ಪ್ರಮೋದ್ ಮಧ್ವರಾಜ್ ನಾಮನಿರ್ದೇಶನ

ಉಡುಪಿ, ಮೇ 18: ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜನ್ಮವಾರ್ಷಿಕೋತ್ಸವವನ್ನು ಸ್ಮರಿಸುವ ಉದ್ದೇಶದಿಂದ ಭಾರತ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಸದಸ್ಯರಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಈ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಅವಕಾಶ ದೊರೆತಿರುವುದು ನನಗೆ ಹೆಮ್ಮೆಯ ಸಂಗತಿಯಷ್ಟೇ ಅಲ್ಲದೆ, ಅವರ ಚಿಂತನೆಗಳು ಹಾಗೂ ಆದರ್ಶಗಳನ್ನು ಸಮಾಜದ ವಿವಿಧ ವರ್ಗಗಳಿಗೆ ಮತ್ತಷ್ಟು ಪರಿಣಾಮಕಾರಿ ಯಾಗಿ ತಲುಪಿಸುವ ಬದ್ಧತೆಯಾಗಿದೆ. ಈ ಅವಕಾಶವನ್ನು ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಸಂಸ್ಕೃತಿ ಸಚಿವಾಲಯಕ್ಕೆ ಹೃತ್ಪೂರ್ವಕ ಕೃತಜ್ಞತೆಗಳು ಎಂದು ಪ್ರಮೋದ್ ಮಧ್ವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




