ಮಲಬಾರ್ ಗೋಲ್ಡ್ನಿಂದ ವಿಶ್ವ ಪರಿಸರ ದಿನಾಚರಣೆ

ಉಡುಪಿ, ಜೂ.5: ಉಡುಪಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಹಕರಾದ ಬೇಬಿ ಆರ್. ಭಂಡಾರಿ, ಸುಮಿತ್ರ ಎ.ಶೆಟ್ಟಿ ಅವರಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ಡಿ., ವ್ಯವಸ್ಥಾಪಕ ಪುರಂದರ ತಿಂಗಳಾಯ, ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ, ಸಂದೀಪ್ ಸಪಾಳ್ಯ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಉಡುಪಿ ವಲಯ ಅರಣ್ಯ ಅಧಿಕಾರಿ ವಾರಿಜಾಕ್ಷಿ, ಅರಣ್ಯ ಇಲಾಖೆ ಕಾರ್ಕಳ ಅಧೀಕ್ಷಕ ಅರುಣ್ ಕುಮಾರ್ ಜತ್ತನ್ ಸಹಕರಿಸಿದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Next Story




