Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಆರೋಪ:...

ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಆರೋಪ: ಹೆಬ್ರಿ ತಾಲೂಕು ಕಚೇರಿ ಎದುರು ಸಾರ್ವಜನಿಕರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ26 May 2026 8:10 PM IST
share
ಸಾರ್ವಜನಿಕರ ಕೆಲಸಗಳಿಗೆ ವಿಳಂಬ ಆರೋಪ: ಹೆಬ್ರಿ ತಾಲೂಕು ಕಚೇರಿ ಎದುರು ಸಾರ್ವಜನಿಕರ ಪ್ರತಿಭಟನೆ

ಹೆಬ್ರಿ, ಮೇ 26: ಸಾರ್ವಜನಿಕರ ಕೆಲಸಗಳ ಕುರಿತಂತೆ ಅಸಡ್ಡೆ ಹಾಗೂ ವಿಳಂಬ ಧೋರಣೆ ಅನುಸರಿಸುತ್ತಿರುವ ತಾಲೂಕು ಕಚೇರಿ ಅಧಿಕಾರಿಗಳ ವಿರುದ್ಧ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಟ್ರಸ್ಟ್ ವತಿಯಿಂದ ಹೆಬ್ರಿಯ ಸಾರ್ವಜನಿಕರು ಸಾಮಾಜಿಕ ಹೋರಾಟಗಾರ ನೀರೆ ಕೃಷ್ಣ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಹೆಬ್ರಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ಅಧ್ಯಕ್ಷರೂ ಆದ ನೀರೆ ಕೃಷ್ಣ ಶೆಟ್ಟಿ, ನಾವು ನಿರಂತರ ಹೋರಾಟ ಮಾಡಿ ಹೆಬ್ರಿಯನ್ನು ತಾಲೂಕು ಮಾಡಿಸಿದ್ದೇವೆ. ಆದರೆ ಈಗ ಅದೇ ನಮ್ಮ ತಾಲೂಕಿನಲ್ಲಿ ನಮ್ಮ ಜನರ ಕೆಲಸಗಳಿಗೆ ಅಲೆದಾಡಬೇಕಾಗಿದೆ. ಕೆಳಹಂತದ ಅಧಿಕಾರಿಗಳು ಮತ್ತು ನೌಕರರು ಸಾರ್ವಜನಿಕರನ್ನು ನಿರ್ಲಕ್ಷ್ಯ ಮಾಡಿ ಕಚೇರಿ ಕೆಲಸಗಳಿಗೆ ಅಲೆದಾಡಿಸಿ ವಿಳಂಬ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆಬ್ರಿ ತಾಲೂಕು ಕಚೇರಿಯಲ್ಲಿ ಜನತೆಗೆ ಸಿಗುವ ಸೌಲಭ್ಯಗಳನ್ನು ಆದ್ಯತೆ ಯಲ್ಲಿ ನೀಡಿ, ಜನರ ಕಡತಗಳನ್ನು ವಿಲೇವಾರಿ ಮಾಡಿ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ಕಾರ್ಯವನ್ನು ಕೂಡಲೇ ಮುಗಿಸಿದಾಗ ಅಕ್ರಮ-ಸಕ್ರಮ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ಒತ್ತಾಯಿಸಿದರು.

ಕಚೇರಿಯಲ್ಲಿ ನೌಕರರ ಅಸಹಕಾರದಿಂದ ತಾಲೂಕು ಆಡಳಿತಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸಿಬ್ಬಂದಿಗಳು ಜನರಿಗಾಗಿ ಕೆಲಸ ಮಾಡಿ. ಜನರನ್ನು ಕಚೇರಿಗೆ ಅಲೆದಾಡಿಸದೇ, ಕೆಲಸಗಳನ್ನು ಶೀಘ್ರವಾಗಿ ಮಾಡಿಸಿಕೊಡಿ ಎಂದು ನೀರೆ ಕೃಷ್ಣ ಶೆಟ್ಟಿ ಹೇಳಿದರು.

ಅಕ್ರಮ-ಸಕ್ರಮ ಸಮಿತಿಯ ಸದಸ್ಯ ನವೀನ್ ಕೆ ಅಡ್ಯಂತಾಯ ಮಾತನಾಡಿ, ಕೂಡಲೇ ಅಕ್ರಮ-ಸಕ್ರಮ ಸಮಿತಿಯ ಮೀಟಿಂಗ್ ನಡೆಸಿ ಹಕ್ಕುಪತ್ರಗಳನ್ನು ನೀಡಲು ಬಾಕಿಯಿರುವ ಅರ್ಜಿಗಳನ್ನು ವಿಲೇವಾರಿ ಎಂದು ಒತ್ತಾಯಿಸಿದರು.

ಹೆಬ್ರಿ ಬಿಜೆಪಿ ಶಕ್ತಿಕೇಂದ್ರವು ಪ್ರತಿಭಟನೆಗೆ ಬೆಂಬಲ ನೀಡಿತ್ತು. ಪ್ರತಿಭಟನೆಯ ಸಮಯದಲ್ಲಿ ಅರ್ಜಿ ಹಿಡಿದುಕೊಂಡು ಬಂದ ಹಲವರನ್ನು ತಹಶೀಲ್ಧಾರ್ ಎಸ್.ಎ.ಪ್ರಸಾದ್ ತನ್ನ ಕೊಠಡಿಗೆ ಕರೆದೊಯ್ದು ಅಧಿಕಾರಿ ಗಳನ್ನು ಕರೆಸಿಕೊಂಡು ಸಮಸ್ಯೆಗಳನ್ನು ಬಗೆಹರಿಸಿಕೊಟ್ಟರು.

ಗುರಿ ನಿಗದಿ ಮಾಡಿಕೊಂಡು ಎಲ್ಲಾ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವುದು, ಜನರ ಕೆಲಸಗಳಿಗೆ ನಿರ್ಲಕ್ಷ್ಯ ಮಾಡದಂತೆ ತಹಶೀಲ್ಧಾರ್ ಪ್ರಸಾದ್, ಕೆಳಹಂತದ ಅಧಿಕಾರಿಗಳು ಹಾಗೂ ಸಿಬಂದಿಗಳಿಗೆ ಸೂಚಿಸಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಕರ್ತವ್ಯ ಮಾಡುವಂತೆ ಸೂಚಿಸಿದರು.

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಟ್ರಸ್ಟ್ ಪದಾಧಿಕಾರಿಗಳು, ಮುಖಂಡರಾದ ಹೆಬ್ರಿ ಪ್ರವೀಣ್ ಬಲ್ಲಾಳ್, ವಾದಿರಾಜ ಶೆಟ್ಟಿ, ವರಂಗ ಲಕ್ಷ್ಮಣ ಆಚಾರ್, ಕಿರಣ್ ತೋಳಾರ್, ಭೋಜ ಕುಲಾಲ್, ಎಚ್. ಜನಾರ್ಧನ್, ಅಣ್ಣಪ್ಪ ಕುಲಾಲ್, ಮುರ್ಸಾಲು ಮೋಹನದಾಸ ನಾಯಕ್, ಶಶಿಕಲಾ ಡಿ.ಪೂಜಾರಿ ಮುದ್ರಾಡಿ, ಸಂತೋಷ ನಾಯಕ್ ಕನ್ಯಾನ, ನಿತೀಶ್ ಎಸ್ ಪಿ, ಹರೀಶ ಶೆಟ್ಟಿ ನಾಡ್ಪಾಲು, ಬಿಜೆಪಿ ಹೆಬ್ರಿ ಶಕ್ತಿಕೇಂದ್ರದ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯಕ್, ಕಾರ್ಕಳ ಮಂಡಲದ ಪ್ರಧಾನ ಕಾರ್ಯದರ್ಶಿ ಶಿವಪುರ ಸುರೇಶ ಶೆಟ್ಟಿ, ಬಿಜೆಪಿ ಪ್ರಮುಖರಾದ ಜ್ಯೋತಿ ಹರೀಶ ಪೂಜಾರಿ, ಅಮೃತ್ ಕುಮಾರ್ ಶೆಟ್ಟಿ, ಸಿ.ಎಂ.ಪ್ರಸನ್ನ ಕುಮಾರ್ ಶೆಟ್ಟಿ, ಸುಧಾಕರ ಹೆಗ್ಡೆ, ರಮೇಶ ಕುಮಾರ್ ಶಿವಪುರ ಸೇರಿದಂತೆ ವಿವಿಧ ಪ್ರಮುಖರು, ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ಆದ್ಯತೆಯಲ್ಲಿ ಜನರ ಕೆಲಸ ಮಾಡುತ್ತಿದ್ದೇವೆ: ತಹಶೀಲ್ಧಾರ್

ಹೆಬ್ರಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆಯ ನಡುವೆಯೂ ಇರುವ ಅಧಿಕಾರಿ, ನೌಕರರ ಮೂಲಕ ಜನರ ಕೆಲಸಗಳನ್ನು ಮಾಡಿಕೊಡುತ್ತಿದ್ದೇವೆ. ಅರ್ಹ ಅರ್ಜಿಗಳನ್ನು ಹಂತಹಂತವಾಗಿ ವಿಲೇವಾರಿ ಮಾಡುತ್ತಿದ್ದೇವೆ. ಸರಕಾರ ಗುರಿ ನಿಗದಿ ಪಡಿಸಿದ ಎಲ್ಲಾ ಕೆಲಸಗಳ ನಡುವೆಯೂ ಡೀಮ್ಡ್ ಫಾರೆಸ್ಟ್ ಜಂಟಿ ಸರ್ವೆ ಕಾರ್ಯವನ್ನು ನಡೆಸುತ್ತಿದ್ದೇವೆ. ಅದು ಕೂಡ ಶೀಘ್ರವಾಗಿ ಮುಕ್ತಾಯ ಗೊಳ್ಳಲಿದೆ. ಜನರ ಕೆಲಸಗಳಿಗೆ ಯಾವುದೇ ವಿಳಂಬ ಮಾಡುತ್ತಿಲ್ಲ ಎಂದು ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ ಹೆಬ್ರಿ ತಹಶೀಲ್ಧಾರ್ ಎಸ್.ಎ.ಪ್ರಸಾದ್ ಹೇಳಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X