ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜೂ.4: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಡಾ.ಬಿ.ಆರ್ ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ನಾರಾಯಣಗುರು ವಸತಿ ಶಾಲೆ ಗಳಲ್ಲಿ ಪ್ರಸಕ್ತ ಸಾಲಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವವರೆಗೆ ಅಥವಾ ಖಾಯಂ ಶಿಕ್ಷಕರು / ಉಪನ್ಯಾಸಕರು ವರ್ಗಾವಣೆ / ನಿಯೋಜನೆ ಆದೇಶದ ಮೇರೆಗೆ ಹಾಜರಾಗುವವರೆಗೆ ಅಥವಾ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಅರ್ಹ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬ್ರಹ್ಮಾವರದ ಆರೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗಣಿತ ಶಿಕ್ಷಕರ ಹುದ್ದೆ, ಬೈಂದೂರಿನ ಹೆರಂಜಾಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ, ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಾರ್ಕಳದ ಅಜೆಕಾರು ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ.
ಪಟ್ಲ ಹಿರೇಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಗಣಿತ, ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಶಂಕರನಾರಾಯಣ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಕಳತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಶಿಕ್ಷಕರ ಹುದ್ದೆ, ಸಿದ್ಧಾಪುರ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಖಾಲಿ ಇರುವ ಹಿಂದಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ, ಯಡಾಡಿ-ಮತ್ಯಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಕನ್ನಡ ಹಾಗೂ ವಿಜ್ಞಾನ ಶಿಕ್ಷಕರ ಹುದ್ದೆ ಮತ್ತು ಕಾರ್ಕಳದ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಆಯಾ ವಿಷಯದಲ್ಲಿ ಬಿ.ಎಸ್ಸಿ ಬಿ.ಎಡ್, ಬಿ.ಎ ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಜೂನ್ 6ರ ಒಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಗಳ ಪ್ರಾಂಶುಪಾಲರ ಮೊಬೈಲ್ ಸಂಖ್ಯೆ: ಆರೂರು ಮೊ.ನಂ: 8277894199, ಹೆರಂಜಾಲು ಮೊ.ನಂ: 9480461537, ವಡ್ಡರ್ಸೆ ಮೊ.ನಂ: 8867415291, ಅಜೆಕಾರು ಮೊ.ನಂ: 9743335673, ಹಿರೇಬೆಟ್ಟು ಪಟ್ಲ ಮೊ.ನಂ:8970298710, ಶಂಕರನಾರಾಯಣ ಮೊ.ನಂ: 6363120177, ಕಳತ್ತೂರು ಮೊ.ನಂ:9535225409,ಸಿದ್ಧಾಪುರ ಮೊ.ನಂ: 9482487266, ಯಡಾಡಿ-ಮತ್ಯಾಡಿ ಮೊ.ನಂ: 9901519126 ಹಾಗೂ ಮಿಯ್ಯಾರು ಮೊ.ನಂ: 9739790298 ಅನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.






