Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ, ಮಾದಕ...

ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ, ಮಾದಕ ವ್ಯಸನ ವಿರೋಧಿ ಜಾಥಾ

ವಾರ್ತಾಭಾರತಿವಾರ್ತಾಭಾರತಿ16 Oct 2025 8:08 PM IST
share
ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ, ಮಾದಕ ವ್ಯಸನ ವಿರೋಧಿ ಜಾಥಾ

ಉಡುಪಿ, ಅ.16: ಇಂದು ಮಾದಕ ವ್ಯಸನ ಮತ್ತು ಸೈಬರ್ ಕ್ರೈಂ ಇವೆರಡು ಯುವ ಸಮುದಾಯವನ್ನು ಕಾಡುತ್ತಿರುವ ಬಹು ದೊಡ್ಡ ಸಮಸ್ಯೆಗಳಾಗಿವೆ. ಈ ಬಗ್ಗೆ ಅವರಿಗೆ ಅರಿವು ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ. ಈ ಹಿನ್ನೆಲೆ ಯಲ್ಲಿ ಯುಜನೋತ್ಸವ ಮತ್ತು ಮಾದಕ ವ್ಯಸನ ವಿರೋಧಿ ಜಾಥಾ ಉಪಯುಕ್ತ ಕಾರ್ಯಕ್ರಮ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಘಟಕ, ಸಾಂಸ್ಕೃತಿಕ ಸಮಿತಿ, ಉಡುಪಿಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಲಯನ್ಸ್ ಕ್ಲಬ್ ಅಮೃತ್, ನೆಹರು ಯುವ ಕೇಂದ್ರ ಉಡುಪಿ ಹಾಗೂ ನೀಲಾವರದ ಚೈತನ್ಯ ಯುವಕ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ಅಮೃತ ಗಾರ್ಡನ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸಭೆಯ ಅಧ್ಯಕ್ಷತೆಯನ್ನು ಸರಕಾರಿ ಪ್ರ.ದ.ಕಾಲೇಜು ತೆಂಕನಿಡಿಯೂರಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ಗಾಂವ್‌ಕರ್ ವಹಿಸಿದ್ದರು. ಮಾದಕ ವ್ಯಸನ ಮತ್ತು ಸೈಬರ್ ಕ್ರೈಂ ಅಪರಾಧಗಳ ವಿರುದ್ಧ ಆಯೋಜಿಸಲಾಗಿದ್ದ ಜಾಥಾವನ್ನು ರಾಜ್ಯ ರೆಡ್‌ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಉದ್ಘಾಟಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಜಾಥಾ ಮತ್ತು ಯುವಜನೋತ್ಸವದ ಮಹತ್ವವನ್ನು ವಿವರಿಸಿ ದರು. ಕಾರ್ಕಳ ಉಪವಿಭಾಗದ ಸಹಾಯಕ ಪೋಲಿಸ್ ಅಧೀಕ್ಷಕಿ ಡಾ. ಹರ್ಷ ಪ್ರಿಯಂವದಾ ಅವರು ಮಾದಕ ವ್ಯಸನ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿಗಳನ್ನು ನೀಡಿದರು.

ಲಯನ್ಸ್ ಕ್ಲಬ್ ಅಮೃತ್ ಅಧ್ಯಕ್ಷ ಗೋಪಾಲ್ ಅಂಚನ್, ಲಯನ್ಸ್ ಕ್ಲಬ್ ಉಡುಪಿ ಮಿಡ್‌ಟೌನ್ ಅಧ್ಯಕ್ಷ ಪುರುಷೋ ತ್ತಮ, ಚೈತನ್ಯ ಯುವಕ ಮಂಡಲ ನೀಲಾವರ ಇದರ ಅಧ್ಯಕ್ಷರಾದ ಶ್ಯಾಮರಾಯ್ ಆಚಾರ್ಯ, ಗೌರವಾಧ್ಯಕ್ಷ ಹಾಗೂ ಹೋಮ್‌ಗಾರ್ಡ್ ಸೇವೆಗೆ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಮಂಜುನಾಥ ಶೆಟ್ಟಿಗಾರ್, ಸಾಂಸ್ಕೃತಿಕ ಸಂಚಾಲಕ ಕೃಷ್ಣ ಸಾಸ್ತಾನ ಉಪಸ್ಥಿತರಿದ್ದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೆಂಕನಿಡಿಯೂರಿನ ರೆಡ್‌ಕ್ರಾಸ್ ಘಟಕದ ಸಂಚಾಲಕ ಪ್ರೊ.ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬಳಿಕ ಯುವಕರಿಗಾಗಿ ವಿವಿಧ ಸ್ವರ್ಧೆಗಳನ್ನು ಆಯೋಜಿಸಲಾಗಿತ್ತು. ಜಾಥಾದಲ್ಲಿ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈಜಿ. ಖಜಾಂಚಿ ರಮಾದೇವಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X