Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಕ್ಟೋಬರ್ ಅಂತ್ಯಕ್ಕೆ ಮೂರು ಧೂಮಕೇತುಗಳು...

ಅಕ್ಟೋಬರ್ ಅಂತ್ಯಕ್ಕೆ ಮೂರು ಧೂಮಕೇತುಗಳು ಗೋಚರ

ವಾರ್ತಾಭಾರತಿವಾರ್ತಾಭಾರತಿ19 Oct 2025 7:48 PM IST
share
ಅಕ್ಟೋಬರ್ ಅಂತ್ಯಕ್ಕೆ ಮೂರು ಧೂಮಕೇತುಗಳು ಗೋಚರ

ಉಡುಪಿ, ಅ.19: ಅಕ್ಟೋಬರ್ ಅಂತ್ಯಕ್ಕೆ ದೀರ್ಘವೃತ್ತದಲ್ಲಿ ಸೂರ್ಯನನ್ನು ಸುತ್ತು ಹೊಡೆಯುತ್ತಿರುವ ಅವು ಲೆಮೆನ್, ಸ್ವಾನ್ ಹಾಗೂ ಅಟ್ಲಸ್ ಎಂಬ ಮೂರು ಧೂಮಕೇತುಗಳು ಗೋಚರಿಸಲಿವೆ. ಇವುಗಳಲ್ಲಿ ಲೆಮೆನ್ ಧೂಮಕೇತು ಮಾತ್ರ ಬರಿಗಣ್ಣಿಗೆ ಕಾಣಿಸುತ್ತಿದೆ ಎಂದು ಎಂದು ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ಉಡುಪಿ ತಿಳಿಸಿದ್ದಾರೆ.

ಲೆಮೆನ್ ಅ.21ರಂದು ಭೂಮಿಗೆ ಸುಮಾರು 90 ಮಿಲಿಯ ಕಿ.ಮೀ. ಸಮೀಪ ಬಂದು ಸಂಜೆಯ ಕೆಲ ಸಮಯ ಪಶ್ಚಿಮೋತ್ತರ ಆಕಾಶದಲ್ಲಿ ಸಪ್ತಋಷಿ ಆಕಾಶಪುಂಜದ ಬಾಲದಲ್ಲಿರುವ ಮರೀಚಿ ನಕ್ಷತ್ರದ ಪಕ್ಕ ಹಾದು ಸ್ವಾತಿ ನಕ್ಷತ್ರದ ಸಮೀಪ ಕಾಣಿಸಲಿದೆ. ನ.8ರಂದು ಸೂರ್ಯ ಸಮೀಪ ತಲುಪಿ ಹಿಂತಿರುಗುತ್ತದೆ. ಸುಮಾರು 1350 ವರ್ಷಗಳಿಗೊಮ್ಮೆ ಈ ಲೆಮೆನ್ ಧೂಮಕೇತು ಸೂರ್ಯನ ಸಮೀಪ ಬಂದು ಹೋಗುತ್ತಿದೆ.

ಉಳಿದ ಎರಡು ಧೂಮಕೇತುಗಳಲ್ಲಿ ಅಟ್ಲಸ್ ಭಾರೀ ವಿಶೇಷ. ಅದು ಉಳಿದ ಲೆಮನ್ ಹಾಗೂ ಸ್ವಾನ್ ಧೂಮ ಕೇತುಗಳಂತೆ ನಮ್ಮ ಸೌರವ್ಯೆಹದ ಹೊರವಲಯ ಊರ್ಸ್ ಕ್ಲೌಡ್‌ನಿಂದ ಬಂದುದಲ್ಲ. ಈ ಅಟ್ಲಸ್ ನಮ್ಮ ಸೌರವ್ಯೆಹದ ಹೊರಗಿನಿಂದ ಅನಂತ ಆಕಾಶದಿಂದ ಬಂದಿದೆ ಎಂದು ತಿಳಿದಿದೆ. ಅದರ ಅಧ್ಯಯನ ಹೊಸ ಹೊಸ ವಿಚಾರಗಳನ್ನು ಬಹಿರಂಗ ಪಡಿಸಿದೆ. ಅದರಲ್ಲಿರುವ ಖನಿಜಗಳು ವಿಶ್ವ ಸೃಷ್ಟಿಯ ಅಧ್ಯಯನಕ್ಕೆ ಹೊಸ ಆಯಾಮವನ್ನು ಕೊಡುತ್ತಿದೆ.

ಚಂದ್ರನನ್ನ ಬಿಟ್ಟರೆ ರಾತ್ರಿಯ ಆಕಾಶದಲ್ಲಿ ಧೂಮಕೇತುಗಳೇ ಚೆಂದ. ಸೂರ್ಯನ ಸಮೀಪದಲ್ಲಿರುವಾಗ ಉದ್ದುದ್ದ ಬಾಲಬೆಳೆಸಿಕೊಂಡು ಖಗೋಳ ವೀಕ್ಷಕನ ಮನ ಸೂರೆಗೊಳ್ಳುತ್ತವೆ. ಈಗ ಈ ಧೂಮಕೇತುಗಳೂಂದಿಗೆ ಪ್ರತೀವರ್ಷ ಈ ಸಮಯದಲ್ಲಿ ಸಂಭವಿಸುವ ಹ್ಯಾಲಿ ಧೂಮಕೇತುವಿನ ದೂಳಿನ ಉಲ್ಕಾಪಾತ, ಅಮಾವಾಸ್ಯೆಯ ಕತ್ತಲ ಆಕಾಶ ವನ್ನು ರಂಗೇರಿಸಲಿವೆ ಎಂದು ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ಉಡುಪಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X