದ ಉತ್ತಮ, ಸುಸಜ್ಜಿತವಾದ ಕಟ್ಟಡ ನಿರ್ಮಾಣಗೊಂಡಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದ್ದಾರೆ.

ಸೋಮವಾರ ಹಟ್ಟಿಯಂಗಡಿ ಗ್ರಾಮ ಪಂಚಾಯತಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಹಟ್ಟಿಯಂಗಡಿ ಶ್ರೀಸಿದ್ದಿವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಎಚ್.ಬಾಲಚಂದ್ರ ಭಟ್ ಮಾತನಾಡಿ, ಇಡೀ ಗ್ರಾಮದ ರಾಜ್ಯಾಭಾರ ನಡೆಸಲು ನಮಗೆ ಪಂಚಾಯತ್ ಅವಶ್ಯಕ. ನಮ್ಮ ಗ್ರಾಪಂ ವ್ಯವಸ್ಥೆ ಸರಿಯಿದ್ದಾಗ ಮಾತ್ರ ಬೇರೆ ಎಲ್ಲವೂ ಸರಿ ಇರುತ್ತದೆ. ಉತ್ತಮ ಕಟ್ಟಡ ನಿರ್ಮಾಣಗೊಂಡಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ಸಿಗುವಂತಾಗಲಿ ಎಂದು ಹಾರೈಸಿದರು.

ಮಾಜಿ ಅಧ್ಯಕ್ಷ ಕೆ.ರಾಜೀವ ಶೆಟ್ಟಿ ಪ್ರಸ್ತಾವಿಸಿ, ಹಿಂದೆ ಕರ್ಕುಂಜೆ ಮಂಡಲ ಪಂಚಾಯತ್‌ನಿಂದ ಬೇರ್ಪಟ್ಟು 1994ರಲ್ಲಿ ಈಗಿರುವ ಹಳೆ ಕಟ್ಟಡ ನಿರ್ಮಾಣವಾಗಿತ್ತು. ಗ್ರಾಮಸ್ಥರಿಗೆ ಪಿಡಿಒ, ವಿಎ, ಸದಸ್ಯರು, ಗ್ರಂಥಾಲಯ ಹೀಗೆ ಎಲ್ಲ ಸೇವೆಯೂ ಒಂದೇ ಕಟ್ಟಡದಲ್ಲಿ ಆಗಬೇಕು ಎಂಬ ನಿಟ್ಟಿನಲ್ಲಿ ಹೊಸ ಕಟ್ಟಡ ನಿರ್ಮಿಸಲಾಗಿದೆ. ಹಿಂದೆ ಶಾಸಕ ರಾಗಿದ್ದ ಸುಕುಮಾರ್ ಶೆಟ್ಟಿ 10 ಲಕ್ಷ ರೂ., ಉದ್ಯೋಗ ಖಾತರಿ ಯೋಜನೆಯಡಿ 28 ಲಕ್ಷ ರೂ., ತಾ.ಪಂ. 4 ಲಕ್ಷ ರೂ., ಗ್ರಾ.ಪಂ.ನ 6-7 ಲಕ್ಷ ರೂ. ಹಾಗೂ ಊರಿನ ದಾನಿಗಳ ಸಹಕಾರದೊಂದಿಗೆ ಕಟ್ಟಡ ನಿರ್ಮಾಣವಾಗಿದೆ ಎಂದರು.

ಹಟ್ಟಿಯಂಗಡಿ ಗ್ರಾಪಂ ಅಧ್ಯಕ್ಷೆ ನಾಗರತ್ನ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಕಟ್ಟಡ ನಿರ್ಮಾಣವಾಗು ವಲ್ಲಿ ನೆರವಾದ ಉದ್ಯಮಿ ಕೆ.ಎಂ.ಲಕ್ಷ್ಮಣ, ಎಚ್.ಬಾಲಚಂದ್ರ ಭಟ್, ದಾನಿಗಳಾದ ಮಂಜಯ್ಯ ಶೆಟ್ಟಿ, ಸುರ್ಧೀ ಕುಮಾರ್ ಶೆಟ್ಟಿ, ಸತೀಶ್ ಆಚಾರ್ಯ, ರಾಜೀವ ಶೆಟ್ಟಿ ನಾರ್ಕಳಿ, ಗ್ರಾಪಂ ಪಿಡಿಒ ಮಂಜುನಾಥ ಕವಟೆಕಾರ್ ಅವರನ್ನು ಸನ್ಮಾನಿಸಲಾಯಿತು.

ಗ್ರಾಪಂ ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕುಮಾರ್, ಗ್ರಾಪಂ ಸದಸ್ಯರಾದ ಸಂತೋಷ ಶೆಟ್ಟಿ ತೋಟಬೈಲು, ಅಮೃತಾ ಪಿ.ಭಂಡಾರಿ, ವಿದ್ಯಾಶ್ರೀ, ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಗನಾಥ್ ಮೊದಲಾದವರು ಉಪಸ್ಥಿತರಿದ್ದರು. ಯೋಗೀಶ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X