Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆರ್‌ಎಸ್‌ಎಸ್ ನಿಷೇಧಿಸಬೇಕೆಂಬುದು...

ಆರ್‌ಎಸ್‌ಎಸ್ ನಿಷೇಧಿಸಬೇಕೆಂಬುದು ಪ್ರಜಾಪ್ರಭುತ್ವವಾದಿಗಳ ಧ್ವನಿ: ಸುಂದರ ಮಾಸ್ಟರ್

ವಾರ್ತಾಭಾರತಿವಾರ್ತಾಭಾರತಿ14 Oct 2025 7:01 PM IST
share
ಆರ್‌ಎಸ್‌ಎಸ್ ನಿಷೇಧಿಸಬೇಕೆಂಬುದು ಪ್ರಜಾಪ್ರಭುತ್ವವಾದಿಗಳ ಧ್ವನಿ: ಸುಂದರ ಮಾಸ್ಟರ್

ಉಡುಪಿ, ಅ.14: ಸರಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಹಾಗೂ ಸರಕಾರದ ಅಧೀನ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಿಷೇಧಿಸ ಬೇಕೆಂಬ ಬಿ.ಕೆ.ಹರಿಪ್ರಸಾದ್ ಮತ್ತು ಪ್ರಿಯಾಂಕ ಖರ್ಗೆ ಅವರ ಹೇಳಿಕೆ ನಿಜಕ್ಕೂ ಸ್ವಾಗತಾರ್ಹ. ಒಂದು ನೊಂದಣಿಯೇ ಆಗದ ಸಂಘಟನೆಯ ಭಯೋತ್ಪಾದಕ ಕಾರ್ಯಕ್ರಮಗಳನ್ನು ನಿಷೇಧಿಸಬೇಕು ಎಂಬುದು ಈ ದೇಶದ ಪ್ರಜಾಪ್ರಭುತ್ವವಾದಿಗಳ ಧ್ವನಿಯಾಗಿದೆ ಎಂದು ದ.ಸಂ.ಸ. ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಹೇಳಿದ್ದಾರೆ.

ಸಂವಿಧಾನ ವಿರೋಧಿ, ರಾಷ್ಟ್ರ ಧ್ವಜ ವಿರೋಧಿ, ಸಮಾನತೆ ವಿರೋಧಿ ಆರ್‌ಎಸ್‌ಎಸ್‌ಗೆ ಬೆಂಗಳೂರಿನ ಮುಖ್ಯ ರಸ್ತೆಗಳಲ್ಲಿ ಲಾಠಿ ಹಿಡಿದು ಪಥ ಸಂಚಲನ ಮಾಡಲು ಅನುಮತಿ ಮಾಡಿಕೊಟ್ಟಿರುವುದು ನಾಚಿಕೆಗೇಡಿನ ಸಂಗತಿಯೇ ಸರಿ. ಅಷ್ಟಕ್ಕೂ ನೂರು ವರ್ಷ ತುಂಬಿದ ಆರ್‌ಎಸ್‌ಎಸ್ ಈ ಪ್ರಜಾಪ್ರಭುತ್ವ ದೇಶಕ್ಕಾಗಿ ಮಾಡಿದ ಒಳ್ಳೆಯ ಕೆಲಸವಾದರೂ ಏನು ಎಂದು ಅವರು ಪ್ರಶ್ನಿಸಿದ್ದಾರೆ.

ಈ ಭಾರತ ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಆರ್‌ಎಸ್‌ಎಸ್‌ನ ಪಾತ್ರವೇನು? ಒಬ್ಬನೇ ಒಬ್ಬ ಆರ್‌ಎಸ್‌ಎಸ್ ಧುರೀಣ ಭಾರತದ ಸ್ವಾತಂತ್ಯಕ್ಕಾಗಿ ಪ್ರಾಣ ತೆತ್ತಾ ಉದಾಹರಣೆ ಇದೆಯೇ? ಭಾರತದ ಸ್ವಾತಂತ್ರ್ಯ ಚಳುವಳಿಯ ಸಂಧರ್ಭದಲ್ಲಿ ಬ್ರಿಟೀಷರ ಪರವಾಗಿ ಕೆಲಸ ಮಾಡುತ್ತೇವೆ ಎಂದು ತಪ್ರೋಪ್ಪಿಗೆ ಪತ್ರ ಬರೆದುಕೊಟ್ಟ ಸಂತಾನದವರು ಈಗ ದೇಶ ಭಕ್ತಿಯ, ರಾಷ್ಟ್ರ ಪ್ರೇಮದ ಬುರುಡೆ ಬಿಡುತ್ತಾರೆ. ಅದೂ ಅಲ್ಲದೇ ತಮ್ಮ ಮಕ್ಕಳಿಗೆ ಚಡ್ಡಿ ತೊಡಿಸಿ ಲಾಠಿ ಕೊಡಿಸದ ನಾಯಕರು, ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಓದಿಸುತ್ತಾ ಓಬಿಸಿಗಳಿಗೆ ಚಡ್ಡಿ ಹಾಕಿಸಿ ಲಾಠಿ ಕೊಡಿಸಿ, ಕೇಸು ಹಾಕಿಸಿಕೊಂಡು ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತಿದ್ದಾರೆ.

ದೆಹಲಿಯಲ್ಲಿ ಇರುವ ಹುತಾತ್ಮ ಸ್ಮಾರಕದಲ್ಲಿ ಮುಸ್ಲಿಮರ ಹೆಸರು ಕೆತ್ತಿದೆಯೇ ಹೊರತು ಒಬ್ಬನೇ ಒಬ್ಬ ಆರ್‌ಎಸ್‌ಎಸ್‌ ನವನ ಹೆಸರು ಇಲ್ಲ. ಈ ದೇಶದಲ್ಲಿ ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬಿದ ಪ್ರಯುಕ್ತ ಸರಕಾರಿ ನಾಣ್ಯವನ್ನು ಹೊರತಂದು ಈ ಸರಕಾರ ಈ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟ ಗಾರರಿಗೆ ಅಪಮಾನ ಮಾಡಿದೆ ಎಂದು ಅವರು ಟೀಕಿಸಿದ್ದಾರೆ.

ಸನಾತನ ಧರ್ಮವನ್ನು ಪೋಷಿಸುವ, ಚಾತುರ್ವರ್ಣವನ್ನು ಪ್ರತಿಪಾದಿ ಸುವ, ಅಸಮಾನತೆಯನ್ನು ಎತ್ತಿಹಿಡಿಯುವ, ಬ್ರಾಹ್ಮಣ್ಯವೇ ಶ್ರೇಷ್ಠ ಎಂದು ಘೋಷಿಸುವ ಆರ್‌ಎಸ್‌ಎಸ್ ಎಂದೂ ಈ ದೇಶದ ಬಹುಸಂಖ್ಯಾತರ ಆಶೋತ್ತರ ಗಳನ್ನು ಎತ್ತಿ ಹಿಡಿದ ಉದಾಹರಣೆಗಳಿಲ್ಲ. ಈ ಸಮಾಜದಲ್ಲಿ ತಮ್ಮ ಬ್ರಾಹ್ಮಣ್ಯದ ಮೇಲರಿಮೆಯನ್ನು ಪ್ರತಿಷ್ಠಾಪಿಸಲು ಆರ್‌ಎಸ್‌ಎಸ್ ಶ್ರೂದರ ಕೈಯಿಂದಲೇ ಈ ಕೆಲಸವನ್ನು ನಾಜೂಕಾಗಿ ಮಾಡಿಸುತ್ತಿದೆ. ಬಿಜೆಪಿ ಸರಕಾರದ ಮೂಲಕ ತಮ್ಮ ಅಜೆಂಡಾಗಳನ್ನು ಕಾರ್ಯಗತಗೊಳಿಸುತ್ತಿರುವ ಆರ್‌ಎಸ್‌ಎಸ್ ತೆರೆಯ ಮರೆಯಲ್ಲೇ ಎಲ್ಲಾ ಆಟವನ್ನೂ ಆಡುತ್ತಿದೆ. ಇದನ್ನು ಶೂದ್ರರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X