Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಂಗಾರು ಋತುವಿನಲ್ಲಿ ಕೊಂಕಣ ರೈಲ್ವೆ:...

ಮುಂಗಾರು ಋತುವಿನಲ್ಲಿ ಕೊಂಕಣ ರೈಲ್ವೆ: ಪ್ರಯಾಣಿಕರ ಸುರಕ್ಷತೆಯೊಂದಿಗೆ ಸಮಯ ಪಾಲನೆಗೆ ಆದ್ಯತೆ

ವಾರ್ತಾಭಾರತಿವಾರ್ತಾಭಾರತಿ20 May 2026 8:27 PM IST
share
ಮುಂಗಾರು ಋತುವಿನಲ್ಲಿ ಕೊಂಕಣ ರೈಲ್ವೆ: ಪ್ರಯಾಣಿಕರ ಸುರಕ್ಷತೆಯೊಂದಿಗೆ ಸಮಯ ಪಾಲನೆಗೆ ಆದ್ಯತೆ

ಉಡುಪಿ, ಮೇ 20: ಪಶ್ಚಿಮ ಘಟ್ಟದ ದುರ್ಗಮ ಹಾದಿಯಲ್ಲಿ ಸಾಗುವ ಕೊಂಕಣ ರೈಲ್ವೆ ಮಾರ್ಗದಲ್ಲಿ ಸಾಗುವ ರೈಲುಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಅತಿ ಹೆಚ್ಚಿನ ಪ್ರಾಶಸ್ತ್ಯ ನೀಡುವ ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿ. (ಕೆಆರ್‌ಸಿಎಲ್) ಈ ಬಾರಿಯ ಮಳೆಗಾಲದಲ್ಲಿ ಸಮಯದ ಪರಿಪಾಲನೆಗೂ ಹೆಚ್ಚಿನ ಆದ್ಯತೆಯನ್ನು ನೀಡಲಿದೆ. ಇದಕ್ಕಾಗಿ ಮುಂಗಾರು ಪೂರ್ವ ರೈಲ್ವೆ ಹಳಿಗಳ ತೀವ್ರ ಪರಿಶೀಲನೆ ನಡೆಯುತ್ತಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಪಶ್ಚಿಮ ಕರಾವಳಿಯ ಪ್ರಾಕೃತಿಕ ಸೌಂದರ್ಯದ ಆದರೆ ಸವಾಲಿನ ಪರಿಸರದಲ್ಲಿ ಒಂದೇ ಹಳಿ ವ್ಯವಸ್ಥೆಯನ್ನು ಹೊಂದಿರುವ ಈ ಮಾರ್ಗದಲ್ಲಿ ಸಂಚರಿಸುವ ರೈಲಿನ ಸಾಮರ್ಥ್ಯವನ್ನು ಗರಿಷ್ಠ ಮಟ್ಟದಲ್ಲಿ ಬಳಸಿಕೊಳ್ಳಲಾ ಗುತ್ತಿದೆ. ಬೆಟ್ಟ-ಗುಡ್ಡ, ಏರು ತಗ್ಗುಗಳಿರುವ ಗರಿಷ್ಠ ಪ್ರಮಾಣದಲ್ಲಿ ಮಳೆ ಬೀಳುವ ಈ ಮಾರ್ಗದಲ್ಲಿ ರೈಲು ಹಾದು ಹೋಗುವು ದರಿಂದ ಮುಂಬರುವ ಮುಂಗಾರು ಋತುವಿನ ಹಿನ್ನೆಲೆಯಲ್ಲಿ ವಿಶೇಷ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲಭೂತ ಸೌಕರ್ಯಗಳ ಉನ್ನತೀಕರಣ ಕಾರ್ಯದ ಭಾಗವಾಗಿ ರೈಲು ಹಳಿಗಳ ಸುರಕ್ಷತೆ ಮತ್ತು ವಿಶ್ವಾಸಾರ್ಹ ತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವ ಮುಂಗಾರು ತಪಾಸಣೆ ಹಾಗೂ ಇಂಜಿನಿಯರಿಂಗ್ ನಿರ್ವಹಣಾ ಕಾರ್ಯ ಗಳು ಈಗ ಭರದಿಂದ ಸಾಗುತ್ತಿವೆ. ಇವುಗಳಲ್ಲಿ ಹಳಿಗಳ ಸಮೀಪದ ಮರದ ಗೆಲ್ಲುಗಳ ಕಡಿಯುವಿಕೆ, ಬಿಎಲ್ಟಿ ದುರಸ್ತಿ, ಹಳಿಗಳ ಎತ್ತರ ಏರಿಸುವಿಕೆ, ರೈಲ್ವೆ ಹಳಿಗಳ ತೀವ್ರ ಪರಿಶೀಲನೆ, ಬದಲಿ ಹಳಿಗಳ ಅಳವಡಿಕೆ ಹಾಗೂ ಅವುಗಳ ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿಗಳು ಸೇರಿವೆ. ಈ ಕಾರ್ಯಗಳು ರೈಲು ಹಳಿಗಳ ಬಲಿಷ್ಠತೆಯನ್ನು ಕಾಪಾಡುವುದರ ಜೊತೆಗೆ ಪ್ರಯಾಣಿಕರ ಸುರಕ್ಷತೆ ಮತ್ತು ಆರಾಮದಾಯಕ ಪ್ರಯಾಣಕ್ಕೆ ಸಹಕಾರಿಯಾಗಲಿವೆ.

ಈ ಎಲ್ಲಾ ಕಾಮಗಾರಿಗಳನ್ನು ಸುರಕ್ಷಿತವಾಗಿ ನಡೆಸುವ ದೃಷ್ಟಿಯಿಂದ ಕೆಲವು ಪ್ರದೇಶಗಳಲ್ಲಿ ರೈಲುಗಳ ವೇಗವನ್ನು ತಾತ್ಕಾಲಿಕವಾಗಿ ಕಡಿತಗೊಳಿಸಲಾಗಿದೆ. ಇದರಿಂದಾಗಿ ಕೆಲವೊಂದು ತಡೆಗಳ ಕಾರಣದಿಂದ ರೈಲುಗಳ ವೇಳಾ ಪಟ್ಟಿಯಲ್ಲಿ ಸಣ್ಣ ಪ್ರಮಾಣದ ವಿಳಂಬ, ಕೆಲವು ಗಂಟೆ ರೈಲುಗಳ ತಡೆಯೂ ಇರುವ ಸಾಧ್ಯತೆಯಿದೆ. ಆದರೆ ಈ ಕ್ರಮಗಳು ದೀರ್ಘಕಾಲೀನ ಸುರಕ್ಷತೆ ಮತ್ತು ಕಾರ್ಯಾಚರಣಾ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆ ಎಂದು ಕೆಆರ್‌ಸಿಎಲ್ ಸ್ಪಷ್ಟಪಡಿಸಿದೆ.

ಮುಂಗಾರು ಪೂರ್ವ ನಿರ್ವಹಣಾ ಚಟುವಟಿಕೆಗಳು ಮೇ ತಿಂಗಳ ಕೊನೆಯ ಒಳಗೆ ಮುಕ್ತಾಯಗೊಳ್ಳುವ ನಿರೀಕ್ಷೆ ಇದ್ದು, ಇದರ ಬಳಿಕ ರೈಲುಗಳ ಸಂಚಾರದ ವೇಳಾಪಟ್ಟಿಯಲ್ಲಿ ಹಾಗೂ ಸಮಯಪಾಲನೆಯಲ್ಲಿ ಗಮನಾರ್ಹ ಪ್ರಮಾಣದ ಸುಧಾರಣೆ ಕಂಡುಬರುವ ನಿರೀಕ್ಷೆ ಇದೆ.

ರೈಲುಗಳ ಸಂಚಾರವನ್ನು ಸಮರ್ಥವಾಗಿ ನಿರ್ವಹಿಸಲು ಕೆಆರ್‌ಸಿಎಲ್ ಬಲಿಷ್ಠ ಮೇಲ್ವಿಚಾರಣಾ ವ್ಯವಸ್ಥೆ ಮತ್ತು ಸಮನ್ವಯದ ಕ್ರಮಗಳನ್ನು ಕೊಂಕಣ ರೈಲ್ವೆ ಅನುಸರಿಸುತ್ತಿದೆ. ಪಾರದರ್ಶಕವಾದ ವೇಳಾಪಟ್ಟಿ ಹಾಗೂ ನಿರಂತರ ಎಚ್ಚರಿಕೆ ಮೂಲಕ ಏಕ ಹಳಿ ಮಾರ್ಗದ ವ್ಯವಸ್ಥೆಯಲ್ಲಿಯೂ ಕನಿಷ್ಠ ವಿಳಂಬವನ್ನು ಖಚಿತ ಪಡಿಸಲಾಗುತ್ತಿದೆ.

ಪ್ರಯಾಣದ ವೇಳೆ ಕೊಂಕಣ ರೈಲ್ವೆ ಪ್ರಯಾಣಿಕರಿಗೆ ನಿರಂತರವಾಗಿ ಅಪ್‌ಡೇಟ್‌ಗಳನ್ನು ನೀಡಲಾಗುತ್ತದೆ. ರೈಲು ಗಳ ವೇಳಾಪಟ್ಟಿ, ನಿಲ್ದಾಣದ ವಿವಿಧ ಪ್ರಕಟಣೆಗಳು, ನಿಲ್ದಾಣದಲ್ಲಿ ಎಲೆಕ್ಟ್ರಾನಿಕ್ ಡಿಸ್ಪ್ಲೇಗಳು, ಅಧಿಕೃತ ರೈಲ್ವೆ ವೆಬ್‌ಸೈಟ್‌ಗಳು ಹಾಗೂ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಪ್ರಯಾಣಿಕರಿಗೆ ನಿಯಮಿತ ಮಾಹಿತಿ ನೀಡಲಾಗು ತ್ತಿದೆ. ಪ್ರಯಾಣಿಕರಿಗೆ ಸುರಕ್ಷಿತ, ಆರಾಮದಾಯಕ ಹಾಗೂ ವಿಶ್ವಾಸಾರ್ಹ ಸೇವೆ ನೀಡುವ ಬದ್ಧತೆಯನ್ನು ಕೊಂಕಣ ರೈಲ್ವೆ ಮತ್ತೊಮ್ಮೆ ಪುನರುಚ್ಚರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X