Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜೂನ್ ಒಳಗೆ ಗ್ಯಾಸ್ ಪೈಪ್‌ಲೈನ್ ಕಾಮಗಾರಿ...

ಜೂನ್ ಒಳಗೆ ಗ್ಯಾಸ್ ಪೈಪ್‌ಲೈನ್ ಕಾಮಗಾರಿ ಮುಗಿಸಲು ಗಡುವು: ಅದಾನಿ ಸಮೂಹ ಸಂಸ್ಥೆಗೆ ಸಂಸದರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ14 May 2026 8:13 PM IST
share
ಜೂನ್ ಒಳಗೆ ಗ್ಯಾಸ್ ಪೈಪ್‌ಲೈನ್ ಕಾಮಗಾರಿ ಮುಗಿಸಲು ಗಡುವು: ಅದಾನಿ ಸಮೂಹ ಸಂಸ್ಥೆಗೆ ಸಂಸದರ ಸೂಚನೆ

ಉಡುಪಿ: ಜಿಲ್ಲೆಯ ಮನೆ ಮನೆಗೆ ಪೈಪ್‌ಲೈನ್ ಮೂಲಕ ಪಿಎನ್‌ಜಿ ಅನಿಲ ಸಂಪರ್ಕ ನೀಡುವ ಕಾಮಗಾರಿಯನ್ನು ಕಳೆದ 10 ವರ್ಷಗಳಿಂದ ಕೈಗೊಳ್ಳಲಾಗುತ್ತಿದೆ. ಆದರೆ ಇದುವರೆಗೂ ಕಾಮಗಾರಿ ಪೂರ್ಣ ಗೊಂಡಿಲ್ಲ. ಮುಂದಿನ ಜೂನ್ ತಿಂಗಳ ಒಳಗೆ ಪೈಪ್‌ಲೈನ್ ಕಾಮಗಾರಿ ಪೂರ್ಣಗೊಳಿಸುವ ಜೊತೆಗೆ ಸಾರ್ವಜನಿಕರಿಗೆ ಗ್ಯಾಸ್ ಸಂಪರ್ಕ ಒದಗಿಸಲು ಮುಂದಾಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಮನೆ ಮನೆಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಸಂಪರ್ಕ ಹಾಗೂ ಮೋಟಾರು ವಾಹನಗಳಿಗೆ ಸಿಎನ್‌ಜಿ ಅನಿಲ ವಿತರಣೆಗೆ ಸಂಬಂಧಿಸಿದಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮನೆ ಮನೆಗೆ ಪೈಪ್‌ಲೈನ್ ಮೂಲಕ ಪಿಎನ್‌ಜಿ ಅನಿಲ ಸಂಪರ್ಕ ಪಡೆಯಲು ಆಸಕ್ತರಿರುವ ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಕುರಿತ ಮಾಹಿತಿಯನ್ನು ಬ್ಯಾನರ್, ಕರಪತ್ರ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚುರ ಪಡಿಸುವಂತೆ ಅವರು ಅನಿಲ ಕಂಪೆನಿ ಪ್ರತಿನಿಧಿಗಳಿಗೆ ಸೂಚಿಸಿದರು.

ಜಿಲ್ಲೆಯ ನಗರಸಭಾ ವ್ಯಾಪ್ತಿಯಲ್ಲಿ ಅಂದಾಜು 35,000 ಮನೆಗಳಿಗೆ ಅನಿಲ ಸರಬರಾಜು ಆಗಬೇಕಾಗಿದ್ದು ಪ್ರಸ್ತುತ 1500 ಮನೆಗಳಿಗೆ ಪೈಪ್ ಲೈನ್ ಸಿದ್ದವಾಗಿರುವುದಾಗಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಪೈಪ್‌ಲೈನ್ ಕಾಮಗಾರಿಯನ್ನು ಶೀಘ್ರವೇ ಮುಕ್ತಾಯಗೊಳಿಸುವ ಮೂಲಕ ಉಡುಪಿ ನಗರದ ಸಾರ್ವಜನಿಕರಿಗೆ ಗ್ಯಾಸ್ ಸಂಪರ್ಕ ಒದಗಿಸಬೇಕು ಎಂದು ಸಂಸದ ಕೋಟ ಸೂಚಿಸಿದರು.

ಜಿಲ್ಲೆಯ ರಿಕ್ಷಾ ಚಾಲಕರು ತಮ್ಮ ಆಟೋಗಳಿಗೆ ಸಿಎನ್‌ಜಿ ಅನಿಲ ಹಾಕಿಸಲು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುತ್ತಿ ರುವುದು ಕಂಡು ಬರುತ್ತಿದೆ. ಜಿಲ್ಲೆಗೆ ಹೆಚ್ಚುವರಿಯಾಗಿ ಸಿಎನ್‌ಜಿ ಗ್ಯಾಸ್ ಸಾಗಾಣಿಕೆ ಮಾಡಲು 4 ಜಂಬೋ ವಾಹನ ವನ್ನು ಒದಗಿಸಿದ್ದಲ್ಲಿ ಸಮಸ್ಯೆ ನಿವಾರಣೆಯಾಗಲಿದೆ. ಈ ಬಗ್ಗೆ ಕ್ರಮವಹಿಸುವಂತೆ ಅವರು ಅನಿಲ ಕಂಪೆನಿಗೆ ತಿಳಿಸಿದರು.

ಪಣಂಬೂರಿನ ಎಟಿಜಿಎಲ್ ಟರ್ಮಿನಲ್‌ವರೆಗೆ ಪೈಪ್‌ಲೈನ್ ಅಳವಡಿಸುವ ಕಾರ್ಯ ಈ ತಿಂಗಳ ಕೊನೆಯ ವೇಳೆಗೆ ಪೂರ್ಣಗೊಳ್ಳಲಿದ್ದು ನಂತರ, ಲೈನ್ ಚಾರ್ಜ್ ಮಾಡಲು ಅನುಮೋದನೆಗಾಗಿ ಪೆಸ್ಸೋಗೆ ಅರ್ಜಿಯನ್ನು ಸಲ್ಲಿಸಲಾ ಗುತ್ತದೆ. ಪೆಸ್ಸೋ ಅನುಮತಿ ಪಡೆದ ನಂತರ, ಎಟಿಜಿಎಲ್ ಸಿದ್ಧತೆಗೆ ಒಳಪಟ್ಟು ಅನಿಲದ ಪೂರೈಕೆಯನ್ನು ಪ್ರಾರಂಭಿ ಸಬಹುದು ಎಂದು ಗೇಲ್ ಸಂಸ್ಥೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಪ್ರಸ್ತುತ 11 ಸಿಎನ್‌ಜಿ ವಿತರಣಾ ಘಟಕವಿದ್ದು ಹೊಸದಾಗಿ ಮುನಿಯಾಲು, ಎರ್ಮಾಳು ಪ್ರದೇಶದಲ್ಲಿ ಹೊಸ ಸಿಎನ್‌ಜಿ ವಿತರಣಾ ಘಟಕ ಮಂಜೂರು ಮಾಡಲು ಪತ್ರ ಬರೆದಿರುವುದಾಗಿ ಸಂಸದರು ತಿಳಿಸಿದರು.

ಪ್ರಸ್ತುತ ಸಮಾರಂಭಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ಅನುಗುಣ ವಾಗಿ ಸಿಎನ್‌ಜಿ ಗ್ಯಾಸ್ ಪೂರೈಕೆಗೆ ಈಗಿರುವ 17 ಟ್ರಕ್‌ಗಿಂತ ಹೆಚ್ಚು ವಾಹನ ನೀಡಬೇಕೆಂದು ಸಿಎನ್‌ಜಿ ಗ್ಯಾಸ್ ವಿತರಕರು ಸಭೆಯ ಗಮನಕ್ಕೆ ತಂದರು, ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು ಅದಾನಿ ಮತ್ತು ಗೇಲ್ ಕಂಪೆನಿಯವರು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸುವಂತೆ, ಜಿಲ್ಲೆಗೆ 10 ಹೆಚ್ಚುವರಿ ಲೋಡ್‌ಗಳ ಸಿಎನ್‌ಜಿ ಒದಗಿಸಲು ಕ್ರಮ ವಹಿಸುವಂತೆ ಹಾಗೂ ಇಂಧನವನ್ನು ಲೋಡ್ ಮಾಡುವಾಗ ನಿಯಮ ಪಾಲಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಅನಿಲ ಘಟಕದಲ್ಲಿ ಏನಾದರೂ ಸಮಸ್ಯೆ ಉದ್ಭವಿಸಿದಾಗ ಪರಿಹರಿಸಲು ತಂತ್ರಜ್ಞರ ಕೊರತೆಯಿದ್ದು, ಹೆಚ್ಚುವರಿಯಾಗಿ ಸಿಎನ್‌ಜಿ ಆಪರೇಟರ್‌ಗಳನ್ನು ನೇಮಕ ಗೊಳಿಸುವಂತೆ ಅನಿಲ ಕಂಪೆನಿಗಳ ಪ್ರತಿನಿಧಿಗಳಿಗೆ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ರವೀಂದ್ರ, ಅದಾನಿ ಹಾಗೂ ಗೇಲ್ ಕಂಪೆನಿಗಳ ಅಧಿಕಾರಿಗಳು ಸಿಎನ್‌ಜಿ ವಿತರಣಾ ಬಂಕ್‌ಗಳ ಮಾಲಕರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X